AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಸ್ವಚ್ಛ, ಕಸ ಮುಕ್ತ ಪ್ರಶಸ್ತಿಗೆ ಬೆಂಗಳೂರು ಆಯ್ಕೆ; ರಾಷ್ಟ್ರಪತಿ ರಾಮನಾಥ್ ಕೋವಿಂದ್​ರಿಂದ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಪ್ರಶಸ್ತಿಯನ್ನು ನೀಡಲಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಕೆಲ ಅಧಿಕಾರಿಗಳು ಸ್ವಚ್ಛ ಸರ್ವೇಕ್ಷಣಾ 2021 ಪ್ರಶಸ್ತಿ ಪಡೆಯಲಿದ್ದಾರೆ.

ಕೇಂದ್ರದ ಸ್ವಚ್ಛ, ಕಸ ಮುಕ್ತ ಪ್ರಶಸ್ತಿಗೆ ಬೆಂಗಳೂರು ಆಯ್ಕೆ; ರಾಷ್ಟ್ರಪತಿ ರಾಮನಾಥ್ ಕೋವಿಂದ್​ರಿಂದ ಪ್ರಶಸ್ತಿ ಪ್ರದಾನ
ಬಿಬಿಎಂಪಿ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: preethi shettigar

Updated on:Nov 20, 2021 | 1:21 PM

ಬೆಂಗಳೂರು: ಕೇಂದ್ರದ ಸ್ವಚ್ಛ, ಕಸ ಮುಕ್ತ ಪ್ರಶಸ್ತಿಗೆ ಬೆಂಗಳೂರು ಆಯ್ಕೆಯಾಗಿದೆ. ಸಫಾಯಿ ಮಿತ್ರ ಸುರಕ್ಷಾ ಚಾಲೆಂಜ್ ಮತ್ತು ಕಸ ಮುಕ್ತ ನಗರಗಳ ಅಡಿಯಲ್ಲಿ ಅರ್ಜಿಗಳನ್ನು ಈ ಹಿಂದೆ ಆಹ್ವಾನಿಸಿತ್ತು. ಆ ಪ್ರಕಾರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಸರ್ವೇಕ್ಷಣಾ 2021 ಪ್ರಶಸ್ತಿ ನೀಡುತ್ತಿದ್ದು, ಇದರಲ್ಲಿ ಬೆಂಗಳೂರು ಆಯ್ಕೆಯಾಗಿದೆ. ಈ ಪ್ರಶಸ್ತಿಗೆ ರಾಜ್ಯದ ಒಟ್ಟು 9 ನಗರಗಳು ಸ್ವಚ್ಛ ನಗರಗಳೆಂದು (Clean city) ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಪ್ರಶಸ್ತಿಯನ್ನು ನೀಡಲಿದ್ದಾರೆ. ಬಿಬಿಎಂಪಿ (BBMP) ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಕೆಲ ಅಧಿಕಾರಿಗಳು ಸ್ವಚ್ಛ ಸರ್ವೇಕ್ಷಣಾ 2021 ಪ್ರಶಸ್ತಿ ಪಡೆಯಲಿದ್ದಾರೆ.

ರಾಜ್ಯಕ್ಕೆ ಒಟ್ಟು 9 ಪ್ರಶಸ್ತಿಗಳು 1) ಕರ್ನಾಟಕ ರಾಜ್ಯ 2) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 3) ಹುಬ್ಬಳ್ಳಿ-ಧಾರವಾಡ 4) ಮೈಸೂರು 5) ಮುಧೋಳ 6) ಹೊಸದುರ್ಗ 7) ಕೃಷ್ಣರಾಜನಗರ 8) ಕುಮಟಾ 9) ಪಿರಿಯಾಪಟ್ಟಣ

ಮೂವರು ವಲಯ ಜಂಟಿ ಆಯುಕ್ತರ ವರ್ಗಾವಣೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೂವರು ವಲಯ ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡಲಾಗಿದೆ. ಮೂವರು ವಲಯ ಜಂಟಿ ಆಯುಕ್ತರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅದರಂತೆ, ಯಲಹಂಕ ವಲಯ ಜಂಟಿ ಆಯುಕ್ತ ಡಾ.ಡಿ. ಆರ್​​ ಅಶೋಕ್, ಪೂರ್ವ ವಲಯ ಜಂಟಿ ಆಯುಕ್ತೆ ಕೆ.ಆರ್​​. ಪಲ್ಲವಿ, ದಕ್ಷಿಣ ವಲಯ ಜಂಟಿ‌ ಆಯುಕ್ತ ವೀರಭದ್ರಸ್ವಾಮಿ ವರ್ಗಾವಣೆ ಮಾಡಲಾಗಿದೆ.

ಕೆ.ಆರ್​​. ಪಲ್ಲವಿ, ವೀರಭದ್ರಸ್ವಾಮಿ ಮಾತೃ ಇಲಾಖೆಗೆ ವಾಪಸ್ ಆಗಿದ್ದಾರೆ. ಪೌರಾಡಳಿತ ಇಲಾಖೆಗೆ ಕೆ.ಆರ್​​. ಪಲ್ಲವಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ವೀರಭದ್ರಸ್ವಾಮಿ ವಾಪಸ್ ಆಗಿದ್ದಾರೆ. ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತರಾಗಿ ಆರ್. ಶಿಲ್ಪಾ, ಯಲಹಂಕ ವಲಯ ಜಂಟಿ ಆಯುಕ್ತರಾಗಿ ಪಿ.ವಿ. ಪೂರ್ಣಿಮಾ, ದಕ್ಷಿಣ ವಲಯ ಜಂಟಿ ಆಯುಕ್ತರಾಗಿ ಡಾ. ಜಗದೀಶ್ ನಾಯಕ್ ನೇಮಕಗೊಂಡಿದ್ದಾರೆ.

ಇದನ್ನೂ ಓದಿ:

ಬಿ ಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ; ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಂದ ಪ್ರಶಸ್ತಿ ಪ್ರದಾನ

Sunil Chhetri: ಸೂಪರ್‌ಸ್ಟಾರ್‌ ಆದ ನಿಮ್ಮೆಲ್ಲರಿಂದಲೇ! ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಬಳಿಕ ಭಾವುಕರಾದ ಸುನಿಲ್ ಛೆಟ್ರಿ

BBMP: ಮೂವರು ವಲಯ ಜಂಟಿ ಆಯುಕ್ತರ ವರ್ಗಾವಣೆ

Published On - 1:14 pm, Sat, 20 November 21

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ