AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನಲ್ಲಿ ಶುಕ್ರವಾರದವರೆಗೆ ಗುಡುಗು ಸಹಿತ ಭಾರೀ ಮಳೆ

ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಕೂಲ್ ಸುದ್ದಿ ನೀಡಿದೆ. ಮೇ 29 ರವರೆಗೆ ನಗರದಲ್ಲಿ ವ್ಯಾಪಕ ಮಳೆ ನಿರೀಕ್ಷೆಯಿದೆ, ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿನ ಚಂಡಮಾರುತದ ಪರಿಚಲನೆಯಿಂದಾಗಿ ತಾಪಮಾನದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ಇದು ಭಾರಿ ಸಮಾಧಾನ ತಂದಿದೆ.

Bangalore Rain: ಬೆಂಗಳೂರಿನಲ್ಲಿ ಶುಕ್ರವಾರದವರೆಗೆ ಗುಡುಗು ಸಹಿತ ಭಾರೀ ಮಳೆ
ಬೆಂಗಳೂರಿನಲ್ಲಿ ಮಳೆ Image Credit source: pinterest
ಅಕ್ಷಯ್​ ಪಲ್ಲಮಜಲು​​
|

Updated on:May 25, 2026 | 11:08 AM

Share

ಬೆಂಗಳೂರು, ಮೇ.25: ತೀವ್ರ ಉಷ್ಣಾಂಶ ಮತ್ತು ಬಿಸಿಲಿನಿಂದ ಕಂಗಾಲಾಗಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಕೂಲ್​ ಸುದ್ದಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ಹೊರಡಿಸಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಮೇ 29 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಇಡೀ ವಾರ ನಗರದಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ (Cyclonic Circulation) ಉಂಟಾಗಿರುವುದರಿಂದ ಹವಾಮಾನ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಇದು ಬೆಂಗಳೂರಿನಾದ್ಯಂತ ವ್ಯಾಪಕ ಮತ್ತು ನಿರಂತರ ಮಳೆಗೆ ಅತ್ಯಂತ ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ, ಬಿಹಾರದ ದಕ್ಷಿಣ ಭಾಗದಿಂದ ಜಾರ್ಖಂಡ್ ಮತ್ತು ಒಡಿಶಾ ಮೂಲಕ ಆಂಧ್ರಪ್ರದೇಶದ ಉತ್ತರ ಕರಾವಳಿಯವರೆಗೆ ವಿಸ್ತರಿಸಿರುವ ಉತ್ತರ-ದಕ್ಷಿಣ ವಾಯುಭಾರ ಕುಸಿತವೂ ಪ್ರಸ್ತುತ ಹವಾಮಾನ ವೈಪರೀತ್ಯಕ್ಕೆ ಪ್ರಮುಖ ಕಾರಣವಾಗಿದೆ.

ಇನ್ನು ನಗರದಲ್ಲಿ ಸೋಮವಾರ ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ದಟ್ಟವಾದ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ನಗರದ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಾರದಾದ್ಯಂತ ಬೆಂಗಳೂರಿಗೆ ‘ಹಳದಿ ಎಚ್ಚರಿಕೆ’ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕಳೆದ ವಾರಕ್ಕೆ ಹೋಲಿಸಿದರೆ ಬೆಂಗಳೂರಿನಾದ್ಯಂತ ತಾಪಮಾನದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 2 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆಯಾಗಿದೆ. ಈ ಹಿಂದೆ ಸರಾಸರಿ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದ್ದ ಗರಿಷ್ಠ ತಾಪಮಾನವು ಸದ್ಯ 30 ಡಿಗ್ರಿ ಸೆಲ್ಸಿಯಸ್‌ಗಿಂತ ಕೆಳಗೆ ಇಳಿದಿದೆ. ಇನ್ನು ಬೆಂಗಳೂರು ಮಾತ್ರವಲ್ಲದೆ, ಇಡೀ ಉತ್ತರ ಒಳನಾಡು ಕರ್ನಾಟಕ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಬಹುತೇಕ ಜಿಲ್ಲೆಗಳಿಗೂ ಮೇ 29 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 am, Mon, 25 May 26

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More