AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆಟೋಗಳಲ್ಲಿ ಪ್ರಯಾಣಿಸುವ ಮುನ್ನ ಎಚ್ಚರ: ಪರ್ಮಿಟ್ ರಿನಿವಲ್ ಆಗದೆ ಸಂಚರಿಸುತ್ತಿವೆ ಸಾವಿರಾರು ಆಟೋಗಳು

ಬೆಂಗಳೂರಿನಲ್ಲಿ ಪ್ರತಿನಿತ್ಯ ಸಂಚಾರ ಮಾಡುತ್ತಿರುವ ಸಾವಿರಾರು ಆಟೋಗಳ ಪರ್ಮಿಟ್ ರಿನಿವಲ್ ಆಗುತ್ತಿಲ್ಲ ಎಂಬುದು ತಿಳಿದುಬಂದಿದೆ. ಕಾರಣ ವಾಹನ್- 3 ಅಡಿಯಲ್ಲಿ ನೋಂದಣಿ ಆಗಿರುವ ಆಟೋಗಳ ಮಾಹಿತಿ ರಾಜ್ಯ ಸಾರಿಗೆ ಇಲಾಖೆಯಲ್ಲಿ ಇಲ್ಲದಿರುವುದು! ಇದರಿಂದ ಆಟೋ ಪರ್ಮಿಟ್ ರಿನಿವಲ್ ಆಗುತ್ತಿಲ್ಲ. ಪರ್ಮಿಟ್ ರಿನಿವಲ್ ಆಗದ ಆಟೋ ಒಂದು ವೇಳೆ ಅಪಘಾತಕ್ಕೀಡಾದರೆ ಇನ್ಶುರೆನ್ಸ್ ಕ್ಲೈಮ್ ಆಗುವುದಿಲ್ಲ.

ಬೆಂಗಳೂರಿನ ಆಟೋಗಳಲ್ಲಿ ಪ್ರಯಾಣಿಸುವ ಮುನ್ನ ಎಚ್ಚರ: ಪರ್ಮಿಟ್ ರಿನಿವಲ್ ಆಗದೆ ಸಂಚರಿಸುತ್ತಿವೆ ಸಾವಿರಾರು ಆಟೋಗಳು
ಸಾಂದರ್ಭಿಕ ಚಿತ್ರ
Kiran Surya
| Updated By: Ganapathi Sharma|

Updated on: Jan 09, 2025 | 7:57 AM

Share

ಬೆಂಗಳೂರು, ಜನವರಿ 9: ಬೆಂಗಳೂರು ನಗರದಲ್ಲಿ 2020ರ ಹಿಂದೆ ನೋಂದಣಿ ಆಗಿರುವ ಆಟೋ ಪರ್ಮಿಟ್​​ಗಳ ದಾಖಲೆಗಳೇ ಆರ್​ಟಿಒ ಕಚೇರಿಯಲ್ಲಿ ಇಲ್ಲವಂತೆ! ಬೆಂಗಳೂರಿನ ಶಾಂತಿನಗರ ಮುಖ್ಯ ಕಚೇರಿಯಲ್ಲಿ ವಾಹನ್- 3 ಅಡಿ ರಿಜಿಸ್ಟ್ರೇಷನ್ ಆಗಿರುವ ಸಾವಿರಾರು ಆಟೋಗಳ ದಾಖಲೆ ಇಲ್ಲ ಎಂಬುದು ತಿಳಿದುಬಂದಿದೆ. 2020 ರ ವರೆಗೆ ವಾಹನ್- 3 ಅಡಿಯಲ್ಲಿ ವಾಹನಗಳನ್ನು ರಿಜಿಸ್ಟ್ರೇಷನ್ ಮಾಡಲಾಗುತಿತ್ತು. 2020 ಮಾರ್ಚ್ ನಂತರ ವಾಹನ್ – 4 ಅಡಿಯಲ್ಲಿ ವಾಹನಗಳ ನೋಂದಣಿ ಮಾಡಲಾಗುತ್ತಿದೆ. ಆದರೆ ವಾಹನ್- 3ರ ಅಡಿಯಲ್ಲಿ ರಿಜಿಸ್ಟ್ರೇಷನ್ ಆಗಿರುವ ಸಾವಿರಾರು ಆಟೋ ಪರ್ಮಿಟ್​​ಗಳ ದಾಖಲೆಗಳೇ ಇಲ್ಲವಾಗಿದ್ದು, ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎಂದು ಆಟೋ ಚಾಲಕರು ಅಳಲು ತೋಡಿಕೊಂಡಿದ್ದಾರೆ.

ದಾಖಲೆಗಳು ಇಲ್ಲದ ಕಾರಣ ಆಟೋ ಪರ್ಮಿಟ್​​ಗಳ ರಿನಿವಲ್ ಆಗುತ್ತಿಲ್ಲ. ಪರ್ಮಿಟ್ ರಿನಿವಲ್ ಆಗದಿರುವ ಆಟೋಗಳಿಗೆ ಆರ್​​ಟಿಓ ಅಧಿಕಾರಿಗಳು ಬರೋಬ್ಬರಿ ಐದು ಸಾವಿರ ರುಪಾಯಿ ದಂಡ ವಿಧಿಸುತ್ತಿದ್ದಾರೆ. ಪರ್ಮಿಟ್ ರಿನಿವಲ್ ಮಾಡುತ್ತಲೂ ಇಲ್ಲ, ದಂಡ ವಿಧಿಸುವುದನ್ನು ನಿಲ್ಲಿಸುತ್ತಲೂ ಇಲ್ಲ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪಘಾತವಾದರೆ ಇನ್ಶುರೆನ್ಸ್ ಕ್ಲೈಮ್ ಆಗಲ್ಲ

ಪರ್ಮಿಟ್ ರಿನಿವಲ್ ಆಗದ ಆಟೋಗಳಲ್ಲಿ ಪ್ರಯಾಣಿಕರು ಪ್ರಯಾಣ ಮಾಡುವ ವೇಳೆ ಆಟೋ ಅಪಘಾತಕ್ಕೀಡಾದರೆ ಇನ್ಶುರೆನ್ಸ್ ಕ್ಲೈಮ್ ಆಗುವುದಿಲ್ಲ. ಈ ಬಗ್ಗೆ ಪ್ರಯಾಣಿಕರು ಕೂಡ ಆರ್​​ಟಿಒ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರಿಗೆ ಮತ್ತೊಂದು ಶಾಕ್​: ಬಿಎಂಟಿಸಿ ಬಸ್ ಪಾಸ್​​ ದರ ಏರಿಕೆ!

ಒಟ್ಟಿನಲ್ಲಿ ಆಟೋ ಪರ್ಮಿಟ್ ರಿನಿವಲ್ ಮಾಡಿ ಅಂದರೆ ನಮ್ಮ ಬಳಿ ನಿಮ್ಮ ದಾಖಲೆಗಳಿಲ್ಲ ಎನ್ನುತ್ತಾರೆ ಆರ್​ಟಿಒ ಅಧಿಕಾರಿಗಳು. ರಸ್ತೆಯಲ್ಲಿ ಆಟೋಗಳನ್ನು ತಪಾಸಣೆ ಮಾಡುವ ವೇಳೆ ಪರ್ಮಿಟ್ ರಿನಿವಲ್ ಆಗಿಲ್ಲ ಎಂದು ದಂಡವನ್ನೂ ವಿಧಿಸುತ್ತಿದ್ದಾರೆ. ಇದು ಯಾವ ನ್ಯಾಯ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?