AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಕಲಿ ಗನ್ ತೋರಿಸಿ ರೈಲ್ವೆ ಪ್ರಯಾಣಿಕರನ್ನ ದೋಚುತ್ತಿದ್ದ ಉತ್ತರ ಪ್ರದೇಶ, ಬಿಹಾರ ಆರೋಪಿಗಳ ಬಂಧನ

ರೈಲು ಕ್ರಾಸಿಂಗ್ ಮಾಡುತ್ತಿದ್ದ ವೇಳೆ ರೈಲುಗಳಿಗೆ ಎಂಟ್ರಿ ಕೊಡ್ತಿದ್ದ ಆರೋಪಿಗಳು ನಕಲಿ ಗನ್ ತೋರಿಸಿ ರೈಲಿನಲ್ಲಿದ್ದ ಪ್ರಯಾಣಿಕರನ್ನ ದೋಚುತ್ತಿದ್ದರು. ಕಳೆದೊಂದು ತಿಂಗಳಲ್ಲಿ ಇದೇ ರೀತಿಯ ಮೂರು ದೂರುಗಳು ದಾಖಲಾಗಿದ್ದವು.

ಬೆಂಗಳೂರಿನಲ್ಲಿ ನಕಲಿ ಗನ್ ತೋರಿಸಿ ರೈಲ್ವೆ ಪ್ರಯಾಣಿಕರನ್ನ ದೋಚುತ್ತಿದ್ದ ಉತ್ತರ ಪ್ರದೇಶ, ಬಿಹಾರ ಆರೋಪಿಗಳ ಬಂಧನ
ಬೆಂಗಳೂರಿನಲ್ಲಿ ನಕಲಿ ಗನ್ ತೋರಿಸಿ ರೈಲ್ವೆ ಪ್ರಯಾಣಿಕರನ್ನ ದೋಚುತ್ತಿದ್ದ ಉತ್ತರ ಪ್ರದೇಶ ಆರೋಪಿಗಳ ಬಂಧನ
TV9 Web
| Edited By: ಸಾಧು ಶ್ರೀನಾಥ್​|

Updated on: Sep 09, 2021 | 8:48 AM

Share

ಬೆಂಗಳೂರು: ನಕಲಿ ಗನ್ ತೋರಿಸಿ ಬೆಂಗಳೂರಿನಲ್ಲಿ ರೈಲ್ವೆ ಪ್ರಯಾಣಿಕರನ್ನ ದೋಚುತ್ತಿದ್ದ ಉತ್ತರ ಪ್ರದೇಶ ಮೂಲದ ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ನಕಲಿ ಗನ್ ತೋರಿಸಿ ರೈಲ್ವೆ ಪ್ರಯಾಣಿಕರನ್ನ ದೋಚುತ್ತಿದ್ದ ಆರೋಪಿಗಳಾದ ಬಿಹಾರ ಮೂಲದ ರವಿಚಂದ್ (27) ಹಾಗೂ ಉತ್ತರ ಪ್ರದೇಶ ಮೂಲದ ಸಂದೀಪ್ (32) ಬಂಧಿತರು. ಬೆಂಗಳೂರು ರೈಲ್ವೆ ಪೊಲೀಸರು ಈ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.

ರೈಲು ಕ್ರಾಸಿಂಗ್ ಮಾಡುತ್ತಿದ್ದ ವೇಳೆ ರೈಲುಗಳಿಗೆ ಎಂಟ್ರಿ ಕೊಡ್ತಿದ್ದ ಆರೋಪಿಗಳು ನಕಲಿ ಗನ್ ತೋರಿಸಿ ರೈಲಿನಲ್ಲಿದ್ದ ಪ್ರಯಾಣಿಕರನ್ನ ದೋಚುತ್ತಿದ್ದರು. ಕಳೆದೊಂದು ತಿಂಗಳಲ್ಲಿ ಇದೇ ರೀತಿಯ ಮೂರು ದೂರುಗಳು ದಾಖಲಾಗಿದ್ದವು. ಒಮ್ಮೆ ಎಂಟ್ರಿ ಕೊಟ್ರೆ ರೈಲಿನ ಒಂದು ಕಂಪಾರ್ಟ್ಮೆಂಟ್ ನಲ್ಲಿದ್ದ ಜನರನ್ನ ಹೆದರಿಸಿ ಚಿನ್ನಾಭರಣ ಹಣ ದೋಚುತ್ತಿದ್ದರು. ಬಂಧಿತರಿಂದ 3 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ನಕಲಿ ಗನ್ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ರೈತನ ಕಾರು ಅಡ್ಡಗಟ್ಟಿ ದರೋಡೆ

ತುಮಕೂರು ಜಿಲ್ಲೆ, ಗುಬ್ಬಿ ತಾಲೂಕಿನ ಬಿಟ್ಟಗೊಂಡನಹಳ್ಳಿ ಗೇಟ್ ನಲ್ಲಿ ರೈತನ ಕಾರು ಅಡ್ಡಗಟ್ಟಿ 15 ಸಾವಿರ ಹಣ, ಎರಡು ಮೊಬೈಲ್ ಫೋನ್ ಕಸಿದು ಪರಾರಿಯಾಗಿದ್ದಾರೆ.

ರೈತ ರಾಮಚಂದ್ರ‌ ಅವರು ತುಮಕೂರು ಮಾರುಕಟ್ಟೆಯಲ್ಲಿ ತರಕಾರಿ ಮಾರಿ 15 ಸಾವಿರ ಹಣದೊಂದಿಗೆ ಮನೆಗೆ ಹೋಗುತ್ತಿದ್ದ. ಕಾರು ನಿಲ್ಲಿಸಿ ಜಾಕ್ ನೀಡುವಂತೆ ಕೇಳಿದ್ದರು. ನಂತರ ಮಾರಕಾಸ್ತ್ರ ತೋರಿಸಿ, ಬೆದರಿಸಿ ಹಣ ಮೊಬೈಲ್ ಕಿತ್ತು ಪರಾರಿಯಾಗಿದ್ದರು. ಇದರಿಂದ ರಸ್ತೆಯಲ್ಲಿ ಓಡಾಡೋಕೆ ಸ್ಥಳೀಯರು ಭಯ ಪಡುತ್ತಿದ್ದಾರೆ. ಸಿ‌.ಎಸ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ- 20 ವರ್ಷ ಕಠಿಣ ಜೈಲು; ಮೈಸೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

(bangalore railway police arrest two dacoits)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು