ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 1.5 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಇದೀಗ ಚಿನ್ನ ಅಕ್ರಮ ಸಾಗಾಟ ಹೆಚ್ಚಾಗತೊಡಗಿದೆ. ಬುಧವಾರವಷ್ಟೇ ದುಬೈಯಿಂದ ಬಂದ ವ್ಯಕ್ತಿಯೊಬ್ಬನಿಂದ 40 ಐಫೋನ್ ಹಾಗೂ 5 ಆ್ಯಪಲ್ ವಾಚ್​ಗಳನ್ನು ವಶಕ್ಕೆ ಪಡೆದಿದ್ದ ಕಸ್ಟಮ್ಸ್ ಅಧಿಕಾರಿಗಳು, ಇಂದು 1.68 ಕೋಟಿ ರೂಪಾಯಿ ಮೌಲ್ಯದ 2 ಕೆಜಿ 579 ಗ್ರಾಂ ಚಿನ್ನ ಜಪ್ತಿ ಮಾಡಿದ್ದಾರೆ.

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 1.5 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ
ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 1.5 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ
Edited By:

Updated on: Jul 25, 2024 | 9:30 AM

ಬೆಂಗಳೂರು, ಜುಲೈ 25: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.68 ಕೋಟಿ ರೂಪಾಯಿ ಮೌಲ್ಯದ 2 ಕೆಜಿ 579 ಗ್ರಾಂ ಚಿನ್ನವನ್ನು ಜಪ್ತಿ ಕಸ್ಟಮ್ಸ್​ ಅಧಿಕಾರಿಗಳು ಗುರುವಾರ ಜಪ್ತಿ ಮಾಡಿದ್ದಾರೆ. ಚಿನ್ನ ಸಾಗಿಸುತ್ತಿದ್ದದ್ದ ಮುರ್ತಾಜಿಮ್, ಶೇಖ್ ಮೊಹಮ್ಮದ್ ಇಮ್ರಾನ್ ಎಂಬವರನ್ನು​​​ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ದುಬೈನಿಂದ ಬೆಂಗಳೂರಿಗೆ EK 564 ವಿಮಾನದಲ್ಲಿ ಬಂದಿದ್ದರು.

ಆರಪಿಗಳು ವಿದೇಶದಿಂದ ಬಟ್ಟೆಗಳಲ್ಲಿ ಮರೆಮಾಚಿ ಚಿನ್ನ ತಂದಿದ್ದರು. ಸದ್ಯ ಇಬ್ಬರನ್ನೂ ಕಸ್ಟಮ್ಸ್​ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ದುಬೈಯಿಂದ ಬಂದ ವ್ಯಕ್ತಿಯೊಬ್ಬರ ಬ್ಯಾಗ್​​ನಲ್ಲಿ ಬರೋಬ್ಬರಿ 40 ಐಫೋನ್ ಹಾಗೂ 5 ಆ್ಯಪಲ್ ವಾಚ್​ಗಳು ಕಂಡುಬಂದು ಅದನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಪ್ರಕರಣ ಬುಧವಾರವಷ್ಟೇ ವರದಿಯಾಗಿತ್ತು. ಇದೀಗ ಅದರ ಬೆನ್ನಲ್ಲೇ 1.68 ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.

ಹಿಟ್ ಆ್ಯಂಡ್ ರನ್: ವೃದ್ಧ ಗಂಭೀರ

ಬೆಂಗಳೂರಿನ ಭಾಷ್ಯಂ ಸರ್ಕಲ್ ಸಮೀಪದ ರಸ್ತೆಯಲ್ಲಿ ಪಾದಚಾರಿ ವಯೋವೃದ್ಧರೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ವಾಹನ ಸವಾರ ಪರಾರಿಯಾಗಿದ್ದಾನೆ. 94 ವರ್ಷದ ರಾಜನ್ ಎಂಬವರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ತಲೆಗೆ ಏಟಾಗಿದೆ. ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್​​​​ಸ್ಟೇಬಲ್ ಮಲ್ಲಿಕಾರ್ಜುನ್ ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾಜನ್ ತೀವ್ರ ರಕ್ತಸ್ರಾವದಿಂದ ಅಸ್ವಸ್ಥರಾಗಿದ್ದರು.

ಇದನ್ನೂ ಓದಿ: ದುಬೈನಿಂದ ಬೆಂಗಳೂರಿಗೆ ಬಂದವನಿಂದ 40 ಐಪೋನ್, 5 ಆ್ಯಪಲ್ ವಾಚ್ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಅಪಘಾತದ ದೃಶ್ಯ ಏರಿಯಾದ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ 10:40 ರ ವೇಳೆಗೆ ಅಪಘಾತ ಸಂಭವಿಸಿತ್ತು. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಳುವಿಗೆ ಚಿಕಿತ್ಸೆ ಮುಂದುವರಿದಿದೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us