AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ತಪ್ಪದ ಗುಂಡಿ ಗಂಡಾಂತರ; ಸ್ವಲ್ಪ ಯಾಮಾರಿದ್ರೂ ಅಪಘಾತ ಖಚಿತ

ಸಿಲಿಕಾನ್​ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿಂದಲೇ ಕೂಡಿದ್ದು, ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವ ಪರಿಸ್ಥಿತಿ ಎದುರಾಗಿದೆ. ಬಿಬಿಎಂಪಿ ಹೆಡ್ ಆಫೀಸ್​ಗೂ ಕೂದಲೆಳೆ ಅಂತರದಲ್ಲಿರುವ ಡಬಲ್ ರೋಡ್ ಬಳಿ ಸಾಲು ಸಾಲು ಗುಂಡಿಗಳು ಬಿದ್ದಿದ್ದು, ಯಾವೊಬ್ಬ ಅಧಿಕಾರಿಗಳು ಕೂಡ ಸರಿಪಡಿಸುವ ಕೆಲಸ ಮಾಡಿಲ್ಲ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರಿನಲ್ಲಿ ತಪ್ಪದ ಗುಂಡಿ ಗಂಡಾಂತರ; ಸ್ವಲ್ಪ ಯಾಮಾರಿದ್ರೂ ಅಪಘಾತ ಖಚಿತ
ಬೆಂಗಳೂರಿನಲ್ಲಿ ತಪ್ಪದ ಗುಂಡಿ ಗಂಡಾಂತರ
Shivaraj
| Edited By: |

Updated on: Oct 04, 2024 | 4:00 PM

Share

ಬೆಂಗಳೂರು, ಅ.04: ರಾಜ್ಯ ರಾಜಧಾನಿ ಬೆಂಗಳೂರಿನ(Bengaluru) ರಸ್ತೆಗಳು ಗುಂಡಿಗಳಿಂದಲೇ ಕೂಡಿದ್ದು, ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವ ಪರಿಸ್ಥಿತಿ ಎದುರಾಗಿದೆ. ಹೌದು, ಸಿಟಿಯ ಹೃದಯ ಭಾಗ ನಗರದ ಡಬಲ್ ರೋಡ್ ಬಳಿ ಸಾಲು ಸಾಲು ಗುಂಡಿಗಳು ಬಿದ್ದಿವೆ. ಜೊತೆಗೆ ಇದು  ಬಿಬಿಎಂಪಿ ಹೆಡ್ ಆಫೀಸ್​ಗೂ ಕೂದಲೆಳೆ ಅಂತರದಲ್ಲಿದೆ. ಹೀಗಿದ್ದರೂ ಯಾವೊಬ್ಬ ಅಧಿಕಾರಿಯು ಇತ್ತ ಕಡೆ ಗಮನಹರಿಸಿಲ್ಲ. ರಸ್ತೆಗಳನ್ನ ಸುಸ್ಥಿತಿಯಲ್ಲಿಡಬೇಕಿದ್ದ ಪಾಲಿಕೆಯೇ ಒಂದಷ್ಟು ದಿನ ಗುಂಡಿ ಮುಚ್ಚುವ ಕೆಲಸ ಮಾಡಿ ಮೌನಕ್ಕೆ ಜಾರಿದ್ದು, ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

ತಪ್ಪದ ಗುಂಡಿ ಗಂಡಾಂತರ

ಇನ್ನು ಇತ್ತೀಚೆಗಷ್ಟೇ 14 ಸಾವಿರ ಗುಂಡಿಗಳನ್ನು ಮುಚ್ಚಲಾಗಿತ್ತು ಎಂದು ಪಾಲಿಕೆ ಹೇಳಿಕೊಂಡಿತ್ತು. ಇದಾದ ಒಂದೇ ಒಂದು ಮಳೆಗೆ ಮತ್ತೆ ಡಾಂಬರು ಕಿತ್ತುಹೋಗಿದೆ. ಇದೇ ಗುಂಡಿಯಿಂದ ಎರೆಡು ಬಾರಿ ಬಿದ್ದಿದ್ದೇವೆ ಎಂದು ವಾಹನ ಸವಾರರೊಬ್ಬರು ಆಕ್ರೋಶ ವ್ಯಕ್ತಪಡಿಸಿದರು. ನಾವು ಟ್ಯಾಕ್ಸ್ ಕಟ್ಟುತ್ತೇವೆ. ಆದರೆ, ನಮ್ಮ ರಸ್ತೆಗಳ ಪರಿಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ. ಇನ್ನು ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ​ ಆದೇಶಕ್ಕೂ ಬಿಬಿಎಂಪಿ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ ಅವರು ಅಲ್ಲಲ್ಲಿ ಗುಂಡಿ ಮುಚ್ಚಿದ ಫೋಟೋ ಹಾಕುತ್ತಾರೆ. ಆದರೆ, ವಾಸ್ತವವಾಗಿ ಇವರ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ.

ಇದನ್ನೂ ಓದಿ:ಬೆಂಗಳೂರು: ಮಳೆಯಿಂದಾಗಿ ಮತ್ತೆ ಬಾಯ್ದೆರೆದ ರಸ್ತೆಗುಂಡಿಗಳು, 15 ದಿನದ ಮಳೆಗೆ 5,500 ರಸ್ತೆಗುಂಡಿ ಸೃಷ್ಟಿ

ಇನ್ನು ಇತ್ತೀಚೆಗೆ 14 ಸಾವಿರ ಗುಂಡಿಗಳನ್ನು ಮುಚ್ಚಿದ್ದೇವೆ ಅಂತಿದ್ದ ಪಾಲಿಕೆ, ಇದೀಗ ಇನ್ನೂ ನೂರಾರು ಗುಂಡಿಗಳಿವೆ ಅದನ್ನೆಲ್ಲ ಮುಚ್ಚುವ ಕೆಲಸ ಮಾಡುತ್ತೇವೆ ಎಂದು ಹಳೆ ಕತೆ ಹೇಳುತ್ತಿದೆ. ಈಗಾಗಲೇ ಮುಚ್ಚಿದ್ದ ಗುಂಡಿಗಳು ಮತ್ತೆ ಓಪನ್ ಆಗಿದ್ದು,ಇದನ್ನು ಕಮಿಷನರ್ ತುಷಾರ್ ಗಿರಿನಾಥ್ ಕೂಡ ಒಪ್ಪಿಕೊಂಡಿದ್ದಾರೆ. ಜೊತೆಗೆ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!