AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಶಾಸಕರ ವಿರೋಧ: 714 ಕಟ್ಟಡಗಳ ಪಟ್ಟಿ ಸಿದ್ಧ

ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ಬಿಬಿಎಂಪಿ ಸಿದ್ಧತೆ ಆರಂಭಿಸಿದೆ. ಆದರೆ ಬಿಬಿಎಂಪಿ ನಿರ್ಧಾರಕ್ಕೆ ಜನಪ್ರತಿನಿಧಿಗಳಿಂದಲೇ ವಿರೋಧ ವ್ಯಕ್ತವಾಗಿದೆ

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಶಾಸಕರ ವಿರೋಧ: 714 ಕಟ್ಟಡಗಳ ಪಟ್ಟಿ ಸಿದ್ಧ
ಬೆಂಗಳೂರಿನಲ್ಲಿ ಮಳೆಯಿಂದ ರಸ್ತೆಯ ಮೇಲೆ ನೀರು ಹರಿಯಿತು.
TV9 Web
| Edited By: |

Updated on:May 23, 2022 | 11:42 AM

Share

ಬೆಂಗಳೂರು: ನಗರದಲ್ಲಿ ಸ್ವಲ್ಪವೇ ಮಳೆ ಬಂದರೂ ಮನೆಗಳಿಗೆ ನೀರು ನುಗ್ಗುವ, ರಸ್ತೆಗಳ ಮೇಲೆ ನೀರು ನಿಲ್ಲುವ ಸಮಸ್ಯೆ ಹೆಚ್ಚಾಗುತ್ತಿದೆ. ಹೈರಾಣಾಗುತ್ತಿರುವ ಜನರು ಬಿಬಿಎಂಪಿ ಮತ್ತು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ನಗರದಲ್ಲಿ ರಾಜಕಾಲುವೆ ಒತ್ತುವರಿ (Rajakaluve Encroachment Clearance) ತೆರವುಗೊಳಿಸಿ, ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂಬ ಒತ್ತಾಯಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಿರುವ 714 ಕಟ್ಟಡಗಳ ಪಟ್ಟಿ ಸಿದ್ಧಪಡಿಸಿರುವ ಬಿಬಿಎಂಪಿ ಅಧಿಕಾರಿಗಳು ಶೀಘ್ರದಲ್ಲಿಯೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ಸಿದ್ಧತೆ ಆರಂಭಿಸಿದ್ದಾರೆ. ಆದರೆ ಬಿಬಿಎಂಪಿ ನಿರ್ಧಾರಕ್ಕೆ ಜನಪ್ರತಿನಿಧಿಗಳಿಂದಲೇ ವಿರೋಧ ಕೇಳಿಬಂದಿರುವುದು ವಿಪರ್ಯಾಸ.

ರಾಜಕಾಲುವೆ ಒತ್ತುವರಿ ಮಾಡಿರುವ 714 ಕಟ್ಟಡಗಳ ಪಟ್ಟಿ ಸಿದ್ಧಗೊಳಿಸಿ ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದರೂ ಸ್ಥಳೀಯ ಶಾಸಕರು ತೆರವು ಕಾರ್ಯಾಚರಣೆಗೆ ಅವಕಾಶಕೊಡುತ್ತಿಲ್ಲ. ತೆರವು ಕಾರ್ಯ ನಡೆಸದಂತೆ ಅಧಿಕಾರಿಗಳ ಮೇಲೆ ಶಾಸಕರು ಒತ್ತಡ ಹೇರುತ್ತಿದ್ದಾರೆ. ಒತ್ತುವರಿ ತೆರವು ಮಾಡದಂತೆ ಅಧಿಕಾರಿಗಳಿಗೆ ಸರ್ಕಾರವೂ ಮೌಖಿಕ ಸೂಚನೆ ನೀಡಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದೀಗ ನಗರದಲ್ಲಿ ಮಳೆ ಬಿಡುವುಕೊಟ್ಟಿದೆ. ಸಕಾಲದಲ್ಲಿ ಒತ್ತುವರಿ ತೆರವಿಗೆ ಕ್ರಮ ತೆಗೆದುಕೊಳ್ಳದಿದ್ದರೆ ಮುಂದೆ ಮಳೆ ಬಂದಾಗ ಪ್ರವಾಹ ಖಚಿತ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಇದೀಗ ಈ ಸಂಬಂಧ ಅಗತ್ಯ ಮಾಹಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನೀಡಲಾಗಿದೆ. ಅವರು ಹಸಿರು ನಿಶಾನೆ ತೋರಿದರೆ ಈ ವಾರದಿಂದಲೇ ತೆರವು ಕಾರ್ಯಾಚರಣೆ ಆರಂಭವಾಗಲಿದೆ. 2016-17ರಲ್ಲಿ ನಗರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿತ್ತು. ಒಟ್ಟು 2,626 ಕಡೆ ರಾಜಕಾಲುವೆ ಜಾಗ ಕಬಳಿಕೆಯಾಗಿದ್ದು ಈವರೆಗೆ 1890 ಸ್ಥಳಗಳಲ್ಲಿ ತೆರವುಗೊಳಿಸಲಾಗಿದೆ. ಇನ್ನೂ 736 ಒತ್ತುವರಿಗಳ ತೆರವಿಗೆ ಕಾಲ ಕೂಡಿಬಂದಿಲ್ಲ. ಹಿಂದೆ ಒತ್ತುವರಿ ತೆರವು ಮಾಡಿದ ಜಾಗದಲ್ಲಿ ಪ್ರವಾಹ ಆಗುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಳೆ ಪರಿಸ್ಥಿತಿ ಪರಿಶೀಲಿಸಿದ ಬೈರತಿ ಬಸವರಾಜ್

ಬೆಂಗಳೂರಿನಲ್ಲಿ ಮಳೆ ಅಪಾಯ ಎದುರಿಸಲು ಎಂಟು ವಲಯಗಳಿಗೆ ಏಳು ಉಸ್ತುವಾರಿಗಳನ್ನು ನೇಮಿಸಲಾಗಿದೆ. ಮಹಾದೇವಪುರ ವಲಯಕ್ಕೆ ಬೈರತಿ ಬಸವರಾಜ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇಮಕ ಮಾಡಿದ್ದಾರೆ. ಮುಖ್ಯಮಂತ್ರಿ ಸೂಚನೆಯ ಮೇರೆಗೆ ಬೈರತಿ ಬಸವರಾಜ್ ಅವರು ಮಹಾದೇವಪುರ ವಲಯದ ಅಧಿಕಾರಿಗಳ ಸಭೆ‌ಯನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದರು. ಮಹಾದೇವಪುರ ವಲಯದಲ್ಲಿ ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು.

Published On - 11:42 am, Mon, 23 May 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ