AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಣೆಯಾಗಿದ್ದ ಅಸ್ಸಾಂ ಮೂಲದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರವೆಸಗಿ ಮುಖ ಜಜ್ಜಿ ಕೊಲೆ ಮಾಡಿದ ಕಿರಾತಕರು!

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಭೀಕರ ಕೊಲೆಯಾಗಿದೆ. ಗುರುವಾರ ಸಂಜೆ ಕಾಣೆಯಾಗಿದ್ದ ಬಾಲಕಿಯ ನಗ್ನ ಶವ ಶನಿವಾರ ಬೋಳುಗುಟ್ಟದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು: ಕಾಣೆಯಾಗಿದ್ದ ಅಸ್ಸಾಂ ಮೂಲದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರವೆಸಗಿ ಮುಖ ಜಜ್ಜಿ ಕೊಲೆ ಮಾಡಿದ ಕಿರಾತಕರು!
ಬಾಲಕಿ ಶವವಾಗಿ ಪತ್ತೆ
TV9 Web
| Edited By: |

Updated on: Mar 28, 2026 | 5:00 PM

Share

ಬೆಂಗಳೂರು , ಮಾ.28 : ರಾಜಧಾನಿಯ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಗುರುವಾರ ಸಂಜೆ ಕಾಣೆಯಾಗಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಶವ ಶನಿವಾರ (ಮಾ.28) ಬೋಳುಗುಟ್ಟದ ನೀಲಗಿರಿ ತೋಪಿನಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅಸ್ಸಾಂ ಮೂಲದ ಈ ಬಾಲಕಿ ವಿಟ್ಟಸಂದ್ರ ಸಮೀಪದ ಶೆಡ್ ಒಂದರಲ್ಲಿ ತನ್ನ ಪೋಷಕರ ಜೊತೆ ವಾಸವಿದ್ದಳು. ಗುರುವಾರ ಸಂಜೆ ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ದಿಢೀರ್ ಕಾಣೆಯಾಗಿದ್ದಳು. ಪೋಷಕರು ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದರೂ ಮಗು ಪತ್ತೆಯಾಗಿರಲಿಲ್ಲ. ಈ ಸಂಬಂಧ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು.

ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾಗ, ಇಂದು ಸಂಜೆ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಶವವು ಸಂಪೂರ್ಣ ನಗ್ನ ಸ್ಥಿತಿಯಲ್ಲಿದ್ದು, ಕಿರಾತಕರು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ನಂತರ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ, ಮಗುವಿನ ಗುರುತು ಪತ್ತೆಯಾಗಬಾರದೆಂಬ ಉದ್ದೇಶದಿಂದ ಮುಖವನ್ನು ಕಲ್ಲಿನಿಂದ ಜಜ್ಜಿ ವಿಕೃತವಾಗಿ ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!