AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿಯಲ್ಲಿ ಕುರ್ಚಿಗಾಗಿ ಕುಸ್ತಿ; ಹಾಲಿ ಕುಲಸಚಿವರ ನಿರ್ಗಮನಕ್ಕೂ ಮುನ್ನ ಅಧಿಕಾರ ಚಲಾಯಿಸುತ್ತಿರುವ ನೂತನ ಕುಲಸಚಿವ, ದೂರು ದಾಖಲು

ನವೆಂಬರ್ 2ರಂದು ಕುಲಸಚಿವರ ಕಚೇರಿಗೆ ಬಂದಿದ್ದ ಪ್ರೊ.ಕೊಟ್ರೇಶ್, ಅನುಮತಿ ಇಲ್ಲದೆ ಅನಧಿಕೃತವಾಗಿ ಕಡತ, ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜ್ಞಾನಭಾರತಿ ಪೊಲೀಸ್ ಠಾಣೆಗೆ ಐಎಎಸ್ ಅಧಿಕಾರಿ, ಹಾಲಿ ಕುಲಸಚಿವೆ ಕೆ.ಜ್ಯೋತಿ ದೂರು ನೀಡಿದ್ದಾರೆ.

ಬೆಂಗಳೂರು ವಿವಿಯಲ್ಲಿ ಕುರ್ಚಿಗಾಗಿ ಕುಸ್ತಿ; ಹಾಲಿ ಕುಲಸಚಿವರ ನಿರ್ಗಮನಕ್ಕೂ ಮುನ್ನ ಅಧಿಕಾರ ಚಲಾಯಿಸುತ್ತಿರುವ ನೂತನ ಕುಲಸಚಿವ, ದೂರು ದಾಖಲು
ಬೆಂಗಳೂರು ವಿವಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 04, 2021 | 10:23 AM

Share

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕುರ್ಚಿಗಾಗಿ ಕುಸ್ತಿ ಶುರುವಾಗಿದೆ. ಅಧಿಕಾರ ಸ್ವೀಕಾರಕ್ಕಾಗಿ ಹೈಡ್ರಾಮಾ ನಡೆಯುತ್ತಿದೆ. ಹಾಲಿ ಕುಲಸಚಿವರ ನಿರ್ಗಮನಕ್ಕೂ ಮುನ್ನ ಪ್ರೊ.ಕೊಟ್ರೇಶ್ ಅಧಿಕಾರವನ್ನು ಚಲಾಯಿಸುತ್ತಿದ್ದಾರೆ.

ಬೆಂಗಳೂರು ಕುಲಸಚಿವ ಸ್ಥಾನಕ್ಕೆ ಪ್ರೊ.ಕೊಟ್ರೇಶ್ ನೇಮಕಗೊಂಡಿದ್ದಾರೆ. ನವೆಂಬರ್ 26ರಂದು ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿತ್ತು. ಆದ್ರೆ ಹಾಲಿ ಕುಲಸಚಿವೆ ಕೆ.ಜ್ಯೋತಿ ಬೇರೆ ಯಾವುದೇ ಇಲಾಖೆಗೆ ಇನ್ನೂ ವರ್ಗಾವಣೆ ಆಗಿಲ್ಲ. ಹೀಗಾಗಿ ಈಗಲೂ ಹಾಲಿ ಕುಲಸಚಿವೆ ಕೆ.ಜ್ಯೋತಿ ಅವರ ಅಧಿಕಾರವಿದೆ. ಇದು ತಿಳಿದಿದ್ದರೂ ಹಾಲಿ ಕುಲಸಚಿವೆ ಇಲ್ಲದ ಸಮಯದಲ್ಲಿ ಪ್ರೊ.ಕೊಟ್ರೇಶ್ ಕಡತಗಳಿಗೆ ಸಹಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

ನವೆಂಬರ್ 2ರಂದು ಕುಲಸಚಿವರ ಕಚೇರಿಗೆ ಬಂದಿದ್ದ ಪ್ರೊ.ಕೊಟ್ರೇಶ್, ಅನುಮತಿ ಇಲ್ಲದೆ ಅನಧಿಕೃತವಾಗಿ ಕಡತ, ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜ್ಞಾನಭಾರತಿ ಪೊಲೀಸ್ ಠಾಣೆಗೆ ಐಎಎಸ್ ಅಧಿಕಾರಿ, ಹಾಲಿ ಕುಲಸಚಿವೆ ಕೆ.ಜ್ಯೋತಿ ದೂರು ನೀಡಿದ್ದಾರೆ. ವಿವಿ ಕುಲಪತಿ ಕೆ.ಆರ್.ವೇಣುಗೋಪಾಲ್, ನೂತನ ಕುಲಸಚಿವ ಪ್ರೊ‌.ಕೊಟ್ರೇಶ್ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಸದ್ಯ ಕುಲಪತಿ ಬಳಿ ರಿಪೋರ್ಟ್ ಮಾಡಿಕೊಂಡು ಡಿಸೆಂಬರ್ 1ರಿಂದ ಪ್ರೊ.ಕೊಟ್ರೇಶ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೆ.ಜ್ಯೋತಿ‌ ಅಧಿಕಾರ ಹಸ್ತಾಂತರಕ್ಕೂ ಮೊದಲೇ ಕುಲಸಚಿವ ಸ್ಥಾನದಲ್ಲಿ ಪ್ರೊ.ಕೊಟ್ರೇಶ್ ಆಸೀನರಾಗಿದ್ದಾರೆ. ಅಲ್ಲದೆ ನಿನ್ನೆ ವಿವಿ ಸಿಬ್ಬಂದಿಯ ಜೊತೆಗೆ ದಿಢೀರ್ ಸಭೆ ನಡೆಸಿದ್ದಾರೆ. ಈ ವಿಚಾರವಾಗಿಯೂ ಕೆ.ಜ್ಯೋತಿ ದೂರು ನೀಡಿದ್ದಾರೆ. ಪ್ರೊ.ಕೊಟ್ರೇಶ್ ಈ ಹಿಂದೆ ಸಂಸ್ಕೃತ ವಿವಿ ಕುಲಸಚಿವರಾಗಿದ್ದರು. ಈಗ ಮತ್ತೊಂದು ಬೆಳವಣಿಗೆಯೆಂಬಂತೆ ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯರು ಕೂಡ ಪ್ರೊ.ಕೊಟ್ರೇಶ್ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿಗೆ ದೂರು ನೀಡಿದ್ದಾರೆ. ಕುಲಸಚಿವರ ಸ್ಥಾನಕ್ಕೆ ಕಾನೂನು ಬಾಹಿರವಾಗಿ ನೇಮಕವಾಗಿದೆ. ಕೂಡಲೇ ಕುಲಸಚಿವ ಸ್ಥಾನದಿಂದ ಕೈಬಿಡುವಂತೆ ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಗೋವಿಂದರಾಜು ಸಿಎಂ ಬೊಮ್ಮಾಯಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Konijeti Rosaiah Death: ಆಂಧ್ರಪ್ರದೇಶದ ಮಾಜಿ ಸಿಎಂ ಕೋನಿಜೇಟಿ ರೋಸಯ್ಯ ಇಂದು ನಿಧನ; ಕರ್ನಾಟಕದ ಮಾಜಿ ರಾಜ್ಯಪಾಲರು ಇವರು

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ