AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಪ್ರಕರಣ: ಸಿಕ್ಕಿಬಿದ್ದ ಅಪ್ರಾಪ್ತ ವಿದ್ಯಾರ್ಥಿ, ಚುರುಕುಗೊಂಡ ತನಿಖೆ

ರಾಜಾಜಿನಗರದ ಎನ್​ಪಿಎಸ್ ಶಾಲೆಗೆ ನಿನ್ನೆ(ಜ.6) ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಇದೀಗ ಬೇರೆ ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯಿಂದ ಸಂದೇಶ ರವಾನೆಯಾಗಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಪ್ರಕರಣ: ಸಿಕ್ಕಿಬಿದ್ದ ಅಪ್ರಾಪ್ತ ವಿದ್ಯಾರ್ಥಿ, ಚುರುಕುಗೊಂಡ ತನಿಖೆ
ಎನ್​ಪಿಎಸ್ ಸ್ಕೂಲ್​
TV9 Web
| Edited By: |

Updated on: Jan 07, 2023 | 12:33 PM

Share

ಬೆಂಗಳೂರು: ರಾಜಾಜಿನಗರದ ಎನ್​ಪಿಎಸ್ ಶಾಲೆಗೆ ನಿನ್ನೆ(ಜ.6) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು, ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೀಗ ಬೇರೆ ಶಾಲೆಯ ವಿದ್ಯಾರ್ಥಿ ಗೂಗಲ್​ ಮೂಲಕ ಎನ್​ಎಎಫ್​ಎಲ್​ ಶಾಲೆಯ ಐಡಿಯನ್ನ ಪಡೆದು ಇ-ಮೇಲ್ ಮೂಲಕ​ ಬೆದರಿಕೆ ಸಂದೇಶ ರವಾನಿಸಿರುವ ಅಂಶ ಪತ್ತೆಯಾಗಿದೆ. ಯಾಕೆ ಬೆದರಿಕೆ ಸಂದೇಶ ಕಳುಹಿಸಿದ್ದ ಎಂಬುದರ ಬಗ್ಗೆ ಬಸವೇಶ್ವರನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಶಾಲೆ ಆವರಣದಲ್ಲಿ 4 ಜಿಲೆಟಿನ್ ಕಡ್ಡಿ ಇಟ್ಟಿರುವುದಾಗಿ ಇ-ಮೇಲ್ ಮಾಡಿದ್ದ ವಿದ್ಯಾರ್ಥಿ, ಬೆಳಗ್ಗೆ 11.30 ಕ್ಕೆ ಮೇಲ್ ನೋಡಿದ ಶಾಲೆ ಸಿಬ್ಬಂದಿ‌, ತಕ್ಷಣ ಬಸವೇಶ್ವರನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೇ ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ಶಾಲೆಯಲ್ಲಿ ಪರಿಶೀಲನೆ ನಡೆಸಿ, ತಪಾಸಣೆ ನಂತರ ಹುಸಿ ಬೆದರಿಕೆ ಇ-ಮೇಲ್​ ಎಂಬುದು ದೃಢವಾಗಿದ್ದು, ಈ ಬಗ್ಗೆ ಪಶ್ಚಿಮ ವಿಭಾಗ ಪೊಲೀಸರು ತನಿಖೆ ಮುಂದುವರಿಸಿದ್ದರು.

ಇದನ್ನೂ ಓದಿ:Bomb Threat ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ: ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡು, ಮಕ್ಕಳು ಸುರಕ್ಷಿತ ಸ್ಥಳಕ್ಕೆ

ಬೆಂಗಳೂರಿನಲ್ಲಿ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮಾಲೀಕತ್ವದ ಬೆಂಗಳೂರಿನ ಆರ್‌ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಪೊಲೀಸರ ತನಿಖೆ ವೇಳೆ ಅದೇ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿ ಬೆದರಿಕೆ ಮೇಲ್ ಕಳುಹಿಸಿದ್ದ ಎಂಬುದು ಗೊತ್ತಾಗಿತ್ತು. ಮೇಲ್ ಬಂದ ಐಪಿ ಅಡ್ರೆಸ್ ಜಾಡು ಹಿಡಿದು ವಿದ್ಯಾರ್ಥಿಯ ಕಿಡಿಗೇಡಿತನವನ್ನು ಪೊಲೀಸರು ಪತ್ತೆ ಮಾಡಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ