AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಸಂಚರಿಸಲಿವೆ ಬಿಎಂಟಿಸಿಯ 320 ಎಲೆಕ್ಟ್ರಿಕ್ ಎಸಿ ಬಸ್ಸುಗಳು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜನವರಿಯಲ್ಲಿ 320 ಹೊಸ ಎಸಿ ವಿದ್ಯುತ್ ಬಸ್ಸುಗಳನ್ನು ನಗರದಲ್ಲಿ ಓಡಿಸಲಿದೆ. ಓಂ ಕಂಪನಿಯು ಈ ಬಸ್ಸುಗಳನ್ನು 12 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಒದಗಿಸಲಿದೆ. ಬಸ್ಸುಗಳ ಚಾಲಕರನ್ನು ಅಶೋಕ್ ಲೇಲ್ಯಾಂಡ್ ನೇಮಿಸಲಿದೆ ಮತ್ತು ನಿರ್ವಾಹಕರನ್ನು ಸರ್ಕಾರ ನೇಮಿಸಲಿದೆ. ಈ ಬಸ್ಸುಗಳು ಮೆಜೆಸ್ಟಿಕ್ ನಿಂದ ವಿಮಾನ ನಿಲ್ದಾಣದವರೆಗೆ ಸಂಚಾರ ಮಾಡಲಿವೆ, ಮತ್ತು ನಗರದ ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಸಂಚರಿಸಲಿವೆ ಬಿಎಂಟಿಸಿಯ 320 ಎಲೆಕ್ಟ್ರಿಕ್ ಎಸಿ ಬಸ್ಸುಗಳು
ಬಿಎಂಟಿಸಿ ಬಸ್​
Kiran Surya
| Edited By: |

Updated on: Nov 30, 2024 | 7:37 AM

Share

ಬೆಂಗಳೂರು, ನವೆಂಬರ್​ 30: ಹೊಸ ವರ್ಷಕ್ಕೆ ಜನವರಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯ 320 ಹೊಚ್ಚ ಹೊಸ ಬಸ್​ಗಳು (BUS) ನಗರದಲ್ಲಿ ಸಂಚಾರ ಮಾಡಲಿವೆ. 320 ಎಸಿ ಎಲೆಕ್ಟ್ರಿಕ್ ಬಸ್ಸುಗಳಿಗೆ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ಅನ್ನ ಅಶೋಕ್ ಲೇಲ್ಯಾಂಡ್ ಕಂಪನಿಯ ಪಾಲುದಾರ ಸಂಸ್ಥೆಯಾದ ಓಂ ಕಂಪನಿ ಪಡೆದುಕೊಂಡಿದೆ. ಈಗಾಗಲೇ ವರ್ಕ್ ಆರ್ಡರ್ ಕೂಡ ನೀಡಲಾಗಿದೆ.

12 ವರ್ಷಕ್ಕೆ ಗುತ್ತಿಗೆ ಆಧಾರದಲ್ಲಿ 320 ಬಸ್ಸುಗಳನ್ನು ತೆಗೆದುಕೊಳ್ಳಲಾಗುತ್ತದೆ. ಒಂದು ಕಿಮೀ 65 ರೂ.ನಿಂದ 80 ಪೈಸೆಯಂತೆ ಬಿಎಂಟಿಸಿ ಈ ಬಸ್​ಗಳಿಗೆ ಹಣ ನೀಡಲಿದೆ ಎಂದು ಬಿಎಂಟಿಸಿಯ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಬಸ್​ಗಳಿಗೆ ಚಾಲಕರನ್ನು ಅಶೋಕ್ ಲೇಲ್ಯಾಂಡ್ ಕಂಪನಿ ನೇಮಕ ಮಾಡುತ್ತದೆ. ನಿರ್ವಾಹಕರನ್ನು ಸರ್ಕಾರ ನೇಮಕ ಮಾಡುತ್ತದೆ. ಡಿಸೆಂಬರ್ 15 ರ ನಂತರ ಟ್ರಯಲ್ ರನ್​ಗಾಗಿ ಬಸ್​​ಗಳು ಬೆಂಗಳೂರಿಗೆ ಬರಲಿವೆ. ಈ ಎಸಿ ಎಲೆಕ್ಟ್ರಿಕ್ ಬಸ್​ಗಳು ಮೆಜೆಸ್ಟಿಕ್​ನಿಂದ ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚಾರ ಮಾಡಲಿವೆ. ಸದ್ಯ ವಿಮಾನ ನಿಲ್ದಾಣ ಮಾರ್ಗದಲ್ಲಿ ಬಿಎಂಟಿಸಿಯ ವೋಲ್ವೋ ಬಸ್ಸುಗಳು ಸಂಚಾರ ಮಾಡುತ್ತಿದ್ದು, ಈಗಿರುವ ಎಲ್ಲ ವೋಲ್ವೋ ಬಸ್ಸುಗಳು ನಗರದ ಬೇರೆ ಬೇರೆ ಮಾರ್ಗದಲ್ಲಿ ಸಂಚಾರ ಮಾಡಲಿವೆ.

ಇದನ್ನೂ ಓದಿ: ಬೆಂಗಳೂರು-ತುಮಕೂರು ಮೆಟ್ರೋ: ಜಿ ಪರಮೇಶ್ವರ್​​ ಕೊಟ್ರು ಬಿಗ್​ ಅಪ್ಡೇಟ್​​

ಈಗಾಗಲೆ ಬಿಎಂಟಿಸಿಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ನಾರ್ಮಲ್ ಎಲೆಕ್ಟ್ರಿಕ್ ಬಸ್ಸುಗಳು ಸಂಚಾರ ಮಾಡುತ್ತಿದ್ದು, ಈ 320 ಎಸಿ‌ ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಯಿಂದ ಬಿಎಂಟಿಸಿಯಲ್ಲಿ ಒಟ್ಟು ಎಲೆಕ್ಟ್ರಿಕ್ ಬಸ್​ಗಳ ಸಂಖ್ಯೆ 1320 ಕ್ಕೆ ಏರಿಕೆ ಆಗಲಿದೆ. ಎಲೆಕ್ಟ್ರಿಕ್ ಬಸ್​ನಲ್ಲಿ ತುಂಬಾ ಆರಾಮದಾಯಕವಾಗಿ ಸಂಚಾರ ಮಾಡಬಹುದು ಎಂದು ಪ್ರಯಾಣಿಕರು ಆರಾಮದಾಯಕವಾಗಿ ಪ್ರಯಾಣ ಮಾಡಬಹುದು.

ಒಟ್ಟಿನಲ್ಲಿ ನಗರದಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಎಲೆಕ್ಟ್ರಿಕ್ ಬಸ್ ಗಳಿಂದ ವಾಯುಮಾಲಿನ್ಯ ಕಡಿಮೆ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?