AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಪ್ರಧಾನಿ ಆಗಮನ; ಬೆಂಗಳೂರು ವಿಶ್ವವಿದ್ಯಾಲಯದ 64 ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರಿನಲ್ಲಿ ಮೋದಿ ಓಡಾಡುವ ರಸ್ತೆಗಳ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ವಿವಿ ಸಂಯೋಜನೆಗೆ ಒಳಪಟ್ಟ ವಿವಿ ವ್ಯಾಪ್ತಿಯ ಒಟ್ಟು 64 ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರಿಗೆ ಪ್ರಧಾನಿ ಆಗಮನ; ಬೆಂಗಳೂರು ವಿಶ್ವವಿದ್ಯಾಲಯದ 64 ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು ವಿವಿ
TV9 Web
| Edited By: |

Updated on:Jun 19, 2022 | 2:38 PM

Share

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಕಾರ್ಯಕ್ರಮ ಹಿನ್ನೆಲೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ(Bangalore University) ಸ್ಥಳೀಯ ರಜೆ ಘೋಷಣೆ ಮಾಡಿ ಬೆಂಗಳೂರು ವಿವಿ ಸುತ್ತೋಲೆ ಕಳಿಸಿದೆ. ವಿವಿ ಆವರಣದಲ್ಲಿರುವ ಅಂಬೇಡ್ಕರ್ ಸ್ಕೂಲ್ ಎಕನಾಮಿಕ್ಸ್ ಉದ್ಘಾಟನೆ ಹಿನ್ನೆಲೆ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ರಜೆ ನೀಡಿ ಬೆಂಗಳೂರು ವಿವಿ ಕುಲಸಚಿವರು ಸುತ್ತೋಲೆ ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿ ಮೋದಿ ಓಡಾಡುವ ರಸ್ತೆಗಳ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ವಿವಿ ಸಂಯೋಜನೆಗೆ ಒಳಪಟ್ಟ ವಿವಿ ವ್ಯಾಪ್ತಿಯ ಒಟ್ಟು 64 ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ನಾಳೆಯಿಂದ ಎರಡು ದಿನ ಪಿಎಂ ಮೋದಿ ಕರ್ನಾಟಕ ಪ್ರವಾಸ ಕೈಗೊಂಡ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ನಾಳೆ ಬೆಂಗಳೂರು ವಿವಿಯಲ್ಲಿ ಕಾರ್ಯಕ್ರಮವಿದೆ. ಜೂ.21ರಂದು ಮೈಸೂರಿನಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Redmi Note 10S: ಬಜೆಟ್ ಬೆಲೆಯ ಈ ಫೋನಿನ ದರದಲ್ಲಿ ಮತ್ತಷ್ಟು ಕಡಿತ: ರೆಡ್ಮಿಯಿಂದ ಬಂಫರ್ ಆಫರ್

ಜೂನ್ 20 ಮತ್ತು 21 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಪಟ್ಟಿ -ಜೂನ್ 20 ರಂದು ಬೆಳಗ್ಗೆ 11.55ಕ್ಕೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. -ಮಧ್ಯಾಹ್ನ 12.20ಕ್ಕೆ ಯಲಹಂಕ ವಾಯುನೆಲೆಯಿಂದ ಹೆಲಿಕಾಫ್ಟರ್ ಮೂಲಕ ಐಐಎಸ್ಸಿ ಹೆಲಿಪ್ಯಾಡ್ ಗೆ ಆಗಮನ -ಮಧ್ಯಾಹ್ನ 12.30ರಿಂದ 1 ಗಂಟೆಯವರೆಗೆ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆ ಮತ್ತು ಬಾಗಚಿ ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಥಾಪನೆ -ಮಧ್ಯಾಹ್ನ 1.15 ಕ್ಕೆ ಹೆಲಿಕಾಪ್ಟರ್ ಮೂಲಕ ಐಐಎಸ್ಸಿ ಹೆಲಿಪ್ಯಾಡ್ ನಿಂದ ಕೊಮ್ಮಘಟ್ಟ ಹೆಲಿಪ್ಯಾಡ್ ಗೆ ಪ್ರಯಾಣ -ಮಧ್ಯಾಹ್ನ 1.35ಕ್ಕೆ ಕೊಮ್ಮಘಟ್ಟ ಹೆಲಿಪ್ಯಾಡ್ ಗೆ ಆಗಮನ -ಮಧ್ಯಾಹ್ನ 1.45ರಿಂದ 3 ಗಂಟೆಯವರೆಗೆ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಸಮಾರಂಭ -ಮಧ್ಯಾಹ್ನ 3.15 ಕ್ಕೆ ಹೆಲಿಕಾಪ್ಟರ್ ಮೂಲಕ ಕೊಮ್ಮಘಟ್ಟ ಹೆಲಿಪ್ಯಾಡ್ ನಿಂದ ಬೇಸ್ ಹೆಲಿಪ್ಯಾಡ್ ಗೆ ಪ್ರಯಾಣ -ಮಧ್ಯಾಹ್ನ 3.40 ಕ್ಕೆ ಬೇಸ್ ಹೆಲಿಪ್ಯಾಡ್ ಗೆ ಆಗಮನ -ಮಧ್ಯಾಹ್ನ 3.45 ರಿಂದ ಸಂಜೆ 4.30 ರವರೆಗೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ, ಬೇಸ್ ಯುನಿವರ್ಸಿಟಿ ಉದ್ಘಾಟನೆ ಮತ್ತು ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐಗಳ ಲೋಕಾರ್ಪಣೆ -ಸಂಜೆ 4.30 ರಿಂದ 4.45 ವರೆಗೆ ಕಾಯ್ದಿರಿಸಲ್ಪಟ್ಟ ಸಮಯ -ಸಂಜೆ 5 ಗಂಟೆಗೆ ಬೇಸ್ ಹೆಲಿಪ್ಯಾಡ್ ನಿಂದ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ -ಸಂಜೆ 5.50 ಕ್ಕೆ ಮೈಸೂರಿಗೆ ಆಗಮನ -ಸಂಜೆ 6 ಗಂಟೆಯಿಂದ 7.15 ರವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಮಾರಂಭ -ರಾತ್ರಿ 7.30 ರಿಂದ 8 ಗಂಟೆಯವರೆಗೆ ಸುತ್ತೂರು ಮಠದಲ್ಲಿ ಕಾರ್ಯಕ್ರಮ -ರಾತ್ರಿ 8.15 ರಿಂದ 8.30 ರವರೆಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ -ರಾತ್ರಿ 8.55 ಕ್ಕೆ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ

ಜೂನ್ 21ರ ವೇಳ ಪಟ್ಟಿ -ಜೂನ್ 21 ಬೆಳಗ್ಗೆ 6.30ಕ್ಕೆ ಖಾಸಗಿ ಹೋಟೆಲ್ ನಿಂದ ಮೈಸೂರು ಅರಮನೆ ಮೈದಾನಕ್ಕೆ ಆಗಮನ -ಬೆಳಗ್ಗೆ 6.30 ರಿಂದ 7.45 ರವರೆಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿ -7.45 ರಿಂದ 8 ಗಂಟೆಯವರೆಗೆ ಕಾಯ್ದಿರಿಸಲ್ಪಟ್ಟ ಸಮಯ -8 ಗಂಟೆಯಿಂದ 8.20 ರವರೆಗೆ ಪ್ರದರ್ಶನ ವೀಕ್ಷಣೆ -8.30 ರಿಂದ 9 ಗಂಟೆಯವರೆಗೆ ಮೈಸೂರು ಅರಮನೆಗೆ ಭೇಟಿ -9.20ಕ್ಕೆ ಮೈಸೂರು ಏರ್ ಪೋರ್ಟ್ ನಿಂದ ದೆಹಲಿಗೆ ನಿರ್ಗಮನ.

Published On - 2:38 pm, Sun, 19 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ