AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಾಹನ ಸವಾರರೇ ಗಮನಿಸಿ, ಈ ರಸ್ತೆಯಲ್ಲಿ ಭಾನುವಾರದ ವರೆಗೆ ಸಂಚಾರ ನಿರ್ಬಂಧ

ಭಾನುವಾರದ ವರೆಗೆ ಬೆಂಗಳೂರಿನ ಪ್ರಮುಖ ರಸ್ತೆಯೊಂದರಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಅದೇ ರೀತಿ ಪ್ರಮುಖ ಜಂಕ್ಷನ್​​ವೊಂದರಲ್ಲಿ ಅಂತಾರಾಜ್ಯ ಖಾಸಗಿ ಬಸ್‌ಗಳು ಪ್ರಯಾಣಿಕರನ್ನು ಹತ್ತಿಸಲು ಮತ್ತು ಇಳಿಸಲು ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ. ಆ ಕುರಿತು ವಿವರ ಇಲ್ಲಿದೆ.

ಬೆಂಗಳೂರು: ವಾಹನ ಸವಾರರೇ ಗಮನಿಸಿ, ಈ ರಸ್ತೆಯಲ್ಲಿ ಭಾನುವಾರದ ವರೆಗೆ ಸಂಚಾರ ನಿರ್ಬಂಧ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Aug 15, 2024 | 11:06 AM

Share

ಬೆಂಗಳೂರು, ಆಗಸ್ಟ್ 15: ರೈಲ್ವೇ ಯು ಗಾರ್ಡ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 14 ರಿಂದ 18 ರವರೆಗೆ ಬೆಂಗಳೂರಿನ ದೊಡ್ಡಾನೆಕುಂದಿ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಹೊರ ವರ್ತುಲ ರಸ್ತೆಯಿಂದ ಎಚ್‌ಎಎಲ್ ಅಥವಾ ದೊಡ್ಡಾನೆಕುಂದಿ ಕಡೆಗೆ ಪ್ರಯಾಣಿಸುವ ವಾಹನ ಸವಾರರು ಕಾರ್ತಿಕ್ ನಗರ ಜಂಕ್ಷನ್‌ನಲ್ಲಿ ಯು-ಟರ್ನ್ ತೆಗೆದುಕೊಳ್ಳಬಹುದು. ದೊಡ್ಡಾನೆಕುಂದಿ ಅಥವಾ ಎಚ್‌ಎಎಲ್​ನಿಂದ ಹೊರ ವರ್ತುಲ ರಸ್ತೆ ಕಡೆಗೆ ಹೋಗುವವರು ಇಸ್ರೋ ರಸ್ತೆಯನ್ನು ಬಳಸಿಕೊಂಡು ಕಾರ್ತಿಕ್ ನಗರ ಜಂಕ್ಷನ್‌ನಲ್ಲಿ ಎಡಕ್ಕೆ ಚಲಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 19 ರಿಂದ ಆರಂಭವಾಗಿ ನಗರದಿಂದ ಹೊರಹೋಗುವ ಎಲ್ಲಾ ಅಂತಾರಾಜ್ಯ ಖಾಸಗಿ ಬಸ್‌ಗಳು ಹೆಬ್ಬಾಳ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಲು ಮತ್ತು ಇಳಿಸಲು ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.

ಪ್ರಯಾಣಿಕರು ಜಕ್ಕೂರು ಏರೋಡ್ರೋಮ್ ಬಳಿಯ ಬಳ್ಳಾರಿ ರಸ್ತೆಯ ಸರ್ವೀಸ್ ರಸ್ತೆಗೆ ಪ್ರಯಾಣಿಸಬೇಕು, ಅಲ್ಲಿಂದ ಅಲ್ಲಾಳಸಂದ್ರ ಎನ್‌ಇಎಸ್ ಕಡೆಗೆ ತೆರಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ನಿರ್ಮಾಣ ಕಾರ್ಯಗಳು ಮತ್ತು ಕಿರಿದಾದ ರಸ್ತೆಯ ಕಾರಣದಿಂದಾಗಿ ಹೆಬ್ಬಾಳ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡಲು ಈ ಕ್ರಮ ಅನಿವಾರ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರತಿ ದಿನ ರಸ್ತೆಗಿಳಿಯುತ್ತಿವೆ 2000 ಹೊಸ ವಾಹನ! ವಾಯು ಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಈ ಕ್ರಮದಿಂದ ಜನರಿಗೆ ತಾತ್ಕಾಲಿಕವಾಗಿ ತೊಂದರೆಯಾಗಲಿದೆ. ಆದರೆ, ಸ್ಥಳೀಯ ನಿವಾಸಿಗಳ ಬೇಡಿಕೆಯ ಕಾರಣ ಈ ಕ್ರಮ ಕೈಗೊಳ್ಳದೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!