AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಒಂದು ವರ್ಷದ ಮಗುವಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯ ವೈದ್ಯರು ಒಂದು ವರ್ಷದ ಮಗುವಿಗೆ ಯಶಸ್ವಿಯಾಗಿ ಹೃದಯ ಕಸಿ ಶಸ್ತ್ರ ಚಿಕಿತ್ಸೆ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಹೃದಯ ವೈಫಲ್ಯದಿಂದ ಬಳಲುತ್ತಿದ್ದ ಮಗುವಿಗೆ 72 ಗಂಟೆಗಳ ಒಳಗೆ ಶಸ್ತ್ರಚಿಕಿತ್ಸೆ ಅವಶ್ಯಕವಾಗಿತ್ತು. ಹೀಗಾಗಿ ಹೃದಯ ದಾನ ಪಡೆದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಗು ಈಗ ಚೇತರಿಸಿಕೊಂಡಿದೆ.

ಬೆಂಗಳೂರು: ಒಂದು ವರ್ಷದ ಮಗುವಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Nov 22, 2024 | 10:59 AM

ಬೆಂಗಳೂರು, ನವೆಂಬರ್​ 22: ಹೃದಯ ವೈಪಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಒಂದು ವರ್ಷದ ಮಗುವಿಗೆ ಯಶಸ್ವಿಯಾಗಿ ಹೃದಯ ಕಸಿ ಶಸ್ತ್ರಚಿಕಿತ್ಸೆ (Heart transplant) ಮಾಡುವ ಮೂಲಕ ನಾರಾಯಣ ಹೆಲ್ತ್​ಸಿಟಿಯ (Narayana Health) ವೈದ್ಯರ ತಂಡ ದಾಖಲೆ ನಿರ್ಮಿಸಿದೆ.

ಹೊಸ ಹೃದಯ ಪಡೆದಿರುವ ಮಗು 10 ತಿಂಗಳಿದ್ದಾಗ ಹೃದಯ ಸಮಸ್ಯೆ ಕಾಣಿಸಿಕೊಂಡಿತ್ತು. ಹೃದಯ ಸಮಸ್ಯೆಯಿಂದ ಕಾಮಲೆ, ತೂಕನಷ್ಟ, ಕಿಬ್ಬೊಟ್ಟೆಯಲ್ಲಿ ದ್ರವ ಶೇಖರಣೆ ಮತ್ತು ಬೇಕಾದಷ್ಟು ಆಹಾರ ತಿನ್ನಲಾಗದೆ ಗಂಭೀರ ಸ್ವರೂಪ ಪಡೆದಿತ್ತು. ಮಗುವಿನ ಆರೋಗ್ಯದಲ್ಲಿ ಉಂಟಾದ ಏರುಪೇರನ್ನು ಗಮನಿಸಿದ ಪೋಷಕರು ಬೆಂಗಳೂರಿನ ನಾರಾಯಣ ಹೆಲ್ತ್​ ಸಿಟಿಗೆ ಕರೆತಂದಿದ್ದರು.

ಇಲ್ಲಿನ ವೈದ್ಯರು ಮಗುವನ್ನು ಪರಿಶೀಲಿಸಿದಾಗ ರಿಸ್ಟ್ರಿಕ್ಟಿವ್​ ಕಾರ್ಡಿಯೋ ಮಯೀಪತಿ (ಆರ್​ಸಿಎಂ) ಎಂಬ ಹೆಸರಿನ ಹೃದಯ ಸಂಬಂಧಿತ ಕಾಯಿಲೆ ಇದ್ದು, ಅಂತಿಮ ಘಟ್ಟದಲ್ಲಿರುವುದು ಪತ್ತೆ ಹಚ್ಚಿದ್ದಾರೆ. 72 ಗಂಟೆಯೊಳಗೆ ಮಗುವಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ತೀರ್ಮಾನಿಸಿ, ಒಂದು ವರ್ಷದ ಮಗುವಿಗೆ ಹೊಂದುವ ಹೃದಯಕ್ಕೆ ಹುಡಕಾಟ ನಡೆಸಿದ್ದಾರೆ.

ಇದನ್ನೂ ಓದಿ: Video: ಕೋತಿಗೆ ಹೃದಯಾಘಾತ; ಸಿಪಿಆರ್ ಮೂಲಕ ಜೀವ ಉಳಿಸಿದ ವ್ಯಕ್ತಿ

ಆಗ, ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೆದುಳು ನಿಷ್ಕ್ರಿಯಗೊಂಡಿತ್ತು. ಆಗ, ವೈದ್ಯರು ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿನ ಪೋಷಕರಿಗೆ ಪರಿಸ್ಥಿತಿಯನ್ನು ವಿವರಿಸಿ ಬಾಲಕನ ಹೃದಯವನ್ನು ದಾನವಾಗಿ ಪಡೆದಿದ್ದಾರೆ.

ಬಳಿಕ, ರಿಸ್ಟ್ರಿಕ್ಟಿವ್​ ಕಾರ್ಡಿಯೋ ಮಯೀಪತಿ ಕಾಯಿಲೆಯಿಂದ ಬಳಲುತ್ತಿದ್ದ ಒಂದು ವರ್ಷದ ಬಾಲಕನಿಗೆ ಆಗಸ್ಟ್​ 18 ರಂದು ಹೊಸ ಹೃದಯ ಅಳವಡಿಸಿದ್ದಾರೆ. ಆಸ್ಪತ್ರೆಯಲ್ಲಿ ಸುಮಾರು ಎರಡು ತಿಂಗಳ ಚೇತರಿಕೆಯ ನಂತರ ಮಗುವನ್ನು ಡಿಸ್ಚಾರ್ಜ್​ ಮಾಡಿದ್ದಾತೆ. ಈಗ ಮಗು ಲವಲವಿಕೆಯಿಂದ ಹಾಗೂ ಆಹಾರ ಸೇವನೆ ಮತ್ತು ತೂಕ ವೃದ್ಧಿಯಲ್ಲಿ ಚೇತರಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:06 am, Fri, 22 November 24

ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್