AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವು ಪ್ರಕರಣ: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಕೆ.ಆರ್​.ಸರ್ಕಲ್ ಅಂಡರ್ ಪಾಸ್​​ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವು ಪ್ರಕರಣ: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು
ಹಲಸೂರು ಗೇಟ್ ಪೊಲೀಸ್​ ಠಾಣೆ
Follow us
ವಿವೇಕ ಬಿರಾದಾರ
|

Updated on:May 22, 2023 | 7:32 AM

ಬೆಂಗಳೂರು: ಕೆ.ಆರ್​.ಸರ್ಕಲ್ (KR Cricle) ಅಂಡರ್ ಪಾಸ್​​ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ (Infosys) ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ (BBMP) ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್​ಪಾಸ್​ನಲ್ಲಿ ನೀರು ತುಂಬಿದೆ. ನೀರು ಹೊರ ಹೋಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಯುವತಿ ಸಹೋದರ ಸಂದೀಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್​​ಐಆರ್​​ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೆ.ಆರ್​.ಸರ್ಕಲ್ ಅಂಡರ್ ಪಾಸ್​​ನಲ್ಲಿ ಸಿಲುಕಿ ಯುವತಿ ಸಾವು

ಭಾನುವಾರ (ಮೇ.21) ರಜಾ ದಿನ ಹಿನ್ನೆಲೆ ಬೆಂಗಳೂರಿನ ಇನ್ಫೋಸಿಸ್​ನ ಉದ್ಯೋಗಿ ಯುವತಿ ಭಾನುರೇಖಾ (22) ಆಂಧ್ರಪ್ರದೇಶದಲ್ಲಿದ್ದ ಕುಟುಂಬಕ್ಕೆ ಬೆಂಗಳೂರು ತೋರಿಸಲು ಕರೆಯಿಸಿಕೊಂಡಿದ್ದರು. ಹೀಗೆ  ಕಬ್ಬನ್ ಪಾರ್ಕ್ ವೀಕ್ಷಣೆ ವೇಳೆ ಮಳೆ ಆರಂಭವಾದ ಹಿನ್ನೆಲೆ ಮನೆಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ಕೆಆರ್ ಸರ್ಕಲ್​ ಬಳಿ ಭಾರೀ ಮಳೆಗೆ ಅಂಡರ್​ಪಾಸ್​ನಲ್ಲಿ ನೀರು ತುಂಬಿತ್ತು. ಆದರೆ ಅಂಡರ್​ಪಾಸ್​ನ ಮಟ್ಟ ತಿಳಿಯದೇ ಕಾರು ಚಾಲಕ ನೀರಿನಲ್ಲಿ ಕಾರು ಚಲಾಯಿಸಿದ್ದು, ಮಧ್ಯ ಭಾಗಗಕ್ಕೆ ತಲುಪುತ್ತಿದ್ದಂತೆ ಕಾರು ಮುಳುಗಡೆಯಾಗಿತ್ತು. ಚಾಲಕ ಕಾರನ್ನು ಹಿಂದಕ್ಕೆ ಕೊಂಡೊಯ್ಯಲು ಯತ್ನಿಸಿದರೂ ಸಾಧ್ಯವಾಗದೆ ಕಾರು ಮುಳುಗಡೆಯಾಗಿತ್ತು.

ಇದನ್ನೂ ಓದಿ: ಕೆಲವೇ ಗಂಟೆ ಸುರಿದ ಮಳೆಗೆ ಬೆಂಗಳೂರು ತತ್ತರ; ಎಲ್ಲೆಲ್ಲಿ ಎಷ್ಟು ಪ್ರಮಾಣ ಮಳೆ ಸುರಿದಿದೆ? ಇಲ್ಲಿದೆ ವಿವರ

ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಕ್ಕೆ ದಾವಿಸಿದ್ದರು. ಘಟನೆ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ದೌಡಾಯಿಸಿ ಹರಸಾಹಸಪಟ್ಟು ಆರು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಈ ವೇಳೆಗಾಗಲೆ ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೆ ಅವರನ್ನು ಹತ್ತಿರದ ಸೆಂಟ್​ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಆಸ್ಪತ್ರೆ ಸಿಬ್ಬಂದಿ ಆರಂಭದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ್ದು, ಸುಮಾರು ಅರ್ಧಗಂಟೆಗಳ ಕಾಲ ಯುವತಿಯನ್ನು ಹೊರಗೆ ಇರಿಸಲಾಗಿತ್ತು. ಪತ್ರಕರ್ತರು ಹಾಗೂ ಸ್ಥಳೀಯರು ತರಾಟೆಗೆ ತೆಗೆದುಕೊಂಡ ನಂತರ ವೈದ್ಯರು ಯುವತಿಯನ್ನು ಆಸ್ಪತ್ರೆಯೊಳಗೆ ಸೇರಿಸಿಕೊಂಡು ಚಿಕಿತ್ಸೆ ನೀಡಲು ಆರಂಭಿಸಿದ್ದರು. ಆದರೆ, ಅಷ್ಟರಾಗಲೇ ಯುವತಿಯ ಜೀವ ಹೋಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:18 am, Mon, 22 May 23

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ