AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಸಂಚರಿಸಲಿವೆ ಬಿಎಂಟಿಸಿಯ 320 ಎಲೆಕ್ಟ್ರಿಕ್ ಎಸಿ ಬಸ್ಸುಗಳು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜನವರಿಯಲ್ಲಿ 320 ಹೊಸ ಎಸಿ ವಿದ್ಯುತ್ ಬಸ್ಸುಗಳನ್ನು ನಗರದಲ್ಲಿ ಓಡಿಸಲಿದೆ. ಓಂ ಕಂಪನಿಯು ಈ ಬಸ್ಸುಗಳನ್ನು 12 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಒದಗಿಸಲಿದೆ. ಬಸ್ಸುಗಳ ಚಾಲಕರನ್ನು ಅಶೋಕ್ ಲೇಲ್ಯಾಂಡ್ ನೇಮಿಸಲಿದೆ ಮತ್ತು ನಿರ್ವಾಹಕರನ್ನು ಸರ್ಕಾರ ನೇಮಿಸಲಿದೆ. ಈ ಬಸ್ಸುಗಳು ಮೆಜೆಸ್ಟಿಕ್ ನಿಂದ ವಿಮಾನ ನಿಲ್ದಾಣದವರೆಗೆ ಸಂಚಾರ ಮಾಡಲಿವೆ, ಮತ್ತು ನಗರದ ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಸಂಚರಿಸಲಿವೆ ಬಿಎಂಟಿಸಿಯ 320 ಎಲೆಕ್ಟ್ರಿಕ್ ಎಸಿ ಬಸ್ಸುಗಳು
ಬಿಎಂಟಿಸಿ ಬಸ್​
Kiran Surya
| Edited By: |

Updated on: Nov 30, 2024 | 7:37 AM

Share

ಬೆಂಗಳೂರು, ನವೆಂಬರ್​ 30: ಹೊಸ ವರ್ಷಕ್ಕೆ ಜನವರಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯ 320 ಹೊಚ್ಚ ಹೊಸ ಬಸ್​ಗಳು (BUS) ನಗರದಲ್ಲಿ ಸಂಚಾರ ಮಾಡಲಿವೆ. 320 ಎಸಿ ಎಲೆಕ್ಟ್ರಿಕ್ ಬಸ್ಸುಗಳಿಗೆ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ಅನ್ನ ಅಶೋಕ್ ಲೇಲ್ಯಾಂಡ್ ಕಂಪನಿಯ ಪಾಲುದಾರ ಸಂಸ್ಥೆಯಾದ ಓಂ ಕಂಪನಿ ಪಡೆದುಕೊಂಡಿದೆ. ಈಗಾಗಲೇ ವರ್ಕ್ ಆರ್ಡರ್ ಕೂಡ ನೀಡಲಾಗಿದೆ.

12 ವರ್ಷಕ್ಕೆ ಗುತ್ತಿಗೆ ಆಧಾರದಲ್ಲಿ 320 ಬಸ್ಸುಗಳನ್ನು ತೆಗೆದುಕೊಳ್ಳಲಾಗುತ್ತದೆ. ಒಂದು ಕಿಮೀ 65 ರೂ.ನಿಂದ 80 ಪೈಸೆಯಂತೆ ಬಿಎಂಟಿಸಿ ಈ ಬಸ್​ಗಳಿಗೆ ಹಣ ನೀಡಲಿದೆ ಎಂದು ಬಿಎಂಟಿಸಿಯ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಬಸ್​ಗಳಿಗೆ ಚಾಲಕರನ್ನು ಅಶೋಕ್ ಲೇಲ್ಯಾಂಡ್ ಕಂಪನಿ ನೇಮಕ ಮಾಡುತ್ತದೆ. ನಿರ್ವಾಹಕರನ್ನು ಸರ್ಕಾರ ನೇಮಕ ಮಾಡುತ್ತದೆ. ಡಿಸೆಂಬರ್ 15 ರ ನಂತರ ಟ್ರಯಲ್ ರನ್​ಗಾಗಿ ಬಸ್​​ಗಳು ಬೆಂಗಳೂರಿಗೆ ಬರಲಿವೆ. ಈ ಎಸಿ ಎಲೆಕ್ಟ್ರಿಕ್ ಬಸ್​ಗಳು ಮೆಜೆಸ್ಟಿಕ್​ನಿಂದ ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚಾರ ಮಾಡಲಿವೆ. ಸದ್ಯ ವಿಮಾನ ನಿಲ್ದಾಣ ಮಾರ್ಗದಲ್ಲಿ ಬಿಎಂಟಿಸಿಯ ವೋಲ್ವೋ ಬಸ್ಸುಗಳು ಸಂಚಾರ ಮಾಡುತ್ತಿದ್ದು, ಈಗಿರುವ ಎಲ್ಲ ವೋಲ್ವೋ ಬಸ್ಸುಗಳು ನಗರದ ಬೇರೆ ಬೇರೆ ಮಾರ್ಗದಲ್ಲಿ ಸಂಚಾರ ಮಾಡಲಿವೆ.

ಇದನ್ನೂ ಓದಿ: ಬೆಂಗಳೂರು-ತುಮಕೂರು ಮೆಟ್ರೋ: ಜಿ ಪರಮೇಶ್ವರ್​​ ಕೊಟ್ರು ಬಿಗ್​ ಅಪ್ಡೇಟ್​​

ಈಗಾಗಲೆ ಬಿಎಂಟಿಸಿಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ನಾರ್ಮಲ್ ಎಲೆಕ್ಟ್ರಿಕ್ ಬಸ್ಸುಗಳು ಸಂಚಾರ ಮಾಡುತ್ತಿದ್ದು, ಈ 320 ಎಸಿ‌ ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಯಿಂದ ಬಿಎಂಟಿಸಿಯಲ್ಲಿ ಒಟ್ಟು ಎಲೆಕ್ಟ್ರಿಕ್ ಬಸ್​ಗಳ ಸಂಖ್ಯೆ 1320 ಕ್ಕೆ ಏರಿಕೆ ಆಗಲಿದೆ. ಎಲೆಕ್ಟ್ರಿಕ್ ಬಸ್​ನಲ್ಲಿ ತುಂಬಾ ಆರಾಮದಾಯಕವಾಗಿ ಸಂಚಾರ ಮಾಡಬಹುದು ಎಂದು ಪ್ರಯಾಣಿಕರು ಆರಾಮದಾಯಕವಾಗಿ ಪ್ರಯಾಣ ಮಾಡಬಹುದು.

ಒಟ್ಟಿನಲ್ಲಿ ನಗರದಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಎಲೆಕ್ಟ್ರಿಕ್ ಬಸ್ ಗಳಿಂದ ವಾಯುಮಾಲಿನ್ಯ ಕಡಿಮೆ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್