Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ರಿಯಾಲಿಟಿ ಚೆಕ್​: ಬೆಂಗಳೂರಿನಲ್ಲಿ ಗುಂಡಿಗಳದ್ದೇ ದರ್ಬಾರ್​: ವಾಹನ ಸವಾರರ ಪರದಾಟ

ಬೆಂಗಳೂರಿನ ಪ್ರಮುಖ ನಗರಗಳ ರಸ್ತೆಗಳು ಗುಂಡಿಗಳಿಂದ ತುಂಬಿವೆ. ಗುಂಡಿಗಳಿಂದ ಜನರು ಪರದಾಡುವಂತಾಗಿದೆ. ನಂದಿನಿ ಲೇಔಟ್​ನಿಂದ ಯಶವಂತ ಪುರ, ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದ ಸುತ್ತಮುತ್ತಲು ಮತ್ತು ಸುಕಂದಕಟ್ಟೆ ರಸ್ತೆ ನಿಲಗೀರಿತೋಪು ಸರ್ಕಲ್​ನಲ್ಲಿ ಯಮ ಸ್ವರೂಪಿ ಗುಂಡಿಗಳು ಬಾಯಿ ತೆರೆದಿವೆ. ಸಾಕಷ್ಟು ವರ್ಷಗಳಿಂದ ಈ ಗುಂಡಿಗಳನ್ನು ಮುಚ್ಚಲು ಮುಂದಾಗಿಲ್ಲ.

ಟಿವಿ9 ರಿಯಾಲಿಟಿ ಚೆಕ್​: ಬೆಂಗಳೂರಿನಲ್ಲಿ ಗುಂಡಿಗಳದ್ದೇ ದರ್ಬಾರ್​: ವಾಹನ ಸವಾರರ ಪರದಾಟ
ರಸ್ತೆ ಗುಂಡಿಗಳು (ಸಂಗ್ರಹ ಚಿತ್ರ)
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on: Dec 06, 2023 | 8:20 AM

ಬೆಂಗಳೂರು, ಡಿಸೆಂಬರ್​​ 06: ನಗರದಲ್ಲಿ ರಸ್ತೆ ಗುಂಡಿ (potholes) ಗಳಿಂದ ಸಾಲು ಸಾಲು ಅಪಘಾತ ಸಂಭವಿಸುತ್ತಿವೆ. ವಾಹನ ಸವಾರರನ್ನ ರಸ್ತೆ ಗುಂಡಿಗಳು ಯಮನಂತೆ ಕಾಡುತ್ತಿವೆ. ಬೆಂಗಳೂರಿನ ಪ್ರಮುಖ ನಗರಗಳ ರಸ್ತೆಗಳು ಗುಂಡಿಗಳಿಂದ ತುಂಬಿವೆ. ಗುಂಡಿಗಳಿಂದ ಜನರ ಪರದಾಡುವಂತಾಗಿದೆ. ನಂದಿನಿ ಲೇಔಟ್​ನಿಂದ ಯಶವಂತ ಪುರ, ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದ ಸುತ್ತಮುತ್ತಲು ಮತ್ತು ಸುಕಂದಕಟ್ಟೆ ರಸ್ತೆ ನಿಲಗೀರಿತೋಪು ಸರ್ಕಲ್​ನಲ್ಲಿ ಯಮ ಸ್ವರೂಪಿ ಗುಂಡಿಗಳು ಬಾಯಿ ತೆರೆದಿವೆ.

ಬನ್ನೇರುಘಟ್ಟ ರೋಡ್​ನಲ್ಲಿ ಹತ್ತಾರು ಗುಂಡಿಗಳು

ಬನ್ನೇರುಘಟ್ಟ ಸಂಪರ್ಕ ಕಲ್ಪಿಸುವ ಸುಬ್ಬಣ್ಣ ಗಾರ್ಡನ್​ನಲ್ಲಿ ಹತ್ತಾರು ಗುಂಡಿಗಳಿವೆ. ಗುಂಡಿಗಳನ್ನು ತಪ್ಪಿಸಲು ಹೋಗಿ ನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಮಳೆ ಬಂದರೆ ರೋಡ್ ಯಾವುದು, ಗುಂಡಿ ಯಾವುದು ಅಂತ ಗೊತ್ತಾಗುವುದಿಲ್ಲ. ಗುಂಡಿ ಇರುವ ಕಾರಣ ಈ ರೋಡ್​ನಲ್ಲಿ ಸ್ಲೋ ಮೂವಿಂಗ್ ಟ್ರಾಫಿಕ್​ ಇರುವುತ್ತದೆ. ಸಾಕಷ್ಟು ವರ್ಷಗಳಿಂದ ಈ ಗುಂಡಿಗಳನ್ನು ಮುಚ್ಚಲು ಮುಂದಾಗಿಲ್ಲ. ಡಾಂಬರೀನಿಂದ ಗುಂಡಿ ಮುಚ್ಚುವ ಬದಲಿಗೆ ಟೈಲ್ಸ್ ಪುಡಿ ಹಾಕಿ ಗುಂಡಿ ಮುಚ್ಚಲಾಗಿದೆ. ಇದರಿಂದ ಧೂಳು ಎದ್ದೇಳುತ್ತಿದೆ. ವಾಹನ ಸವಾರರ ಗೋಳು ಕೇಳುವವರಿಲ್ಲ.

ಇದನ್ನೂ ಓದಿ: ಆನೇಕಲ್: ದೊಮ್ಮಸಂದ್ರ ಸರ್ಕಲ್ ಬಳಿ ಬೈಕ್ ಪಲ್ಟಿ, ವಿಡಿಯೋ ವೈರಲ್

ಲಗ್ಗೆರೆ ಕ್ರಾಸ್​ನಿಂದ ಜಾಲಹಳ್ಳಿ ಕ್ರಾಸ್​ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳಿವೆ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾ ಮೂಲಕ ಹಾದು ಹೋಗುತ್ತದೆ. ಪೀಣ್ಯದ ಸಾವಿರಾರು ಕಂಪನಿಗೆ ಕಾರ್ಮಿಕರು ಈ ರೋಡ್ ಮೂಲಕ ಸಂಚಾರ ಮಾಡುತ್ತಾರೆ. ಈ ರೋಡ್​ನಲ್ಲಿ ವಾಹನ ಸವಾರರ ‌ಪ್ರಾಣ ಕೈಯಲ್ಲಿಡಿದು ಓಡಾಡುವ ದುಸ್ಥಿತಿ‌ ಎದುರಾಗಿದೆ. ವಾಹನ ಸವಾರರು ಜೋರಾಗಿ ಏನಾದರೂ ಬಂದರೆ ಜೀವ ಹೋಗೋದು ಗ್ಯಾರಂಟಿ. ಸುಮಾರು ಅರ್ಧದಿಂದ ಒಂದು ಅಡಿಯಷ್ಟು ದೊಡ್ಡದಾದ ಗುಂಡಿಗಳು ಬಿದ್ದಿವೆ. ಗುಂಡಿಗಳನ್ನು ತಪ್ಪಿಸಲು ಹೋದೆರೆ ಹಿಂದಿನಿಂದ ವೇಗವಾಗಿ ಬರುವ ಹೆವಿ ಲೋಡ್ ಲಾರಿಗಳು ಡಿಕ್ಕಿ ಹೊಡಿಯುತ್ತವೆ. ಈ ರೋಡ್ ಸರಿಪಡಿಸಲು ಯಾರು ಮುಂದಾಗುತ್ತಿಲ್ಲ. ಈ ರೋಡ್​ನಲ್ಲಿ ಪ್ರತಿದಿನ ಆಟೋ ಓಡಿಸುತ್ತೇವೆ ಆದರೆ ತುಂಬಾ ‌ಕಷ್ಟ ಆಗುತ್ತದೆ ಎನ್ನುತ್ತಾರೆ ಆಟೋ ಚಾಲಕರು.

ಇದನ್ನೂ ಓದಿ: ಟಿನ್ ಫ್ಯಾಕ್ಟರಿ ಬಳಿ ಟ್ರಾಫಿಕ್ ಸಮಸ್ಯೆ: ಸಂಚಾರಿ ಪೊಲೀಸರ ಹೊಸ ಮಾರ್ಗದಿಂದ ಟ್ರಾಫಿಕ್ ನಿವಾರಣೆ

ಔಟರ್​ ರಿಂಗ್​ನ ಲಗ್ಗೆರೆಯ ಬಳಿ ಹತ್ತಾರು ಗುಂಡಿಗಳು ಬಿದ್ದಿದೆ. ಪ್ರತಿನಿತ್ಯ ಈ ಔಟರ್​ರಿಂಗ್ ರೋಡ್ ಮೂಲಕ ಲಕ್ಷಾಂತರ ವಾಹನ ‌ಸಂಚಾರ‌ ಮಾಡುತ್ತವೆ. ಆದರೆ ಬಿಬಿಎಂಪಿ ಮತ್ತು ಬಿಡಿಎ ಈ ಗುಂಡಿಗಳನ್ನು ‌ಮುಚ್ಚುತ್ತಿಲ್ಲ. ರಿಂಗ್ ರೋಡ್ ಚೆನ್ನಾಗಿ ಇರುತ್ತದೆ ಎಂದು ವೇಗವಾಗಿ ಬರುವ ಬೈಕ್ ಸವಾರರು ಈ ಗುಂಡಿಗಳಿಂದ ಪಲ್ಟಿಯಾಗುವುದು ಮಾತ್ರ ಪಕ್ಕ. ಗುಂಡಿ ಇದೆ ಎಂದು ಬೈಕ್ ಸವಾರರು ದಿಢೀರ್ ಅಂತ ಬ್ರೇಕ್ ಹಾಕುತ್ತಾರೆ. ಇದರಿಂದ ಹಿಂದಿನಿಂದ ಬರುವ ಲಾರಿ ಬಸ್ಸುಗಳು ಡಿಕ್ಕಿ ಹೊಡೆದು ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ‌ಹೆಚ್ಚು. ಔಟರ್ ರಿಂಗ್ ಅನ್ನು ಸಂಪೂರ್ಣ ಕಾಂಕ್ರೀಟ್​ನಿಂದ ಮಾಡಲಾಗಿದೆ. ಆದರೆ ಲಗ್ಗೆರೆ ಅಂಡರ್ ಪಾಸ್ ಬಳಿ ಮಾತ್ರ ಡಾಂಬರ್ ಹಾಕಲಾಗಿದೆ. ಆ ಡಾಂಬರ್ ರೋಡ್​ನಲ್ಲಿ ಹತ್ತಾರು ಗುಂಡಿಗಳು ಬಿದ್ದಿವೆ.

ಎಸ್ ಪಿ ರಸ್ತೆ ಜಂಕ್ಷನ್, ಚಾಮರಾಜಪೇಟೆಯ ಹೊಸ ತರಗಪೇಟೆ 2 ನೇ ಮುಖ್ಯರಸ್ತೆಯಲ್ಲಿ ಮತ್ತು 8 ನೇ ಮೈಲಿಯಿಂದ ಆಂಧ್ರಹಳ್ಳಿಯ ಮುಖ್ಯರಸ್ತೆಯ ಲಿಂಗದೇರನಹಳ್ಳಿ, ಯಶವಂತಪುರದ ಎಇಎಸ್ ರಸ್ತೆಯಲ್ಲಿ ಪಾಥ್ ಹೋಲ್​ಗಳು ಕೆರೆಯಂತಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್