AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Water Crisis: ಅಪಾರ್ಟ್ಮೆಂಟ್​​ಗಳಲ್ಲಿ ನೀರಿನ ಸಂಕಷ್ಟ, ಫ್ಲ್ಯಾಟ್ ಬಾಡಿಗೆ ಕಡಿಮೆ ಮಾಡಲು ಹೆಚ್ಚಾಯ್ತು ಆಗ್ರಹ

ಬೆಂಗಳೂರಿನಲ್ಲಿ ಸೃಷ್ಟಿಯಾಗಿರುವ ತೀವ್ರ ನೀರಿನ ಬಿಕ್ಕಟ್ಟು ಅಪಾರ್ಟ್ಮೆಂಟ್​​ಗಳ ಮಾಲೀಕರಿಗೆ ತಲೆಬಿಸಿ ತಂದೊಡ್ಡಿದೆ. ಹಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆಯ ಕಾರಣಕ್ಕೆ ಫ್ಲ್ಯಾಟ್ ಬಾಡಿಗೆ ಕಡಿಮೆ ಮಾಡುವಂತೆ ಬಾಡಿಗೆದಾರರು ಆಗ್ರಹಿಸಿದ್ದರೆ, ಇನ್ನು ಹಲವೆಡೆ ಜನ ಫ್ಲ್ಯಾಟ್ ಬದಲು ಇಂಡಿವಿಜುವಲ್ ಮನೆಗಳನ್ನೇ ಹುಡುಕುತ್ತಿದ್ದಾರೆ.

Bangalore Water Crisis: ಅಪಾರ್ಟ್ಮೆಂಟ್​​ಗಳಲ್ಲಿ ನೀರಿನ ಸಂಕಷ್ಟ, ಫ್ಲ್ಯಾಟ್ ಬಾಡಿಗೆ ಕಡಿಮೆ ಮಾಡಲು ಹೆಚ್ಚಾಯ್ತು ಆಗ್ರಹ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 22, 2024 | 6:55 AM

ಬೆಂಗಳೂರು, ಮಾರ್ಚ್​ 22: ಬೆಂಗಳೂರಿನಲ್ಲಿ ಉಂಟಾಗಿರುವ ತೀವ್ರ ನೀರಿನ ಬಿಕ್ಕಟ್ಟು (Bengaluru Water Crisis) ಇದೀಗ ಅಪಾರ್ಟ್ಮೆಂಟ್​​ಗಳ ಮಾಲೀಕರಿಗೆ ತಲೆಬಿಸಿ ತಂದೊಡ್ಡಿದೆ. ವಿಶೇಷವಾಗಿ ಕಾವೇರಿ ನೀರಿನ (Cauvery Water) ಸಂಪರ್ಕ ಇರದ ಪ್ರದೇಶಗಳ ಅಪಾರ್ಟ್ಮೆಂಟ್​​ಗಳಲ್ಲಿ ಖಾಲಿ ಇರುವ ಫ್ಲ್ಯಾಟ್​ಗಳಿಗೆ ಬಾಡಿಗೆಗೆ ಬರಲು ಜನ ಹಿಂದೆಟು ಹಾಕುತ್ತಿದ್ದಾರೆ. ಫ್ಲ್ಯಾಟ್​ಗಳ ಬದಲು ಮನೆಗಳನ್ನೇ ಜನ ಹುಡುಕುತ್ತಿದ್ದಾರೆ ಎಂಬುದು ರಿಯಲ್ ಎಸ್ಟೇಟ್ (Real Estate) ಉದ್ಯಮದ ಮೂಲಗಳಿಂದ ತಿಳಿದುಬಂದಿದೆ. ಅಪಾರ್ಟ್ಮೆಂಟ್​​​ಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ ಎಂಬುದು ಪ್ರತಿದಿನ ವರದಿಯಾಗುತ್ತಿದೆ. ಈ ಕುರಿತ ವರದಿಗಳನ್ನು ಮಾಧ್ಯಮಗಳಲ್ಲಿ ನೋಡಿದ ಜನ ಫ್ಲ್ಯಾಟ್​ಗಳನ್ನು ಬಾಡಿಗೆಗೆ ಆಯ್ಕೆ ಮಾಡಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

ನೀರು ಮೂಲಭೂತ ಅವಶ್ಯಕತೆಯಾಗಿರುವುದರಿಂದ ಜನರು ಫ್ಲ್ಯಾಟ್​ ಬದಲು ಇಂಡಿವಿಜುವಲ್ ಹೌಸ್​​ಗಳನ್ನು ಆಯ್ಕೆ ಮಾಡುತ್ತಿದ್ದಾರೆ ಎಂದು ಕೋಣನಕುಂಟೆ ಕ್ರಾಸ್, ತಲಘಟ್ಟಪುರ ಹಾಗೂ ಅಂಜನಾಪುರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ರಿಯಲ್ ಎಸ್ಟೇಟ್ ಉದ್ಯಮಿ ರಾಜು ಎಂಬವರು ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ. ಇನ್ನೂ ಅನೇಕರು ಪರಿಸ್ಥಿತಿಯ ಲಾಭ ಪಡೆದುಕೊಂಡು ಬಾಡಿಗೆಯಲ್ಲಿ ಶೇಕಡ ಹತ್ತರಷ್ಟು ಕಡಿಮೆ ಮಾಡುವಂತೆ ಬೇಡಿಕೆ ಇಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ನಗರದ ಅನೇಕ ಅಪಾರ್ಟ್ಮೆಂಟ್​​ಗಳಲ್ಲಿ ನೀರು ಪೂರೈಕೆಗೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಕೆಲವೇ ಗಂಟೆಗಳ ಕಾಲ ನೀರು ಬಿಡಲಾಗುತ್ತಿದೆ. ಇದನ್ನೇ ಮುಂದಿಟ್ಟುಕೊಂಡು ಗ್ರಾಹಕರು ಬಾಡಿಗೆ ಕಡಿಮೆ ಮಾಡುವಂತೆ ಕೇಳುತ್ತಿದ್ದಾರೆ ಎಂದು ಜೆಪಿ ನಗರ ಮತ್ತು ಕನಕಪುರ ರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸುತ್ತಿರುವ ಶ್ರೀನಿವಾಸ್ ಎಂಬವರು ತಿಳಿಸಿದ್ದಾರೆ.

ಟೆಕ್ ಪಾರ್ಕ್​​ಗಳಿಗೆ ಸನಿಹದಲ್ಲಿರುವ ಅಪಾರ್ಟ್ಮೆಂಟ್​​ಗಳಲ್ಲಿ ಪರಿಸ್ಥಿತಿ ತುಸು ಉತ್ತಮವಾಗಿದೆ. ಆದರೆ ಕನಕಪುರ ರಸ್ತೆಯ ಆಸುಪಾಸು ಇರುವ ಅಪಾರ್ಟ್ಮೆಂಟ್​​ಗಳಲ್ಲಿ ಸಮಸ್ಯೆ ಗಂಭೀರವಾಗಿದೆ ಎಂದು ರಿಯಲ್ ಎಸ್ಟೇಟ್ ಉದ್ಯಮಿಗಳು ತಿಳಿಸಿದ್ದಾರೆ.

ಪಿಜಿಗಳಿಗೆ ಸಂಕಷ್ಟ

ನಗರದಲ್ಲಿನ ಪೇಯಿಂಗ್ ಗೆಸ್ಟ್​​ಗಳು (ಪಿಜಿ) ಸಹ ಕಠಿಣ ಪರಿಸ್ಥಿತಿ ಎದುರಿಸುತ್ತಿವೆ. ಒಂದೆಡೆ ನೀರಿನ ಪೂರೈಕೆಗಾಗಿ ನೀರಿನ ಟ್ಯಾಂಕರ್‌ಗಳನ್ನು ಅವಲಂಬಿಸಬೇಕಾಗಿರುವುದರಿಂದ ಅವರ ನಿರ್ವಹಣಾ ವೆಚ್ಚವು ಗಮನಾರ್ಹವಾಗಿ ಹೆಚ್ಚಾಗಿದೆ. ಇನ್ನೊಂದೆಡೆ ಅನೇಕರು ಉತ್ತಮ ನೀರು ಸರಬರಾಜು ಇರುವ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ನೀರು ಉಳಿಸಲು ಜನಾಂದೋಲನ, ವಿಶೇಷ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ

ನೀರಿನ ಬಿಕ್ಕಟ್ಟು ತಾತ್ಕಾಲಿಕ ಪರಿಸ್ಥಿತಿಯಾಗಿರುವುದರಿಂದ ನಾವು ಹೆಚ್ಚಿನ ಬಾಡಿಗೆಗೆ ಬೇಡಿಕೆಯಿಡಲು ಸಾಧ್ಯವಿಲ್ಲ. ಆದರೂ ನೀರನ್ನು ಜಾಗರೂಕತೆಯಿಂದ ಬಳಸುವಂತೆ ನಾವು ವಿನಂತಿಸುತ್ತಿದ್ದೇವೆ ಎಂದು ಬೆಂಗಳೂರು ಪಿಜಿ ಮಾಲೀಕರ ಸಂಘದ ಕಾರ್ಯದರ್ಶಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ