AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಿಶ್ವವಿದ್ಯಾಲಯದ ಅನುಮತಿ ಇಲ್ಲದೆ ಡಿ ಫಾರ್ಮಾ ಕೋರ್ಸ್: ಖಾಸಗಿ ಕಾಲೇಜಿನ ಆಟ, ವಿದ್ಯಾರ್ಥಿಗಳಿಗೆ ಸಂಕಷ್ಟ

ರೊಚ್ಚಿಗೆದ್ದ ವಿದ್ಯಾರ್ಥಿಗಳು, ಪೋಷಕರನ್ನು ಸಮಾಧಾನಪಡಿಸುವ ಕೈಕಂರ್ಯದಲ್ಲಿ ಚಿಕ್ಕಬಾಣವಾರದಲ್ಲಿರುವ ಆರ್.ಆರ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಆಡಳಿತ ಮಂಡಳಿ ತೊಡಗಿದ್ದು, ವಿದ್ಯಾರ್ಥಿಗಳಿಗೆ ಸಬೂಬು ಹೇಳುತ್ತಿದೆ. ಮುಂದಿನ ತಿಂಗಳು ಪರೀಕ್ಷೆಗೆ ನೀಡುವುದಾಗಿ ಭರವಸೆ ನೀಡುತ್ತಿದೆ.

ಬೆಂಗಳೂರು: ವಿಶ್ವವಿದ್ಯಾಲಯದ ಅನುಮತಿ ಇಲ್ಲದೆ ಡಿ ಫಾರ್ಮಾ ಕೋರ್ಸ್: ಖಾಸಗಿ ಕಾಲೇಜಿನ ಆಟ, ವಿದ್ಯಾರ್ಥಿಗಳಿಗೆ ಸಂಕಷ್ಟ
ಬೆಂಗಳೂರು: ವಿಶ್ವವಿದ್ಯಾಲಯದ ಅನುಮತಿ ಇಲ್ಲದೆ ಡಿ ಫಾರ್ಮಾ ಕೋರ್ಸ್
TV9 Web
| Edited By: |

Updated on: Jan 11, 2023 | 3:20 PM

Share

ಬೆಂಗಳೂರು: ವಿಶ್ವವಿದ್ಯಾಲಯದ ಅನುಮತಿ ಇಲ್ಲದೆ ಹೆಸರಘಟ್ಟ ರಸ್ತೆಯಲ್ಲಿರುವ ಆರ್.ಆರ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬ ಖಾಸಗಿ ಕಾಲೇಜು ಡಿ-ಫಾರ್ಮಾ ಕೋರ್ಸ್ (RR College of Pharmacy -RRCP, Bangalore) ಗೆ ಅವಕಾಶ ನೀಡಿದ್ದು, ಇದರಿಂದ ವಿದ್ಯಾರ್ಥಿಗಳು (Students) ಈಗ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ವಸೂಲಿ ಮಾಡಿರುವ ಆರ್.ಆರ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿಗಳಿಗೆ ಇದೀಗ ಪರೀಕ್ಷೆ (Exams) ಬರೆಯಲು ಅವಕಾಶ ಇಲ್ಲವಾಗಿದ್ದು, ವಿದ್ಯಾರ್ಥಿಗಳು ಪೋಷಕರು ಕಂಗಾಲಾಗಿದ್ದಾರೆ.

ಕಾಲೇಜು ಗೇಟಿಗೆ ಬೀಗ ಹಾಕಿದ ವಿದ್ಯಾರ್ಥಿಗಳು, ಗಲಾಟೆ: ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ RR ಕಾಲೇಜು ಡಿ-ಫಾರ್ಮಾ ಕೋರ್ಸ್​​ಗಾಗಿ ಕರ್ನಾಟಕದ ವಿದ್ಯಾರ್ಥಿಗಳಿಂದ ಒಂದು ವರ್ಷಕ್ಕೆ 51 ಸಾವಿರ ರೂ ಶುಲ್ಕ ಪಡೆದಿದೆ. ಅದೇ ರೀತಿ ಹೊರ ರಾಜ್ಯದ ವಿದ್ಯಾರ್ಥಿಗಳಿಂದ 1.5 ಲಕ್ಷ ರೂಪಾಯಿ ಪಡೆದಿದೆ. ಹೀಗೆ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ರೂಪಾಯಿ ಫೀಸ್ ವಸೂಲಿ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಿನ್ಸಿಪಲ್ ಕಚೇರಿಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾಂಶುಪಾಲರು ಹಾಗೂ ಪೋಷಕರ ನಡುವೆ ವಾಗ್ವಾದವೂ ನಡೆದಿದೆ. ಈ ಕಾಲೇಜು ಎಲ್ಲೂ ರಿಜಿಸ್ಟರ್ ಆಗಿಯೇ ಇಲ್ಲ. ನಾವು ಪಾವತಿಸಿದ ಶುಲ್ಕ ವಾಪಸ್ ಕೊಡ್ತೀವಿ ಅಂತಾ ಈಗ ಹೇಳ್ತಿದ್ದಾರೆ. ನಮಗೆ ಫೀಸ್ ಬೇಡ, ಪರೀಕ್ಷೆ ಬೇಕು. ಕೂಡಲೇ ಅನ್ಯಾಯ ಸರಿಪಡಿಸುವಂತೆ ವಿದ್ಯಾರ್ಥಿಗಳು, ಪೋಷಕರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ಸಬೂಬು ಹೇಳುತ್ತಿರುವ ಕಾಲೇಜು ಆಡಳಿತ ಮಂಡಳಿ:

ರೊಚ್ಚಿಗೆದ್ದ ವಿದ್ಯಾರ್ಥಿಗಳು, ಪೋಷಕರನ್ನು ಸಮಾಧಾನಪಡಿಸುವ ಕೈಕಂರ್ಯದಲ್ಲಿ ಚಿಕ್ಕಬಾಣವಾರದಲ್ಲಿರುವ ಆರ್.ಆರ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಆಡಳಿತ ಮಂಡಳಿ ತೊಡಗಿದ್ದು, ವಿದ್ಯಾರ್ಥಿಗಳಿಗೆ ಸಬೂಬು ಹೇಳುತ್ತಿದೆ. ಮುಂದಿನ ತಿಂಗಳು ಪರೀಕ್ಷೆಗೆ ನೀಡುವುದಾಗಿ ಭರವಸೆ ನೀಡುತ್ತಿದೆ.

ಕಳೆದ ವರ್ಷ ನಮ್ಮ ಸೀನಿಯರ್ಸ್ ಗೂ ಸಹ ಹೀಗೆ ಆಗಿತ್ತು. ಇವತ್ತು ನಮಗೂ ಅದೇ ಪರಿಸ್ಥಿತಿ ಆಗಿದೆ. ಆಡಳಿತ ಮಂಡಳಿಯ ಮೇಲೆ ನಮಗೆ ನಂಬಿಕೆಯೇ ಇಲ್ಲವಾಗಿದೆ. ನಮಗೆ ಶುಲ್ಕ ವಾಪಸ್ ಬೇಡ, ಪರೀಕ್ಷೆ ಕೊಡಿ. ಮುಂದಿನ ತಿಂಗಳು ವ್ಯವಸ್ಥೆ ಮಾಡ್ತೀವಿ ಅಂತಿದೀರಿ. ನಮಗೆ ಇವತ್ತೇ ಪರೀಕ್ಷೆ ಕೊಡಬೇಕು ಅಂತಾ ಪಟ್ಟು ಹಿಡಿದ ವಿದ್ಯಾರ್ಥಿಗಳು ಪ್ರಾಂಶುಪಾಲರ ಕಚೇರಿಯಲ್ಲೇ ಧರಣಿಗೆ ಮುಂದಾಗಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ