AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಬೆಂಗಳೂರಿನಲ್ಲಿ ಸಹಿಸಲಾಗದ ಕ್ಷಣ’: ಟ್ರಾಫಿಕ್‌ನಲ್ಲಿ ಕಸದ ಲಾರಿಯ ಪಕ್ಕದಲ್ಲಿ ಸಿಲುಕಿಕೊಂಡ ಆಟೋದಲ್ಲಿದ್ದ ಮಹಿಳೆ

ಬೆಂಗಳೂರಿನ ಟ್ರಾಫಿಕ್ ಮತ್ತು ನೈರ್ಮಲ್ಯದ ಸಮಸ್ಯೆಗಳನ್ನು ಪವಿತ್ರಾ ಕುಲಕರ್ಣಿ ಅವರ ವೈರಲ್ ವಿಡಿಯೋದ ಮೂಲಕ ತಿಳಿಸಿದ್ದಾರೆ. ತಮ್ಮ ರಿಕ್ಷಾ ಪಕ್ಕದಲ್ಲೇ ಕಸ ಲಾರಿಯೊಂದು ಬಂದು ನಿಂತಿದೆ. ತನ್ನ ಗಮ್ಯಸ್ಥಾನವನ್ನು ತಲುಪಲು 78 ನಿಮಿಷಗಳು ಬೇಕು. ಜತೆಗೆ ಟ್ರಾಫಿಕ್, ಅದರ ನಡುವೆ ಈ ಕಸ ವಾಸನೆ, ಇದು ಪ್ರತಿದಿನದ ನರಕಯಾತನೆ ಎಂದು ಹೇಳಿದ್ದಾರೆ.

'ಇದು ಬೆಂಗಳೂರಿನಲ್ಲಿ ಸಹಿಸಲಾಗದ ಕ್ಷಣ': ಟ್ರಾಫಿಕ್‌ನಲ್ಲಿ ಕಸದ ಲಾರಿಯ ಪಕ್ಕದಲ್ಲಿ ಸಿಲುಕಿಕೊಂಡ ಆಟೋದಲ್ಲಿದ್ದ ಮಹಿಳೆ
ವಿಡಿಯೋ
TV9 Web
| Edited By: |

Updated on: Dec 23, 2025 | 11:35 AM

Share

ಬೆಂಗಳೂರು, ಡಿ.23: ಕೆಲವರು ಬೆಂಗಳೂರನ್ನು (Bangalore traffic) ಮೆಚ್ಚಿಕೊಂಡರೆ, ಇನ್ನು ಕೆಲವರು ಇಲ್ಲಿನ ವ್ಯವಸ್ಥೆಯನ್ನು ದೂರುತ್ತಾರೆ. ರಾಜ್ಯ ರಾಜಧಾನಿ ಎಲ್ಲರಿಗೂ ಆಸರೆಯಾಗಿದೆ. ಆದರೆ ಇಲ್ಲಿನ ರಸ್ತೆ, ಟ್ರಾಫಿಕ್​​​​​, ವಾತಾವರಣದ ಬಗ್ಗೆ ಅನೇಕರಿಗೆ ಅಸಮಾಧಾನ ಇದೆ. ಇದೀಗ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಪವಿತ್ರಾ ಕುಲಕರ್ಣಿ ಎಂಬುವವರು, ಹಂಚಿಕೊಂಡಿರುವ ವಿಡಿಯೋದಲ್ಲಿ ಬೆಂಗಳೂರಿನಲ್ಲಿ ತಾವು ಅನುಭವಿಸಿದ ಸಂಕಷ್ಟದ ಬಗ್ಗೆ ಹಂಚಿಕೊಂಡಿದ್ದಾರೆ. ಆಟೋದಲ್ಲಿ ಹೋಗುತ್ತಿದ್ದ ವೇಳೆ ನಡೆದ ಘಟನೆಯನ್ನು ಈ ವಿಡಿಯೋ ಮೂಲಕ ವಿವರಿಸಿದ್ದಾರೆ. ನಗರದ ಜನದಟ್ಟಣೆಯ ರಸ್ತೆಗಳಲ್ಲಿ ದೈನಂದಿನ ಜೀವನದ ಕೆಟ್ಟ ಚಿತ್ರಣ ಹೇಗಿದೆ ಎಂಬುದನ್ನು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಈ ವಿಡಿಯೊದಲ್ಲಿ ಹೀಗೆ ಬರೆದುಕೊಂಡಿದ್ದಾರೆ “ಇದು ಬೆಂಗಳೂರಿನ ಸಹಿಸಲಾಗದ ಕ್ಷಣ?” ಗಂಟೆಗಟ್ಟಲೆ ಕಸದ ಲಾರಿಯ ಪಕ್ಕದಲ್ಲಿ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡರೂ ಏನೂ ಅನಿಸುತ್ತಿಲ್ಲ ಎಂದು ಹೇಳಿದ್ದಾರೆ. ಪವಿತ್ರಾ ಕುಲಕರ್ಣಿ ಟ್ರಾಫಿಕ್​​​ನಲ್ಲಿ ಸಿಲುಕಿಕೊಂಡ ವೇಳೆ ಚಿತ್ರಹಿಂಸೆ ಅನುಭವಿಸಿದ್ದಾರೆ. ತಮ್ಮ ರಿಕ್ಷಾದ ಪಕ್ಕದಲ್ಲೇ ಕಸ ಲಾರಿಯೊಂದು ಬಂದು ನಿಂತಿತ್ತು. ತನ್ನ ಗಮ್ಯಸ್ಥಾನವನ್ನು ತಲುಪಲು 78 ನಿಮಿಷಗಳು ಬೇಕು. ಜತೆಗೆ ಟ್ರಾಫಿಕ್, ಅದರ ನಡುವೆ ಈ ಕಸ ವಾಸನೆ, ಇದು ಪ್ರತಿದಿನದ ನರಕಯಾತನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿದೇಶಿಗರ ಶಾಶ್ವತ ಮನೆ: ಭಾರತದ ಸರಳ ಜೀವನಕ್ಕೆ ರಷ್ಯಾ ಮಹಿಳೆ ಫಿದಾ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇನ್ನು ಈ ವಿಡಿಯೋ ಬಗ್ಗೆ ನೆಟ್ಟಿಗರು ಕೂಡ ಕಮೆಂಟ್​​ ಮಾಡಿದ್ದಾರೆ. ಟ್ರಾಫಿಕ್ ಮತ್ತು ಆ ವಾಸನೆಗಳು, ಇದು ನಿಜವಾಗಿಯೂ ಮುಂದಿನ ಹಂತ ಎಂದು ಒಬ್ಬರು ಟೀಕಿಸಿದ್ದಾರೆ. ಈ ಪರಿಸ್ಥಿತಿಯನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲೆ, ಪ್ರತಿದಿನವೂ ಈ ಸ್ಥಿತಿ ಬೆಂಗಳೂರಿನಲ್ಲಿ ನಡೆಯುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಇದು ಒಂದು ಹಾಸ್ಯಮಯ ಕ್ಷಣ, ಬೆಂಗಳೂರು ಮಾತ್ರ ನಿಮಗೆ ಹೀಗೆ ಮಾಡಲು ಸಾಧ್ಯ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ. ಈ ನಗರವು ಪ್ರತಿದಿನ ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತದೆ ಎಂದು ಇನ್ನೊಬ್ಬರು ಕಮೆಂಟ್​​​ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ