Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿ ಎಡವಟ್ಟು; ವಿದ್ಯಾರ್ಥಿ ಮೇಲೆ ರಾಡ್​ನಿಂದ ಹಲ್ಲೆ

ಶಿಕ್ಷಕಿಯೊಬ್ಬರು ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ(Student) ಮೇಲೆ ಹಲ್ಲೆ ರಾಡ್​ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೂಡ ಕೇಳಿಬಂದಿದೆ.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿ ಎಡವಟ್ಟು; ವಿದ್ಯಾರ್ಥಿ ಮೇಲೆ ರಾಡ್​ನಿಂದ ಹಲ್ಲೆ
ಬೆಂಗಳೂರಿನ ಖಾಸಗಿ ಶಾಲೆ ಶಿಕ್ಷಕಿಯಿಂದ ವಿದ್ಯಾರ್ಥಿ ಮೇಲೆ ಹಲ್ಲೆ
Follow us
Vinay Kashappanavar
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 08, 2023 | 3:59 PM

ಬೆಂಗಳೂರು, ಡಿ.08: ಬೆಂಗಳೂರಿನ ಖಾಸಗಿ ಶಾಲೆ(Private School) ಯೊಂದರಲ್ಲಿ ಶಿಕ್ಷಕಿಯೊಬ್ಬರು ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ(Student) ಮೇಲೆ ಹಲ್ಲೆ ರಾಡ್​ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ. ವಿದ್ಯಾರ್ಥಿ ಅಸೈನ್ಮೆಂಟ್ ಕಂಪ್ಲೀಟ್ ಮಾಡಿಲ್ಲ ಎಂದು  ಏಳನೇ ತರಗತಿ ವಿದ್ಯಾರ್ಥಿಗೆ ರಕ್ತ ಬರುವಂತೆ ಹೊಡದಿದ್ದಾರೆ. ಕೈಗೆ ರಾಡ್​ನಲ್ಲಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿದ್ದು, ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ.

ಪ್ರಕರಣ ಮುಚ್ಚಿಹಾಕಲು ಯತ್ನ ಆರೋಪ

ಇನ್ನು ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೂಡ ಕೇಳಿಬಂದಿದೆ. ಸದ್ಯ ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಫರ್ದೀನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ವಾಲಿಬಾಲ್ ಟಚ್ ಆಯ್ತು ಎಂದು ಜಗಳ; ರಾಡ್​ನಿಂದ ವಿದ್ಯಾರ್ಥಿಯಿಂದ ಮತ್ತೊಂದು ವಿದ್ಯಾರ್ಥಿ ಮೇಲೆ ಹಲ್ಲೆ

ಸೂಕ್ತ ಕ್ರಮದ ಭರವಸೆ

ಈ ಕುರಿತು ಮಾತನಾಡಿದ ಬಿಎಇ ಶಶಿಕಲಾ ಎಂಬುವವರು ‘ಲಾರ್ಡ್ಸ್ ಶಾಲೆಯ ಶಿಕ್ಷಕಿಯಿಂದ ಹಲ್ಲೆ ವಿಚಾರ ದೂರು ಬಂದಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ನಮಗೆ ನಿನ್ನೆ(ಡಿ. ಈ ಬಗ್ಗೆ ಮಾಹಿತಿ ಬಂದಿದೆ. ಈ ಹಿನ್ನಲೆ ಘಟನೆಯ ವಿಚಾರಣೆಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನ ಕಳುಹಿಸಿದ್ದೇವೆ. ಜೊತೆಗೆ ಶಾಲೆಗೆ ನೋಟಿಸ್ ಕೊಡುತ್ತಾ ಇದ್ದೀವಿ. ಕಂಪ್ಲೀಟ್ ವರದಿ ಪಡೆದು ಶಾಲೆಗೆ ನೋಟಿಸ್ ಕೊಟ್ಟು ಶಿಕ್ಷಕಿಯ ವಿಚಾರಣೆ ಮಾಡುತ್ತೇವೆ. ಶಾಲೆಯಿಂದ ಮಾಹಿತಿ ಬಂದ್ ಬಳಿಕ ಸೂಕ್ತ ಕ್ರಮವಹಿಸುವುದಾಗಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Fri, 8 December 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್