AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್​ ಸಮ್ಮಿಟ್ ಆಯೋಜನೆ

ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್​ ಸಮ್ಮಿಟ್ ನಡೆಯಲಿದೆ. ಸಮ್ಮಿಟ್​ನಲ್ಲಿ 30 ದೇಶಗಳ 350ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಏಷ್ಯಾದ ಅತಿದೊಡ್ಡ ಟೆಕ್ ಸಮ್ಮಿಟ್ ಇದಾಗಿದೆ ಎಂದರು. ಕಳೆದ 25 ಸಮ್ಮಿಟ್​​ಗಳಲ್ಲಿ ತೆಗೆದುಕೊಂಡ ನಿರ್ಣಯ ಸಕ್ಸಸ್ ಆಗಿದೆ ಎಂದು ​ಐಟಿ-ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್​ ಸಮ್ಮಿಟ್ ಆಯೋಜನೆ
ಸಚಿವ ಪ್ರಿಯಾಂಕ್​ ಖರ್ಗೆ
ಕಿರಣ್​ ಹನಿಯಡ್ಕ
| Edited By: ವಿವೇಕ ಬಿರಾದಾರ|

Updated on: Nov 25, 2023 | 2:06 PM

Share

ಬೆಂಗಳೂರು ನ.25: ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್​ ಸಮ್ಮಿಟ್ (Bengaluru Tech Summit) ನಡೆಯಲಿದೆ ಎಂದು ​ಐಟಿ-ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಟೆಕ್​ ಸಮ್ಮಿಟ್​ ನಡೆಯಲಿದೆ. ‘ಬ್ರೇಕಿಂಗ್ ಬೌಂಡರಿ’ ಘೋಷ ವಾಕ್ಯದೊಂದಿಗೆ ಸಮ್ಮಿಟ್ ನಡೆಯುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 26ನೇ ಟೆಕ್ ಸಮ್ಮಿಟ್ ಉದ್ಘಾಟಿಸಲಿದ್ದಾರೆ.

ಸಮ್ಮಿಟ್​ನಲ್ಲಿ 30 ದೇಶಗಳ 350ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಏಷ್ಯಾದ ಅತಿದೊಡ್ಡ ಟೆಕ್ ಸಮ್ಮಿಟ್ ಇದಾಗಿದೆ ಎಂದರು. ಕಳೆದ 25 ಸಮ್ಮಿಟ್​​ಗಳಲ್ಲಿ ತೆಗೆದುಕೊಂಡ ನಿರ್ಣಯ ಸಕ್ಸಸ್ ಆಗಿದೆ. ಚಂದ್ರಯಾನ-3 ಪಯಣದ ಕುರಿತು ವಿಶೇಷ ಪ್ರದರ್ಶನ ಇರಲಿದೆ. ಚಂದ್ರಯಾನದಲ್ಲಿ ಭಾಗಿಯಾದ ಸಣ್ಣ ಸಣ್ಣ ಕಂಪನಿಗಳಿಗೆ ಸಹ ಸಮ್ಮಿಟ್​ನಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.

ಐಟಿ ಮತ್ತು DeepTech, Metaverse ಮತ್ತು WEB 3.0, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್‌ಗಳು, ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಟೆಲಿಕಾಂ ಮತ್ತು 6G ನಂತಹ ತಂತ್ರಜ್ಞಾನ-ಸಂಬಂಧಿತ ಕ್ಷೇತ್ರಗಳಲ್ಲಿ ಭಾರತದ ಕ್ಷಿಪ್ರ ಪ್ರಗತಿಯನ್ನು ಪ್ರದರ್ಶಿಸುವ ಇದು ವೇದಿಕೆಯಾಗಲಿದೆ.

ಈ ಟೆಕ್​ ಸಮ್ಮಿಟ್​ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವಕ್ಕೆ ಸಾಕ್ಷಿಯಾಗಲಿದೆ. ಈ ಟೆಕ್​ ಸಮ್ಮಿಟ್​ನಲ್ಲಿ ಇಸ್ರೋದ ಗಮನಾರ್ಹ ಸಾಧನೆಗಳು ಮತ್ತು ಬಾಹ್ಯಾಕಾಶ ಪರಿಶೋಧನೆಗೆ ನೀಡಿದ ಕೊಡುಗೆಗಳ ಪ್ರದರ್ಶನವಾಗಲಿದೆ. ಟೆಕ್​ ಸಮ್ಮಿಟ್​​ ಬಾಹ್ಯಾಕಾಶ ಉದ್ಯಮದಲ್ಲಿ ಖಾಸಗಿ ಹೂಡಿಕೆದಾರರನ್ನು ಆಕರ್ಷಿಸುವ ಸರ್ಕಾರದ ಮುಂದುವರೆದ ಭಾಗವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!