AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಾಹನ ಸವಾರರೇ ಗಮನಿಸಿ, ಈ ರಸ್ತೆಯಲ್ಲಿ ಭಾನುವಾರದ ವರೆಗೆ ಸಂಚಾರ ನಿರ್ಬಂಧ

ಭಾನುವಾರದ ವರೆಗೆ ಬೆಂಗಳೂರಿನ ಪ್ರಮುಖ ರಸ್ತೆಯೊಂದರಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಅದೇ ರೀತಿ ಪ್ರಮುಖ ಜಂಕ್ಷನ್​​ವೊಂದರಲ್ಲಿ ಅಂತಾರಾಜ್ಯ ಖಾಸಗಿ ಬಸ್‌ಗಳು ಪ್ರಯಾಣಿಕರನ್ನು ಹತ್ತಿಸಲು ಮತ್ತು ಇಳಿಸಲು ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ. ಆ ಕುರಿತು ವಿವರ ಇಲ್ಲಿದೆ.

ಬೆಂಗಳೂರು: ವಾಹನ ಸವಾರರೇ ಗಮನಿಸಿ, ಈ ರಸ್ತೆಯಲ್ಲಿ ಭಾನುವಾರದ ವರೆಗೆ ಸಂಚಾರ ನಿರ್ಬಂಧ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Aug 15, 2024 | 11:06 AM

Share

ಬೆಂಗಳೂರು, ಆಗಸ್ಟ್ 15: ರೈಲ್ವೇ ಯು ಗಾರ್ಡ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 14 ರಿಂದ 18 ರವರೆಗೆ ಬೆಂಗಳೂರಿನ ದೊಡ್ಡಾನೆಕುಂದಿ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಹೊರ ವರ್ತುಲ ರಸ್ತೆಯಿಂದ ಎಚ್‌ಎಎಲ್ ಅಥವಾ ದೊಡ್ಡಾನೆಕುಂದಿ ಕಡೆಗೆ ಪ್ರಯಾಣಿಸುವ ವಾಹನ ಸವಾರರು ಕಾರ್ತಿಕ್ ನಗರ ಜಂಕ್ಷನ್‌ನಲ್ಲಿ ಯು-ಟರ್ನ್ ತೆಗೆದುಕೊಳ್ಳಬಹುದು. ದೊಡ್ಡಾನೆಕುಂದಿ ಅಥವಾ ಎಚ್‌ಎಎಲ್​ನಿಂದ ಹೊರ ವರ್ತುಲ ರಸ್ತೆ ಕಡೆಗೆ ಹೋಗುವವರು ಇಸ್ರೋ ರಸ್ತೆಯನ್ನು ಬಳಸಿಕೊಂಡು ಕಾರ್ತಿಕ್ ನಗರ ಜಂಕ್ಷನ್‌ನಲ್ಲಿ ಎಡಕ್ಕೆ ಚಲಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 19 ರಿಂದ ಆರಂಭವಾಗಿ ನಗರದಿಂದ ಹೊರಹೋಗುವ ಎಲ್ಲಾ ಅಂತಾರಾಜ್ಯ ಖಾಸಗಿ ಬಸ್‌ಗಳು ಹೆಬ್ಬಾಳ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಲು ಮತ್ತು ಇಳಿಸಲು ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.

ಪ್ರಯಾಣಿಕರು ಜಕ್ಕೂರು ಏರೋಡ್ರೋಮ್ ಬಳಿಯ ಬಳ್ಳಾರಿ ರಸ್ತೆಯ ಸರ್ವೀಸ್ ರಸ್ತೆಗೆ ಪ್ರಯಾಣಿಸಬೇಕು, ಅಲ್ಲಿಂದ ಅಲ್ಲಾಳಸಂದ್ರ ಎನ್‌ಇಎಸ್ ಕಡೆಗೆ ತೆರಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ನಿರ್ಮಾಣ ಕಾರ್ಯಗಳು ಮತ್ತು ಕಿರಿದಾದ ರಸ್ತೆಯ ಕಾರಣದಿಂದಾಗಿ ಹೆಬ್ಬಾಳ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡಲು ಈ ಕ್ರಮ ಅನಿವಾರ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರತಿ ದಿನ ರಸ್ತೆಗಿಳಿಯುತ್ತಿವೆ 2000 ಹೊಸ ವಾಹನ! ವಾಯು ಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಈ ಕ್ರಮದಿಂದ ಜನರಿಗೆ ತಾತ್ಕಾಲಿಕವಾಗಿ ತೊಂದರೆಯಾಗಲಿದೆ. ಆದರೆ, ಸ್ಥಳೀಯ ನಿವಾಸಿಗಳ ಬೇಡಿಕೆಯ ಕಾರಣ ಈ ಕ್ರಮ ಕೈಗೊಳ್ಳದೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು