
ಬೆಂಗಳೂರು, ಏಪ್ರಿಲ್ 9: ಪುಲಕೇಶಿನಗರ (Pulikeshi Nagar) ಸಂಚಾರ ಪೊಲೀಸ್ (Bangalore Traffic Police) ಠಾಣಾ ವ್ಯಾಪ್ತಿಯ ಸೆಪ್ಪಿಂಗ್ಸ್ ರಸ್ತೆಯಲ್ಲಿರುವ ಮುತ್ಯಾಲಮ್ಮ ದೇವಿ ದೇವಸ್ಥಾನದ ವತಿಯಿಂದ ಮುತ ಮುತ್ಯಾಲಮ್ಮ ದೇವಿಯವರ ರಥೋತ್ಸವ (Muthyalamma Festival) ಮತ್ತು ದೇವರ ಪಲ್ಲಕ್ಕಿಗಳ ಉತ್ಸವದ ಕಾರ್ಯಕ್ರಮ ಏರ್ಪಡಿಸಿರುವುದರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರದಲ್ಲಿ ಕೆಲವು ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೂರ್ವ, ಉಪ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮೂಲಕ ಅವರು ವಿವರಗಳನ್ನು ಹಂಚಿಕೊಂಡಿದ್ದಾರೆ.
ಇಂದು (ಏಪ್ರಿಲ್ 9) ಬೆಳಗ್ಗೆ 11 ಗಂಟೆಯಿಂದ ಗುರುವಾರ ಮಧ್ಯಾಹ್ನ 2 ಗಂಟೆಯ ವರೆಗೆ ಸಂಚಾರ ನಿರ್ಬಂಧ ಜಾರಿಯಲ್ಲಿರಲಿದೆ.
Published On - 7:32 am, Wed, 9 April 25