AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕುಡಿದು ಪುಂಡಾಟ, ಕಾರು ಅಪಘಾತ; ಬಂಧಿಸಿ ಜೈಲಿಗಟ್ಟಿದ ಪೊಲೀಸರು

ಬೆಂಗಳೂರು ಮೂಲದ ನರೇಂದ್ರ ಬಾಬು ಎಂಬಾತ ಪುಂಡಾಟ ನಡೆಸಿದವ. ಈತ ಮದ್ಯದ ನಶೆಯಲ್ಲಿ ಕಾರು ಅಪಘಾತ ನಡೆಸಿದ್ದು, ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ತಿಮ್ಮೇಗೌಡ ಎಂಬುವವರಿಗೆ ಗಾಯಗಳಾಗಿವೆ. ಜತೆಗಿದ್ದ ಕುಟುಂಬಸ್ಥರು ಸಮಾಧಾನ ಮಾಡಲು ಯತ್ನ ನಡೆಸಿದರೂ ಗಾಯಾಳು ತಿಮ್ಮೇಗೌಡ ಎಂಬಾತನ ಮೇಲೆಯೇ ನರೇಂದ್ರ ಬಾಬು ಹಲ್ಲೆ ನಡೆಸಿದ್ದಾನೆ.

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕುಡಿದು ಪುಂಡಾಟ, ಕಾರು ಅಪಘಾತ; ಬಂಧಿಸಿ ಜೈಲಿಗಟ್ಟಿದ ಪೊಲೀಸರು
ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕುಡಿದು ಪುಂಡಾಟ, ಕಾರು ಅಪಘಾತ; ಬಂಧಿಸಿ ಜೈಲಿಗಟ್ಟಿದ ಪೊಲೀಸರು
TV9 Web
| Updated By: ಸಾಧು ಶ್ರೀನಾಥ್​|

Updated on:Sep 02, 2021 | 11:40 AM

Share

ಹಾಸನ: ಬೆಂಗಳೂರಿನ ಯಶವಂತಪುರದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ಕುಡಿದು ಕಾರು ಚಲಾಯಿಸಿ ಅಪಘಾತ ಮಾಡಿದ್ದಾನೆ, ಬಳಿಕ ಪುಂಡಾಟ ನಡೆಸಿ, ತನ್ನನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುತ್ತಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು ಮೂಲದ ನರೇಂದ್ರ ಬಾಬು ಎಂಬಾತ ಪುಂಡಾಟ ನಡೆಸಿದವ. ಈತ ಮದ್ಯದ ನಶೆಯಲ್ಲಿ ಕಾರು ಅಪಘಾತ ನಡೆಸಿದ್ದು, ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ತಿಮ್ಮೇಗೌಡ ಎಂಬುವವರಿಗೆ ಗಾಯಗಳಾಗಿವೆ. ಜತೆಗಿದ್ದ ಕುಟುಂಬಸ್ಥರು ಸಮಾಧಾನ ಮಾಡಲು ಯತ್ನ ನಡೆಸಿದರೂ ಗಾಯಾಳು ತಿಮ್ಮೇಗೌಡ ಎಂಬಾತನ ಮೇಲೆಯೇ ನರೇಂದ್ರ ಬಾಬು ಹಲ್ಲೆ ನಡೆಸಿದ್ದಾನೆ.

ಇದೇ ವೇಳೆ ನರೇಂದ್ರ ಬಾಬು ಪೊಲೀಸ್ ಜೀಪ್‌ಗೂ ಹೊಡೆದು ರಂಪಾಟ ಮಾಡಿದ್ದಾನೆ. ನರೇಂದ್ರ ಬಾಬು ವಿರುದ್ಧ ಗಾಯಗೊಂಡ ತಿಮ್ಮೇಗೌಡ ಅವರ ಸಹೋದರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನರೇಂದ್ರ ಬಾಬುನನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ನಂತರ ಠಾಣೆಯಲ್ಲೂ ನರೇಂದ್ರ ಬಾಬು ರಂಪಾಟ ಮಾಡಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ನರೇಂದ್ರ ಬಾಬು ಹಲ್ಲೆ ನಡೆಸಿ, ಗಲಾಟೆ ಮಾಡಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರ ಮೇಲೆಯೂ ದರ್ಪ ತೋರಿ ಗಲಾಟೆ ಮಾಡಿದ್ದಾನೆ, ಭೂಪ. ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಎಂದು ಹೇಳಿಕೊಂಡು ಗಲಾಟೆ ಮಾಡಿದ್ದಾನೆ. ತನ್ನ ಕಾರಿನಲ್ಲಿ ಕುಟುಂಬ ಸಮೇತ ಅರಕಲಗೂಡು ಕಡೆಗೆ ಹೋಗುತ್ತಿದ್ದಾಗ ಆಕ್ಸಿಡೆಂಟ್ ಮಾಡಿದ್ದಾನೆ.

ಇದನ್ನೂ ಓದಿ: ಅಪಘಾತಕ್ಕೂ ಮುನ್ನ ಜಿಗ್​ಜ್ಯಾಗ್​ ರೈಡ್: ಪೊಲೀಸರ​ ಮೇಲೆಯೇ ಕಾರು ಹತ್ತಿಸೋ ಯತ್ನ, ಜೊಮ್ಯಾಟೋ ಹುಡುಗ ಜಸ್ಟ್​ ಮಿಸ್

ಕಾದಿದೆ ಬರೆ: ಗ್ಯಾಸ್ ಸಿಲಿಂಡರ್ ಬೆಲೆ ಮುಂದಿನ 3 ತಿಂಗಳಲ್ಲಿ 1000 ರೂ ಗಡಿ ದಾಟುತ್ತದೆ – LPG ಫೆಡರೇಷನ್‌

(bangalore real estate businessman car accident at arkalgud arrested)

Published On - 11:35 am, Thu, 2 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ