AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಗೆ ಸ್ಪೀಡ್ ಬ್ರೇಕರ್ಸ್ ಅಳವಡಿಸಲು ಬಿಬಿಎಂಪಿಗೆ ಡೆಡ್​ಲೈನ್​ ನೀಡಿದ ಬೆಂಗಳೂರು ವಿವಿ ವಿದ್ಯಾರ್ಥಿಗಳು

ರಸ್ತೆಗೆ ಡಾಂಬರು ಹಾಕುವ ಭರದಲ್ಲಿ ಪಾಲಿಕೆ ಹಂಪ್ಸ್​ಗಳನ್ನ ಮುಚ್ಚಿಸಿದೆ. ಇದರಿಂದ ವಾಹನಗಳು ಬಾರಿ ವೇಗವಾಗಿ ಸಂಚರಿಸುತ್ತಿದ್ದು, ಕಂಟ್ರೋಲ್ ಸಿಗದೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ.

ರಸ್ತೆಗೆ ಸ್ಪೀಡ್ ಬ್ರೇಕರ್ಸ್ ಅಳವಡಿಸಲು ಬಿಬಿಎಂಪಿಗೆ ಡೆಡ್​ಲೈನ್​ ನೀಡಿದ ಬೆಂಗಳೂರು ವಿವಿ ವಿದ್ಯಾರ್ಥಿಗಳು
ಬೆಂಗಳೂರು ವಿಶ್ವವಿದ್ಯಾಲಯ
TV9 Web
| Edited By: |

Updated on:Jun 25, 2022 | 7:55 AM

Share

ಬೆಂಗಳೂರು: ಬಿಬಿಎಂಪಿ (BBMP) ಕಾಮಗಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬೆಂಗಳೂರು ವಿಶ್ವವಿದ್ಯಾಲಯ (Bengaluru University) ವಿದ್ಯಾರ್ಥಿಗಳು ರಸ್ತೆಗೆ ಸ್ಪೀಡ್ ಬ್ರೇಕರ್ಸ್ ಅಳವಡಿಸಲು ಗಡುವು ನೀಡಿದ್ದಾರೆ. ವಿವಿ ಆವರಣದಲ್ಲಿ 10 ಸಾವಿರಕ್ಕೂ ಅಧಿಕ ವಾಹನಗಳು ಸಂಚರಿಸುತ್ತವೆ. ಹಂಪ್ಸ್ ಇಲ್ಲದೆ ನಿತ್ಯ 6 ರಿಂದ 8 ಅಪಘಾತಗಳು ಸಂಭವಿಸುತ್ತಿವೆ. ಮೊದಲು ವಿವಿ ಆವರಣದಲ್ಲಿ ಒಟ್ಟು 22 ಹಂಪ್ಸ್​ಗಳಿದ್ದವು. ರಸ್ತೆಗೆ ಡಾಂಬರು ಹಾಕುವ ಭರದಲ್ಲಿ ಪಾಲಿಕೆ ಹಂಪ್ಸ್​ಗಳನ್ನ ಮುಚ್ಚಿಸಿದೆ. ಇದರಿಂದ ವಾಹನಗಳು ಬಾರಿ ವೇಗವಾಗಿ ಸಂಚರಿಸುತ್ತಿದ್ದು, ಕಂಟ್ರೋಲ್ ಸಿಗದೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆ ತೆರವು ಮಾಡಿರುವ ರಸ್ತೆ ಹಂಪ್ಸ್​ಗಳನ್ನ ಪುನರ್ ನಿರ್ಮಿಸಲು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ದೈಹಿಕ ಶಿಕ್ಷಣ ವಿದ್ಯಾರ್ಥಿಗಳ ಮೈದಾನದಲ್ಲಿ 3 ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಪ್ರಧಾನಿ ಇಲ್ಲಿಗೆ ಬಂದಿಳಿಯದಿದ್ದರೂ, ಹೆಲಿಪ್ಯಾಡ್ ಇನ್ನು ತೆರವಾಗಿಲ್ಲ. ಇದರಿಂದ ಆಟದ ಮೈದಾನ ಬಳಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ 2 ದಿನಗೊಳಗಾಗಿ ರಸ್ತೆಗೆ ಹಂಪ್ಸ್​ಗಳನ್ನ ಅಳವಡಿಸಬೇಕು. ಸೋಮವಾರದೊಳಗೆ ಸಮಸ್ಯೆ ಬಗೆಹರಿಯದಿದ್ದರೆ ಹೋರಾಟದ ಹಾದಿ ಹಿಡಿಯುತ್ತೇವೆ ಎಂದು ವಿವಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Nandamuri Balakrishna: ನಂದಮೂರಿ ಬಾಲಕೃಷ್ಣಗೆ ಕೊರೊನಾ ಪಾಸಿಟಿವ್​; ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ

ಇದನ್ನೂ ಓದಿ
Image
Ram Gopal Varma: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಬಗ್ಗೆ ವಿವಾದಾತ್ಮಕ ಟ್ವೀಟ್; ರಾಮ್​ಗೋಪಾಲ್ ವರ್ಮ ವಿರುದ್ಧ ದೂರು ದಾಖಲು
Image
Rice: ಹೆಚ್ಚು ಹೆಚ್ಚು ರೈಸ್​​ ತಿನ್ನುವುದರಿಂದ ಸ್ಥೂಲಕಾಯ ಉಂಟಾಗುತ್ತಾ? ಇಲ್ಲಿದೆ ಮಾಹಿತಿ
Image
Nandamuri Balakrishna: ನಂದಮೂರಿ ಬಾಲಕೃಷ್ಣಗೆ ಕೊರೊನಾ ಪಾಸಿಟಿವ್​; ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ
Image
IND vs LEI: ಭರತ್ ಮೇಲೆ ಭಾರತ ನಂಬಿಕೆ: ದ್ವಿತೀಯ ಇನ್ನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ಮುನ್ನಡೆ

ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದ ಹಿನ್ನೆಲೆ ಬೆಂಗಳೂರು ವಿಶ್ವವಿದ್ಯಾಲಯ ಬಳಿ ರಸ್ತೆ ಕಾಮಗಾರಿ ನಡೆದಿತ್ತು. ಈ ವೇಳೆ ಹಂಪ್ಸ್​ಗಳನ್ನ ತೆರವು ಮಾಡಲಾಗಿದೆ. ವಿವಿ ಆವರಣ ಸಾರ್ವಜನಿಕ ರಸ್ತೆಯಾದರೂ, ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸಂಚರಿಸುತ್ತಿರುತ್ತಾರೆ. ಹೀಗಾಗಿ ತಕ್ಷಣ ಹಂಪ್ಸ್​ಗಳನ್ನ ಅಳವಡಿಸಲು ವಿದ್ಯಾರ್ಥಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಬಿಬಿಎಂಪಿಗೆ ಪತ್ತದ ಬರೆದ ವಿದ್ಯಾರ್ಥಿಗಳು

ಬಿಬಿಎಂಪಿ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ವೇಳೆ 23 ಕೋಟಿ ರೂ. ಖರ್ಚು ಮಾಡಿ ನಿರ್ಮಾಣ ಮಾಡಿದ್ದ ರಸ್ತೆ ಕಳಪೆ ಕಾಮಗಾರಿ ಹಿನ್ನೆಲೆ, ಸ್ಥಳೀಯ ಇಇ, ಎಇಇ, ಎಇ ಮೂವರು ಬಿಬಿಎಂಪಿ (BBMP) ಅಧಿಕಾರಿಗಳಿಗೆ ಮುಖ್ಯ ಅಭಿಯಂತರ ಪ್ರಹ್ಲಾದ್ ಶೋಕಾಸ್ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿರುವುದು ಕಾಣುತ್ತಿದೆ. ಈ ಕುರಿತಾಗಿ ವರದಿ ನೀಡುವಂತೆ ಮೂವರು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಟಿವಿ9 ಸುದ್ದಿ ಆಧರಿಸಿ ಮೂವರು ಅಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡಿದ್ದು, ಶೋಕಾಸ್ ನೋಟೀಸ್​ನಲ್ಲಿ ಟಿವಿ9 ಹೆಸರು ಉಲ್ಲೇಖ ಮಾಡಲಾಗಿದೆ. ನೂತನವಾಗಿ ನಿರ್ಮಿಸಿದ್ದ ರಸ್ತೆ ಕೈಯಿಂದಲೇ ಕಿತ್ತು ಬರುತ್ತಿದ್ದು, ಕಳಪೆ ಕಾಮಗಾರಿ ಎಂದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಈ ಹಿನ್ನೆಲೆ ವರದಿ ನೀಡುವಂತೆ ಮೂವರು ಅಧಿಕಾರಿಗಳಿಗೆ ನೋಟೀಸ್ ನೀಡಲಾಗಿದೆ.

Published On - 7:36 am, Sat, 25 June 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ