AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ, ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ; ಸಂಚಾರ ಪೊಲೀಸರ ಮನವಿ

ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಸಂಜೆಯೂ ಭಾರೀ ಮಳೆ ಸುರಿದಿದೆ. ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ ಎಂದು ಬೆಂಗಳೂರು ಸಂಚಾರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Bangalore Rains: ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ, ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ; ಸಂಚಾರ ಪೊಲೀಸರ ಮನವಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:May 22, 2023 | 7:49 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಸಂಜೆಯೂ ಭಾರೀ ಮಳೆ (Bangalore Rains) ಸುರಿದಿದೆ. ನಗರದ ಮಲ್ಲೇಶ್ವರಂ, ಮೆಜೆಸ್ಟಿಕ್, ಕಾರ್ಪರೇಷನ್, ಗಿರಿನಗರ, ಶಾಂತಿನಗರ, ರಿಚ್​ಮಂಡ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಗಾಳಿ ಸಹಿತ ಧಾರಕಾರ ಮಳೆ ಸುರಿದಿದೆ. ಈ ಮಧ್ಯೆ, ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ ಎಂದು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಭಾನುವಾರ ಸಂಜೆ ಸುರಿದಿದ್ದ ಭಾರೀ ಮಳೆಯಿಂದಾಗಿ ಕೆಆರ್ ಸರ್ಕಲ್ ಅಂಡರ್​ಪಾಸ್​​ನಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಅದರಲ್ಲಿ ಕಾರು ಸಿಲುಕಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟಿದ್ದರು.

ಮಳೆಯ ಕಾರಣ ಸಾರ್ವಜನಿಕರು ವಿಧಾನಸೌಧದ ಸುತ್ತಲಿನ 6 ಕಿಮೀ ವ್ಯಾಪ್ತಿಯಲ್ಲಿರುವ ಅಂಡರ್​ಪಾಸ್​​ಗಳಲ್ಲಿ ಸಂಚರಿಸಬಾರದು ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದಾರೆ. ಹಲವೆಡೆ ಅಂಡರ್​ಪಾಸ್​ಗಳ ಮೂಲಕ ಸಂಚರಿಸದಂತೆ ಬಿಬಿಎಂಪಿ ಸಿಬ್ಬಂದಿ ಬ್ಯಾರಿಕೇಡ್ ಅಳವಡಿಸಿದ್ದಾರೆ.

ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಪೊಲೀಸರು ಸೋಮವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಕಬ್ಬನ್​ಪಾರ್ಕ್​ನಲ್ಲಿ ಧರೆಗುರುಳಿದ 40ಕ್ಕೂ ಹೆಚ್ಚು ಮರಗಳು

ಬೆಂಗಳೂರಿನಲ್ಲಿ 2 ದಿನಗಳಿಂದ ಸುರಿದ ಮಳೆಯಿಂದಾಗಿ ಕಬ್ಬನ್​ಪಾರ್ಕ್​ನಲ್ಲಿ 40ಕ್ಕೂ ಹೆಚ್ಚು ಮರಗಳು ಉರುಳಿ ಬಿದ್ದಿವೆ. ಕಬ್ಬನ್ ಉದ್ಯಾನವನದಲ್ಲಿ ಒಟ್ಟು 2 ಸಾವಿರಕ್ಕೂ ಹೆಚ್ಚು ಮರಗಳಿವೆ. ರಸ್ತೆಯ ಮೇಲೆ ಬಿದ್ದಿದ್ದ ಎಲ್ಲ ಮರಗಳನ್ನು ತೆರವುಗೊಳಿಸಿದ್ದೇವೆ. ಇನ್ನೆರಡು ದಿನ ಭಾರಿ ಮಳೆಯ ಮುನ್ಸೂಚನೆ ಇದೆ ಎಂದು ಕಬ್ಬನ್ ಪಾರ್ಕ್ ತೋಟಗಾರಿಕೆ ಉಪನಿರ್ದೇಶಕ ಬಾಲಕೃಷ್ಣ ಹೇಳಿದ್ದಾರೆ.

ಇದನ್ನೂ ಓದಿ: Bangalore Rain: ಬೆಂಗಳೂರು ಮಳೆ ದುರಂತ, ಮಾನವೀಯತೆ ಮರೆತ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ, ಇನ್ಫೋಸಿಸ್ ಉದ್ಯೋಗಿ ಬಲಿ

ಪ್ರವಾಸಿಗರು ಮುನ್ನೆಚ್ಚರಿಕಾ ಕ್ರಮವಾಗಿ ಪಾರ್ಕ್​ಗೆ ಭೇಟಿ ನೀಡದಿರುವುದು ಒಳಿತು. ಒಂದು ವೇಳೆ ಪಾರ್ಕ್​ಗೆ ಭೇಟಿ ನೀಡಿದರೆ ಮರಗಳ ಕೆಳಗೆ ನಿಲ್ಲಬೇಡಿ ಎಂದು ಅವರು ಸಲಹೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Mon, 22 May 23

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ