AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರೇ ಎಚ್ಚರ: ಬೆಂಗಳೂರಿನ ಸ್ಕೂಲ್ ಬಸ್​ಗಳ ಚಾಲಕರ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಿದ ಪೊಲೀಸರೇ ಶಾಕ್!

ಬೆಂಗಳೂರಿನಲ್ಲಿ ಸಂಚಾರ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 59 ಶಾಲಾ ಬಸ್ ಚಾಲಕರು ಮತ್ತು 14 ನೀರಿನ ಟ್ಯಾಂಕರ್ ಚಾಲಕರು ಡ್ರಂಕ್ ಆ್ಯಂಡ್ ಡ್ರೈವ್‌ ಮಾಡಿ ಸಿಕ್ಕಿಬಿದ್ದಿದ್ದಾರೆ. ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ಈ ಕುಡುಕ ಚಾಲಕರ ಪರವಾನಗಿ ರದ್ದುಗೊಳಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಆದಾಗ್ಯೂ, ಪೋಷಕರಲ್ಲಿ ಆತಂಕ ಮೂಡಿಸಿದೆ.

ಪೋಷಕರೇ ಎಚ್ಚರ: ಬೆಂಗಳೂರಿನ ಸ್ಕೂಲ್ ಬಸ್​ಗಳ ಚಾಲಕರ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಿದ ಪೊಲೀಸರೇ ಶಾಕ್!
ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆImage Credit source: Bangalore Traffic Police X Handle
ಶಿವಪ್ರಸಾದ್​ ಬಿ.
| Edited By: |

Updated on: Mar 28, 2026 | 7:34 AM

Share

ಬೆಂಗಳೂರು, ಮಾರ್ಚ್ 28: ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕಳುಹಿಸುತ್ತಿದ್ದೇವೆ ಎಂದು ಭಾವಿಸಿರುವ ಪೋಷಕರಿಗೆ ಇದು ನಿಜಕ್ಕೂ ಆಘಾತಕಾರಿ ಸುದ್ದಿ. ಮಕ್ಕಳ ಭವಿಷ್ಯ ರೂಪಿಸಬೇಕಾದ ಶಾಲಾ ವಾಹನಗಳ ಚಾಲಕರೇ ಕುಡಿದು ಬಸ್ ಚಲಾಯಿಸುತ್ತಾ (Drunk and Drive) ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವುದು ಬೆಳಕಿಗೆ ಬಂದಿದೆ. ಶುಕ್ರವಾರ (ಮಾರ್ಚ್​​ 27) ಬೆಳ್ಳಂಬೆಳಗ್ಗೆ ಬೆಂಗಳೂರು ಸಂಚಾರ ಪೊಲೀಸರು (Bangalore Traffic Police) ನಡೆಸಿದ ವಿಶೇಷ ಡ್ರಂಕ್ ಆ್ಯಂಡ್ ಡ್ರೈವ್ ಕಾರ್ಯಾಚರಣೆಯಲ್ಲಿ ಭರ್ಜರಿ ಬೇಟೆ ನಡೆದಿದೆ.

ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್: ಪೊಲೀಸರಿಗೇ ಶಾಕ್!

ನಗರದಾದ್ಯಂತ ಸಂಚಾರ ವಿಭಾಗದ ಪೊಲೀಸರು ನಡೆಸಿದ ‘ಸ್ಪೆಷಲ್ ಡ್ರೈವ್’ನಲ್ಲಿ ಶಾಲಾ ಬಸ್ ಹಾಗೂ ನೀರಿನ ಟ್ಯಾಂಕರ್ ಚಾಲಕರನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಖಾಸಗಿ ಶಾಲಾ ಬಸ್ ಚಾಲಕರ ಹೊಣೆಗೇಡಿತನ ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಟ್ರಾಫಿಕ್ ಪೊಲೀಸ್ ಕಾರ್ಯಾಚರಣೆಯ ಅಂಕಿಅಂಶ

  • ಪಾನಮತ್ತ ಶಾಲಾ ಬಸ್ ಚಾಲಕರು: 59
  • ಪಾನಮತ್ತ ನೀರಿನ ಟ್ಯಾಂಕರ್ ಚಾಲಕರು: 14

ಲೈಸೆನ್ಸ್ ರದ್ದು ಮಾಡಲು ಕ್ರಮ

ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 73 ಚಾಲಕರ ವಿರುದ್ಧ ಐಎಂವಿ (IMV) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಚಾಲಕರುಗಳ ಚಾಲನಾ ಪರವಾನಗಿಯನ್ನು (DL) ಅಮಾನತುಗೊಳಿಸಲು ಆರ್‌ಟಿಒ (RTO) ಕಚೇರಿಗೆ ವರದಿ ಸಲ್ಲಿಸಲಾಗುತ್ತಿದೆ ಎಂದು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಕಾರ್ತೀಕ್ ರೆಡ್ಡಿ ತಿಳಿಸಿದ್ದಾರೆ.

ಶಾಲೆಗಳ ಆಡಳಿತ ಮಂಡಳಿ ವಿರುದ್ಧ ಆಕ್ರೋಶ

ಹತ್ತಾರು ಸಾವಿರ ರೂಪಾಯಿ ಫೀಸು ಪಡೆಯುವ ಖಾಸಗಿ ಶಾಲೆಗಳು ಚಾಲಕರ ನೇಮಕಾತಿ ವೇಳೆ ಕನಿಷ್ಠ ಜವಾಬ್ದಾರಿ ತೋರುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಧನದಾಹಿ ಶಾಲೆಗಳು ಇಂತಹ ಕುಡುಕ ಚಾಲಕರಿಗೆ ಬ್ರೇಕ್ ಹಾಕದಿದ್ದರೆ ಮಕ್ಕಳ ಅಮೂಲ್ಯ ಜೀವಕ್ಕೆ ಅಪಾಯ ಕಟ್ಟಿಬುತ್ತಿ ಎಂಬ ಆತಂಕ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ