AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಪ್ರಕರಣ: ಸಿಕ್ಕಿಬಿದ್ದ ಅಪ್ರಾಪ್ತ ವಿದ್ಯಾರ್ಥಿ, ಚುರುಕುಗೊಂಡ ತನಿಖೆ

ರಾಜಾಜಿನಗರದ ಎನ್​ಪಿಎಸ್ ಶಾಲೆಗೆ ನಿನ್ನೆ(ಜ.6) ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಇದೀಗ ಬೇರೆ ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯಿಂದ ಸಂದೇಶ ರವಾನೆಯಾಗಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಪ್ರಕರಣ: ಸಿಕ್ಕಿಬಿದ್ದ ಅಪ್ರಾಪ್ತ ವಿದ್ಯಾರ್ಥಿ, ಚುರುಕುಗೊಂಡ ತನಿಖೆ
ಎನ್​ಪಿಎಸ್ ಸ್ಕೂಲ್​
TV9 Web
| Edited By: |

Updated on: Jan 07, 2023 | 12:33 PM

Share

ಬೆಂಗಳೂರು: ರಾಜಾಜಿನಗರದ ಎನ್​ಪಿಎಸ್ ಶಾಲೆಗೆ ನಿನ್ನೆ(ಜ.6) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು, ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೀಗ ಬೇರೆ ಶಾಲೆಯ ವಿದ್ಯಾರ್ಥಿ ಗೂಗಲ್​ ಮೂಲಕ ಎನ್​ಎಎಫ್​ಎಲ್​ ಶಾಲೆಯ ಐಡಿಯನ್ನ ಪಡೆದು ಇ-ಮೇಲ್ ಮೂಲಕ​ ಬೆದರಿಕೆ ಸಂದೇಶ ರವಾನಿಸಿರುವ ಅಂಶ ಪತ್ತೆಯಾಗಿದೆ. ಯಾಕೆ ಬೆದರಿಕೆ ಸಂದೇಶ ಕಳುಹಿಸಿದ್ದ ಎಂಬುದರ ಬಗ್ಗೆ ಬಸವೇಶ್ವರನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಶಾಲೆ ಆವರಣದಲ್ಲಿ 4 ಜಿಲೆಟಿನ್ ಕಡ್ಡಿ ಇಟ್ಟಿರುವುದಾಗಿ ಇ-ಮೇಲ್ ಮಾಡಿದ್ದ ವಿದ್ಯಾರ್ಥಿ, ಬೆಳಗ್ಗೆ 11.30 ಕ್ಕೆ ಮೇಲ್ ನೋಡಿದ ಶಾಲೆ ಸಿಬ್ಬಂದಿ‌, ತಕ್ಷಣ ಬಸವೇಶ್ವರನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೇ ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ಶಾಲೆಯಲ್ಲಿ ಪರಿಶೀಲನೆ ನಡೆಸಿ, ತಪಾಸಣೆ ನಂತರ ಹುಸಿ ಬೆದರಿಕೆ ಇ-ಮೇಲ್​ ಎಂಬುದು ದೃಢವಾಗಿದ್ದು, ಈ ಬಗ್ಗೆ ಪಶ್ಚಿಮ ವಿಭಾಗ ಪೊಲೀಸರು ತನಿಖೆ ಮುಂದುವರಿಸಿದ್ದರು.

ಇದನ್ನೂ ಓದಿ:Bomb Threat ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ: ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡು, ಮಕ್ಕಳು ಸುರಕ್ಷಿತ ಸ್ಥಳಕ್ಕೆ

ಬೆಂಗಳೂರಿನಲ್ಲಿ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮಾಲೀಕತ್ವದ ಬೆಂಗಳೂರಿನ ಆರ್‌ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಪೊಲೀಸರ ತನಿಖೆ ವೇಳೆ ಅದೇ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿ ಬೆದರಿಕೆ ಮೇಲ್ ಕಳುಹಿಸಿದ್ದ ಎಂಬುದು ಗೊತ್ತಾಗಿತ್ತು. ಮೇಲ್ ಬಂದ ಐಪಿ ಅಡ್ರೆಸ್ ಜಾಡು ಹಿಡಿದು ವಿದ್ಯಾರ್ಥಿಯ ಕಿಡಿಗೇಡಿತನವನ್ನು ಪೊಲೀಸರು ಪತ್ತೆ ಮಾಡಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ