AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಭಾರೀ ಮಳೆ, ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್​​ಗಳಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

Bangalore Rains: ಭಾರೀ ಮಳೆ, ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ
ಅಧಿಕಾರಿಗಳ ಜತೆ ಡಿಕೆಶಿ ಸಭೆ
Follow us
Ganapathi Sharma
|

Updated on: May 30, 2023 | 8:59 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bangalore Rains) ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್​​ಗಳಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು. ಸಂಭವನೀಯ ಮಳೆ ಅನಾಹುತಗಳ ಬಗ್ಗೆಯೂ ನಿಗಾ ವಹಿಸಬೇಕು. ಎಲ್ಲೇ ಏನೇ ಅನಾಹುತವಾದರೂ ಸಮಾರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಾಗರಿಕರಿಗೆ ತೊಂದರೆ ಆಗದಂತೆ ಪೊಲೀಸ್, ಬೆಸ್ಕಾಂ, ಜಲ ಮಂಡಳಿ ಮತ್ತಿತರ ಇಲಾಖೆಗಳ ಜತೆ ಪರಸ್ಪರ ಸಮನ್ವಯ, ಸಹಕಾರ ಸಾಧಿಸಬೇಕು ಎಂದು ಅವರು ಪಾಲಿಕೆ ಹಿರಿಯ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ.

ಮತ್ತಷ್ಟು ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತದಲ್ಲಿ ಟ್ರಾಫಿಕ್ ಜಾಮ್

ನಗರದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಮಂಗಳವಾರವೂ ನಗರದಾದ್ಯಂತ ಮಧ್ಯಾಹ್ನದಿಂದಲೇ ಭಾರೀ ಮಳೆ ಸುರಿದಿದೆ. ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತ, ಶಾಂತಿನಗರ, ಜಯನಗರ, ಕೆಆರ್​ ಮಾರುಕಟ್ಟೆ, ವಿಜಯನಗರ, ಮೆಜೆಸ್ಟಿಕ್, ಬನಶಂಕರಿ, ಜೆಪಿನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ.

ಕಳೆದ ಭಾನುವಾರ ನಗರದಲ್ಲಿ ಸುರಿದಿದ್ದ ಭಾರೀ ಮಳೆಗೆ ಕೆಆರ್ ಸರ್ಕಲ್ ಅಂಡರ್​​ ಪಾಸ್​ನಲ್ಲಿ ಕಾರು ಮುಳುಗಿ ಹೈದರಾಬಾದ್ ಮೂಲದ ಯುವತಿ ಮೃತಪಟ್ಟಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ