AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಶಾಸಕರ ವಿರೋಧ: 714 ಕಟ್ಟಡಗಳ ಪಟ್ಟಿ ಸಿದ್ಧ

ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ಬಿಬಿಎಂಪಿ ಸಿದ್ಧತೆ ಆರಂಭಿಸಿದೆ. ಆದರೆ ಬಿಬಿಎಂಪಿ ನಿರ್ಧಾರಕ್ಕೆ ಜನಪ್ರತಿನಿಧಿಗಳಿಂದಲೇ ವಿರೋಧ ವ್ಯಕ್ತವಾಗಿದೆ

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಶಾಸಕರ ವಿರೋಧ: 714 ಕಟ್ಟಡಗಳ ಪಟ್ಟಿ ಸಿದ್ಧ
ಬೆಂಗಳೂರಿನಲ್ಲಿ ಮಳೆಯಿಂದ ರಸ್ತೆಯ ಮೇಲೆ ನೀರು ಹರಿಯಿತು.
TV9 Web
| Edited By: |

Updated on:May 23, 2022 | 11:42 AM

Share

ಬೆಂಗಳೂರು: ನಗರದಲ್ಲಿ ಸ್ವಲ್ಪವೇ ಮಳೆ ಬಂದರೂ ಮನೆಗಳಿಗೆ ನೀರು ನುಗ್ಗುವ, ರಸ್ತೆಗಳ ಮೇಲೆ ನೀರು ನಿಲ್ಲುವ ಸಮಸ್ಯೆ ಹೆಚ್ಚಾಗುತ್ತಿದೆ. ಹೈರಾಣಾಗುತ್ತಿರುವ ಜನರು ಬಿಬಿಎಂಪಿ ಮತ್ತು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ನಗರದಲ್ಲಿ ರಾಜಕಾಲುವೆ ಒತ್ತುವರಿ (Rajakaluve Encroachment Clearance) ತೆರವುಗೊಳಿಸಿ, ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂಬ ಒತ್ತಾಯಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಿರುವ 714 ಕಟ್ಟಡಗಳ ಪಟ್ಟಿ ಸಿದ್ಧಪಡಿಸಿರುವ ಬಿಬಿಎಂಪಿ ಅಧಿಕಾರಿಗಳು ಶೀಘ್ರದಲ್ಲಿಯೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ಸಿದ್ಧತೆ ಆರಂಭಿಸಿದ್ದಾರೆ. ಆದರೆ ಬಿಬಿಎಂಪಿ ನಿರ್ಧಾರಕ್ಕೆ ಜನಪ್ರತಿನಿಧಿಗಳಿಂದಲೇ ವಿರೋಧ ಕೇಳಿಬಂದಿರುವುದು ವಿಪರ್ಯಾಸ.

ರಾಜಕಾಲುವೆ ಒತ್ತುವರಿ ಮಾಡಿರುವ 714 ಕಟ್ಟಡಗಳ ಪಟ್ಟಿ ಸಿದ್ಧಗೊಳಿಸಿ ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದರೂ ಸ್ಥಳೀಯ ಶಾಸಕರು ತೆರವು ಕಾರ್ಯಾಚರಣೆಗೆ ಅವಕಾಶಕೊಡುತ್ತಿಲ್ಲ. ತೆರವು ಕಾರ್ಯ ನಡೆಸದಂತೆ ಅಧಿಕಾರಿಗಳ ಮೇಲೆ ಶಾಸಕರು ಒತ್ತಡ ಹೇರುತ್ತಿದ್ದಾರೆ. ಒತ್ತುವರಿ ತೆರವು ಮಾಡದಂತೆ ಅಧಿಕಾರಿಗಳಿಗೆ ಸರ್ಕಾರವೂ ಮೌಖಿಕ ಸೂಚನೆ ನೀಡಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದೀಗ ನಗರದಲ್ಲಿ ಮಳೆ ಬಿಡುವುಕೊಟ್ಟಿದೆ. ಸಕಾಲದಲ್ಲಿ ಒತ್ತುವರಿ ತೆರವಿಗೆ ಕ್ರಮ ತೆಗೆದುಕೊಳ್ಳದಿದ್ದರೆ ಮುಂದೆ ಮಳೆ ಬಂದಾಗ ಪ್ರವಾಹ ಖಚಿತ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಇದೀಗ ಈ ಸಂಬಂಧ ಅಗತ್ಯ ಮಾಹಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನೀಡಲಾಗಿದೆ. ಅವರು ಹಸಿರು ನಿಶಾನೆ ತೋರಿದರೆ ಈ ವಾರದಿಂದಲೇ ತೆರವು ಕಾರ್ಯಾಚರಣೆ ಆರಂಭವಾಗಲಿದೆ. 2016-17ರಲ್ಲಿ ನಗರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿತ್ತು. ಒಟ್ಟು 2,626 ಕಡೆ ರಾಜಕಾಲುವೆ ಜಾಗ ಕಬಳಿಕೆಯಾಗಿದ್ದು ಈವರೆಗೆ 1890 ಸ್ಥಳಗಳಲ್ಲಿ ತೆರವುಗೊಳಿಸಲಾಗಿದೆ. ಇನ್ನೂ 736 ಒತ್ತುವರಿಗಳ ತೆರವಿಗೆ ಕಾಲ ಕೂಡಿಬಂದಿಲ್ಲ. ಹಿಂದೆ ಒತ್ತುವರಿ ತೆರವು ಮಾಡಿದ ಜಾಗದಲ್ಲಿ ಪ್ರವಾಹ ಆಗುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಳೆ ಪರಿಸ್ಥಿತಿ ಪರಿಶೀಲಿಸಿದ ಬೈರತಿ ಬಸವರಾಜ್

ಬೆಂಗಳೂರಿನಲ್ಲಿ ಮಳೆ ಅಪಾಯ ಎದುರಿಸಲು ಎಂಟು ವಲಯಗಳಿಗೆ ಏಳು ಉಸ್ತುವಾರಿಗಳನ್ನು ನೇಮಿಸಲಾಗಿದೆ. ಮಹಾದೇವಪುರ ವಲಯಕ್ಕೆ ಬೈರತಿ ಬಸವರಾಜ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇಮಕ ಮಾಡಿದ್ದಾರೆ. ಮುಖ್ಯಮಂತ್ರಿ ಸೂಚನೆಯ ಮೇರೆಗೆ ಬೈರತಿ ಬಸವರಾಜ್ ಅವರು ಮಹಾದೇವಪುರ ವಲಯದ ಅಧಿಕಾರಿಗಳ ಸಭೆ‌ಯನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದರು. ಮಹಾದೇವಪುರ ವಲಯದಲ್ಲಿ ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು.

Published On - 11:42 am, Mon, 23 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು