AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain; ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ, ಸಾರ್ವಜನಿಕರ ಪರದಾಟ

ಬೆಂಗಳೂರು ಮಳೆ; ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಸಂಜೆಯ ಮಳೆಯಿಂದಾಗಿ ದ್ವಿಚಕ್ರ ವಾಹನ ಸಾವರಿಗೆ ಸಮಸ್ಯೆಯಾಗಿದ್ದು, ಗಾಳಿ ಸಹಿತ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. 

Bengaluru Rain; ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ, ಸಾರ್ವಜನಿಕರ ಪರದಾಟ
ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ
TV9 Web
| Edited By: |

Updated on:May 03, 2022 | 7:46 PM

Share

ಬೆಂಗಳೂರು: ರಾಜ್ಯ ರಾಜ್ಯಧಾನಿಯಲ್ಲಿ ಇಂದು ನಗರದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಶುರುವಾಗಿದ್ದು, ಶಾಂತಿನಗರ, ಕಾರ್ಪೋರೇಷನ್, ಮೈಸೂರು ರೋಡ್, ವಿಧಾನಸೌಧ, ಶಿವಾಜಿನಗರ, ಕಾಡುಗೋಡಿ, ಹೆಬ್ಬಾಳ, ಕೋರಮಂಗಲ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಆಗುತ್ತಿದ್ದು, ಮಳೆಯಿಂದ ಬೈಕ್ ಸವಾರರು ಮತ್ತು ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತ್ತಾಗಿದೆ. ಹಲವೆಡೆ ಮಳೆಯಿಂದಾಗಿ ಟ್ರಾಫಿಕ್​ ಜಾಮ್​ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಸಂಜೆಯ ಮಳೆಯಿಂದಾಗಿ ದ್ವಿಚಕ್ರ ವಾಹನ ಸಾವರಿಗೆ ಸಮಸ್ಯೆಯಾಗಿದ್ದು, ಗಾಳಿ ಸಹಿತ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಹರಿಯುತ್ತಿದೆ.

ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಮೇ 5ರಿಂದ ಇನ್ನೂ ಹೆಚ್ಚಲಿದೆ ವರುಣನ ಅಬ್ಬರ

ಕರ್ನಾಟಕದಲ್ಲಿ ಮಳೆಯ (Rain in Karnataka) ಆರ್ಭಟ ಹೆಚ್ಚಾಗುತ್ತಿದೆ. ಮುಂದಿನ ತಿಂಗಳಿನಿಂದ ಮಾನ್ಸೂನ್ (Monsoon) ಶುರುವಾಗುವ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನೆರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದಾದ್ಯಂತ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮೇ 5ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವಡೆ ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಮೇ 5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಭಾನುವಾರ ಬೆಂಗಳೂರಿನಲ್ಲಿ ಸುರಿದ ಆಲಿಕಲ್ಲು, ಗುಡುಗು, ಮಿಂಚು ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಮೇ 5ರಿಂದ ಬೆಂಗಳೂರಿನಲ್ಲಿ ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ಕರ್ನಾಟಕ ಮಾತ್ರವಲ್ಲದೆ ಇಂದು ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಅಥವಾ ಹಿಮ ಬೀಳುವ ಸಾಧ್ಯತೆ ಇದೆ

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:00 pm, Tue, 3 May 22

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್