AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ತಪ್ಪದ ಗುಂಡಿ ಗಂಡಾಂತರ; ಸ್ವಲ್ಪ ಯಾಮಾರಿದ್ರೂ ಅಪಘಾತ ಖಚಿತ

ಸಿಲಿಕಾನ್​ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿಂದಲೇ ಕೂಡಿದ್ದು, ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವ ಪರಿಸ್ಥಿತಿ ಎದುರಾಗಿದೆ. ಬಿಬಿಎಂಪಿ ಹೆಡ್ ಆಫೀಸ್​ಗೂ ಕೂದಲೆಳೆ ಅಂತರದಲ್ಲಿರುವ ಡಬಲ್ ರೋಡ್ ಬಳಿ ಸಾಲು ಸಾಲು ಗುಂಡಿಗಳು ಬಿದ್ದಿದ್ದು, ಯಾವೊಬ್ಬ ಅಧಿಕಾರಿಗಳು ಕೂಡ ಸರಿಪಡಿಸುವ ಕೆಲಸ ಮಾಡಿಲ್ಲ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರಿನಲ್ಲಿ ತಪ್ಪದ ಗುಂಡಿ ಗಂಡಾಂತರ; ಸ್ವಲ್ಪ ಯಾಮಾರಿದ್ರೂ ಅಪಘಾತ ಖಚಿತ
ಬೆಂಗಳೂರಿನಲ್ಲಿ ತಪ್ಪದ ಗುಂಡಿ ಗಂಡಾಂತರ
Shivaraj
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 04, 2024 | 4:00 PM

Share

ಬೆಂಗಳೂರು, ಅ.04: ರಾಜ್ಯ ರಾಜಧಾನಿ ಬೆಂಗಳೂರಿನ(Bengaluru) ರಸ್ತೆಗಳು ಗುಂಡಿಗಳಿಂದಲೇ ಕೂಡಿದ್ದು, ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವ ಪರಿಸ್ಥಿತಿ ಎದುರಾಗಿದೆ. ಹೌದು, ಸಿಟಿಯ ಹೃದಯ ಭಾಗ ನಗರದ ಡಬಲ್ ರೋಡ್ ಬಳಿ ಸಾಲು ಸಾಲು ಗುಂಡಿಗಳು ಬಿದ್ದಿವೆ. ಜೊತೆಗೆ ಇದು  ಬಿಬಿಎಂಪಿ ಹೆಡ್ ಆಫೀಸ್​ಗೂ ಕೂದಲೆಳೆ ಅಂತರದಲ್ಲಿದೆ. ಹೀಗಿದ್ದರೂ ಯಾವೊಬ್ಬ ಅಧಿಕಾರಿಯು ಇತ್ತ ಕಡೆ ಗಮನಹರಿಸಿಲ್ಲ. ರಸ್ತೆಗಳನ್ನ ಸುಸ್ಥಿತಿಯಲ್ಲಿಡಬೇಕಿದ್ದ ಪಾಲಿಕೆಯೇ ಒಂದಷ್ಟು ದಿನ ಗುಂಡಿ ಮುಚ್ಚುವ ಕೆಲಸ ಮಾಡಿ ಮೌನಕ್ಕೆ ಜಾರಿದ್ದು, ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

ತಪ್ಪದ ಗುಂಡಿ ಗಂಡಾಂತರ

ಇನ್ನು ಇತ್ತೀಚೆಗಷ್ಟೇ 14 ಸಾವಿರ ಗುಂಡಿಗಳನ್ನು ಮುಚ್ಚಲಾಗಿತ್ತು ಎಂದು ಪಾಲಿಕೆ ಹೇಳಿಕೊಂಡಿತ್ತು. ಇದಾದ ಒಂದೇ ಒಂದು ಮಳೆಗೆ ಮತ್ತೆ ಡಾಂಬರು ಕಿತ್ತುಹೋಗಿದೆ. ಇದೇ ಗುಂಡಿಯಿಂದ ಎರೆಡು ಬಾರಿ ಬಿದ್ದಿದ್ದೇವೆ ಎಂದು ವಾಹನ ಸವಾರರೊಬ್ಬರು ಆಕ್ರೋಶ ವ್ಯಕ್ತಪಡಿಸಿದರು. ನಾವು ಟ್ಯಾಕ್ಸ್ ಕಟ್ಟುತ್ತೇವೆ. ಆದರೆ, ನಮ್ಮ ರಸ್ತೆಗಳ ಪರಿಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ. ಇನ್ನು ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ​ ಆದೇಶಕ್ಕೂ ಬಿಬಿಎಂಪಿ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ ಅವರು ಅಲ್ಲಲ್ಲಿ ಗುಂಡಿ ಮುಚ್ಚಿದ ಫೋಟೋ ಹಾಕುತ್ತಾರೆ. ಆದರೆ, ವಾಸ್ತವವಾಗಿ ಇವರ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ.

ಇದನ್ನೂ ಓದಿ:ಬೆಂಗಳೂರು: ಮಳೆಯಿಂದಾಗಿ ಮತ್ತೆ ಬಾಯ್ದೆರೆದ ರಸ್ತೆಗುಂಡಿಗಳು, 15 ದಿನದ ಮಳೆಗೆ 5,500 ರಸ್ತೆಗುಂಡಿ ಸೃಷ್ಟಿ

ಇನ್ನು ಇತ್ತೀಚೆಗೆ 14 ಸಾವಿರ ಗುಂಡಿಗಳನ್ನು ಮುಚ್ಚಿದ್ದೇವೆ ಅಂತಿದ್ದ ಪಾಲಿಕೆ, ಇದೀಗ ಇನ್ನೂ ನೂರಾರು ಗುಂಡಿಗಳಿವೆ ಅದನ್ನೆಲ್ಲ ಮುಚ್ಚುವ ಕೆಲಸ ಮಾಡುತ್ತೇವೆ ಎಂದು ಹಳೆ ಕತೆ ಹೇಳುತ್ತಿದೆ. ಈಗಾಗಲೇ ಮುಚ್ಚಿದ್ದ ಗುಂಡಿಗಳು ಮತ್ತೆ ಓಪನ್ ಆಗಿದ್ದು,ಇದನ್ನು ಕಮಿಷನರ್ ತುಷಾರ್ ಗಿರಿನಾಥ್ ಕೂಡ ಒಪ್ಪಿಕೊಂಡಿದ್ದಾರೆ. ಜೊತೆಗೆ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!