AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಒಂದು ವರ್ಷದ ಮಗುವಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯ ವೈದ್ಯರು ಒಂದು ವರ್ಷದ ಮಗುವಿಗೆ ಯಶಸ್ವಿಯಾಗಿ ಹೃದಯ ಕಸಿ ಶಸ್ತ್ರ ಚಿಕಿತ್ಸೆ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಹೃದಯ ವೈಫಲ್ಯದಿಂದ ಬಳಲುತ್ತಿದ್ದ ಮಗುವಿಗೆ 72 ಗಂಟೆಗಳ ಒಳಗೆ ಶಸ್ತ್ರಚಿಕಿತ್ಸೆ ಅವಶ್ಯಕವಾಗಿತ್ತು. ಹೀಗಾಗಿ ಹೃದಯ ದಾನ ಪಡೆದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಗು ಈಗ ಚೇತರಿಸಿಕೊಂಡಿದೆ.

ಬೆಂಗಳೂರು: ಒಂದು ವರ್ಷದ ಮಗುವಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Nov 22, 2024 | 10:59 AM

Share

ಬೆಂಗಳೂರು, ನವೆಂಬರ್​ 22: ಹೃದಯ ವೈಪಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಒಂದು ವರ್ಷದ ಮಗುವಿಗೆ ಯಶಸ್ವಿಯಾಗಿ ಹೃದಯ ಕಸಿ ಶಸ್ತ್ರಚಿಕಿತ್ಸೆ (Heart transplant) ಮಾಡುವ ಮೂಲಕ ನಾರಾಯಣ ಹೆಲ್ತ್​ಸಿಟಿಯ (Narayana Health) ವೈದ್ಯರ ತಂಡ ದಾಖಲೆ ನಿರ್ಮಿಸಿದೆ.

ಹೊಸ ಹೃದಯ ಪಡೆದಿರುವ ಮಗು 10 ತಿಂಗಳಿದ್ದಾಗ ಹೃದಯ ಸಮಸ್ಯೆ ಕಾಣಿಸಿಕೊಂಡಿತ್ತು. ಹೃದಯ ಸಮಸ್ಯೆಯಿಂದ ಕಾಮಲೆ, ತೂಕನಷ್ಟ, ಕಿಬ್ಬೊಟ್ಟೆಯಲ್ಲಿ ದ್ರವ ಶೇಖರಣೆ ಮತ್ತು ಬೇಕಾದಷ್ಟು ಆಹಾರ ತಿನ್ನಲಾಗದೆ ಗಂಭೀರ ಸ್ವರೂಪ ಪಡೆದಿತ್ತು. ಮಗುವಿನ ಆರೋಗ್ಯದಲ್ಲಿ ಉಂಟಾದ ಏರುಪೇರನ್ನು ಗಮನಿಸಿದ ಪೋಷಕರು ಬೆಂಗಳೂರಿನ ನಾರಾಯಣ ಹೆಲ್ತ್​ ಸಿಟಿಗೆ ಕರೆತಂದಿದ್ದರು.

ಇಲ್ಲಿನ ವೈದ್ಯರು ಮಗುವನ್ನು ಪರಿಶೀಲಿಸಿದಾಗ ರಿಸ್ಟ್ರಿಕ್ಟಿವ್​ ಕಾರ್ಡಿಯೋ ಮಯೀಪತಿ (ಆರ್​ಸಿಎಂ) ಎಂಬ ಹೆಸರಿನ ಹೃದಯ ಸಂಬಂಧಿತ ಕಾಯಿಲೆ ಇದ್ದು, ಅಂತಿಮ ಘಟ್ಟದಲ್ಲಿರುವುದು ಪತ್ತೆ ಹಚ್ಚಿದ್ದಾರೆ. 72 ಗಂಟೆಯೊಳಗೆ ಮಗುವಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ತೀರ್ಮಾನಿಸಿ, ಒಂದು ವರ್ಷದ ಮಗುವಿಗೆ ಹೊಂದುವ ಹೃದಯಕ್ಕೆ ಹುಡಕಾಟ ನಡೆಸಿದ್ದಾರೆ.

ಇದನ್ನೂ ಓದಿ: Video: ಕೋತಿಗೆ ಹೃದಯಾಘಾತ; ಸಿಪಿಆರ್ ಮೂಲಕ ಜೀವ ಉಳಿಸಿದ ವ್ಯಕ್ತಿ

ಆಗ, ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೆದುಳು ನಿಷ್ಕ್ರಿಯಗೊಂಡಿತ್ತು. ಆಗ, ವೈದ್ಯರು ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿನ ಪೋಷಕರಿಗೆ ಪರಿಸ್ಥಿತಿಯನ್ನು ವಿವರಿಸಿ ಬಾಲಕನ ಹೃದಯವನ್ನು ದಾನವಾಗಿ ಪಡೆದಿದ್ದಾರೆ.

ಬಳಿಕ, ರಿಸ್ಟ್ರಿಕ್ಟಿವ್​ ಕಾರ್ಡಿಯೋ ಮಯೀಪತಿ ಕಾಯಿಲೆಯಿಂದ ಬಳಲುತ್ತಿದ್ದ ಒಂದು ವರ್ಷದ ಬಾಲಕನಿಗೆ ಆಗಸ್ಟ್​ 18 ರಂದು ಹೊಸ ಹೃದಯ ಅಳವಡಿಸಿದ್ದಾರೆ. ಆಸ್ಪತ್ರೆಯಲ್ಲಿ ಸುಮಾರು ಎರಡು ತಿಂಗಳ ಚೇತರಿಕೆಯ ನಂತರ ಮಗುವನ್ನು ಡಿಸ್ಚಾರ್ಜ್​ ಮಾಡಿದ್ದಾತೆ. ಈಗ ಮಗು ಲವಲವಿಕೆಯಿಂದ ಹಾಗೂ ಆಹಾರ ಸೇವನೆ ಮತ್ತು ತೂಕ ವೃದ್ಧಿಯಲ್ಲಿ ಚೇತರಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:06 am, Fri, 22 November 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ