AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಹಳೆ ಮದ್ರಾಸ್ ರಸ್ತೆ ಟು ಇಂದಿರಾನಗರ ಸಂಚಾರ ಮಾರ್ಗದಲ್ಲಿ ವ್ಯತ್ಯಯ; ಪರ್ಯಾಯ ಮಾರ್ಗ ಇಲ್ಲಿದೆ ನೋಡಿ

ಹಳೆ ಮದ್ರಾಸ್ ರಸ್ತೆಯ ಒಂದು ಭಾಗದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಹಳೆ ಮದ್ರಾಸ್ ರಸ್ತೆಯಿಂದ ಪೂರ್ವ ಬೆಂಗಳೂರಿನ ಇಂದಿರಾನಗರಕ್ಕೆ ತೆರಳುವ ಸಾರ್ವಜನಿಕರಿಗೆ ಬದಲಿ ಸಂಚಾರಿ ಮಾರ್ಗವನ್ನು ಕಲ್ಪಿಸಲಾಗಿದೆ.

Bangalore: ಹಳೆ ಮದ್ರಾಸ್ ರಸ್ತೆ ಟು ಇಂದಿರಾನಗರ ಸಂಚಾರ ಮಾರ್ಗದಲ್ಲಿ ವ್ಯತ್ಯಯ; ಪರ್ಯಾಯ ಮಾರ್ಗ ಇಲ್ಲಿದೆ ನೋಡಿ
ಹಳೆ ಮದ್ರಾಸ್ ರಸ್ತೆ ಟು ಇಂದಿರಾನಗರ ಸಂಚಾರ ಮಾರ್ಗದಲ್ಲಿ ವ್ಯತ್ಯಯImage Credit source: https://indianexpress.com/
TV9 Web
| Edited By: |

Updated on:Nov 17, 2022 | 10:49 AM

Share

ಬೆಂಗಳೂರು: ನಗರದ ವಿವಿಧ ರಸ್ತೆಗಳಿಗೆ ವೈಟ್ ಟಾಪಿಂಗ್ ಕೆಲಸಕಾರ್ಯಗಳು ನಡೆಯುತ್ತಿರುವುದರಿಂದ ಸಂಚಾರಿ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಇದೀಗ ಹಳೆ ಮದ್ರಾಸ್ ರಸ್ತೆಯ ಒಂದು ಭಾಗದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಹಳೆ ಮದ್ರಾಸ್ ರಸ್ತೆಯಿಂದ ಬೆಂಗಳೂರಿನ ಇಂದಿರಾನಗರಕ್ಕೆ ವಾಹನಗಳನ್ನು ಚಲಾಯಿಸುವ ಪ್ರಯಾಣಿಕರಿಗೆ ಬೆಂಗಳೂರು ಸಂಚಾರಿ ಪೊಲೀಸರು ಬುಧವಾರದಂದು ಸಲಹೆ ನೀಡಿದ್ದಾರೆ. ಇಂದಿರಾನಗರ, ಹಲಸೂರು ಮತ್ತು ಜೀವನ್ ಭೀಮಾ ನಗರ ಸೇರಿದಂತೆ ಪೂರ್ವ ಬೆಂಗಳೂರು ಭಾಗಗಳಲ್ಲಿ ಸಂಚಾರ ದಟ್ಟಣೆಯಾಗುವ ಬಗ್ಗೆ ವಾಹನ ಸವಾರರಿಗೆ ಹಾಗೂ ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಹಳೆ ಮದ್ರಾಸ್ ರಸ್ತೆಯಲ್ಲಿ 100 ಅಡಿ ರಸ್ತೆ ಜಂಕ್ಷನ್ ಮತ್ತು ಲಕ್ಷ್ಮೀಪುರಂ ಜಂಕ್ಷನ್ ನಡುವೆ ವೈಟ್ ಟಾಪಿಂಗ್ ಕಾಮಗಾರಿ ಪ್ರಕ್ರಿಯೆ ಆರಂಭ (ನ.16ರಿಂದ)ಗೊಂಡಿದ್ದು, ಸಂಚಾರ ಮಾರ್ಗದಲ್ಲಿ ವ್ಯತ್ಯಯ ಆಗಲಿದೆ. ಕೆಆರ್ ಪುರಂನಿಂದ ಬರುವ ಭಾರಿ ವಾಹನಗಳು 80 ಅಡಿ ರಸ್ತೆ ಮತ್ತು ಚಿನ್ಮಯ ಮಿಷನ್ ಆಸ್ಪತ್ರೆ ರಸ್ತೆಯನ್ನು ಬಳಸಿ ಹಳೆಯ ಮದ್ರಾಸ್ ರಸ್ತೆಗೆ ಮರುಸಂಪರ್ಕಿಸಬೇಕು. ಸಣ್ಣ ವಾಹನಗಳು 100 ಅಡಿ ರಸ್ತೆ ಮತ್ತು ಸಿಎಂಎಚ್ ರಸ್ತೆಯನ್ನು ಬಳಸಬೇಕು.

traffic-advisory

ಬದಲಿ ಸಂಚಾರಿ ಮಾರ್ಗ

ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ಮದ್ರಾಸ್ ರಸ್ತೆ ಲಕ್ಷ್ಮೀಪುರಂ ಸ್ಮಶಾನ ಅಥವಾ ಆಂಜನೇಯ ಜಂಕ್ಷನ್​ನಿಂದ ಇಂದಿರಾನಗರ 100 ಅಡಿ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಪೂರ್ವ ಬೆಂಗಳೂರಿನ ಇಂದಿರಾನಗರ, ಹಲಸೂರು ಮತ್ತು ಜೀವನ್ ಭೀಮಾ ನಗರ ಟ್ರಾಫಿಕ್ ಪೊಲೀಸ್ ಮಿತಿಯಲ್ಲಿರುವ ಸಿಎಂಎಚ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ನಿರೀಕ್ಷಿಸಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:49 am, Thu, 17 November 22

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ