Bangalore Water Crisis: ಅಪಾರ್ಟ್ಮೆಂಟ್​​ಗಳಲ್ಲಿ ನೀರಿನ ಸಂಕಷ್ಟ, ಫ್ಲ್ಯಾಟ್ ಬಾಡಿಗೆ ಕಡಿಮೆ ಮಾಡಲು ಹೆಚ್ಚಾಯ್ತು ಆಗ್ರಹ

ಬೆಂಗಳೂರಿನಲ್ಲಿ ಸೃಷ್ಟಿಯಾಗಿರುವ ತೀವ್ರ ನೀರಿನ ಬಿಕ್ಕಟ್ಟು ಅಪಾರ್ಟ್ಮೆಂಟ್​​ಗಳ ಮಾಲೀಕರಿಗೆ ತಲೆಬಿಸಿ ತಂದೊಡ್ಡಿದೆ. ಹಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆಯ ಕಾರಣಕ್ಕೆ ಫ್ಲ್ಯಾಟ್ ಬಾಡಿಗೆ ಕಡಿಮೆ ಮಾಡುವಂತೆ ಬಾಡಿಗೆದಾರರು ಆಗ್ರಹಿಸಿದ್ದರೆ, ಇನ್ನು ಹಲವೆಡೆ ಜನ ಫ್ಲ್ಯಾಟ್ ಬದಲು ಇಂಡಿವಿಜುವಲ್ ಮನೆಗಳನ್ನೇ ಹುಡುಕುತ್ತಿದ್ದಾರೆ.

Bangalore Water Crisis: ಅಪಾರ್ಟ್ಮೆಂಟ್​​ಗಳಲ್ಲಿ ನೀರಿನ ಸಂಕಷ್ಟ, ಫ್ಲ್ಯಾಟ್ ಬಾಡಿಗೆ ಕಡಿಮೆ ಮಾಡಲು ಹೆಚ್ಚಾಯ್ತು ಆಗ್ರಹ
ಸಾಂದರ್ಭಿಕ ಚಿತ್ರ
Follow us
|

Updated on: Mar 22, 2024 | 6:55 AM

ಬೆಂಗಳೂರು, ಮಾರ್ಚ್​ 22: ಬೆಂಗಳೂರಿನಲ್ಲಿ ಉಂಟಾಗಿರುವ ತೀವ್ರ ನೀರಿನ ಬಿಕ್ಕಟ್ಟು (Bengaluru Water Crisis) ಇದೀಗ ಅಪಾರ್ಟ್ಮೆಂಟ್​​ಗಳ ಮಾಲೀಕರಿಗೆ ತಲೆಬಿಸಿ ತಂದೊಡ್ಡಿದೆ. ವಿಶೇಷವಾಗಿ ಕಾವೇರಿ ನೀರಿನ (Cauvery Water) ಸಂಪರ್ಕ ಇರದ ಪ್ರದೇಶಗಳ ಅಪಾರ್ಟ್ಮೆಂಟ್​​ಗಳಲ್ಲಿ ಖಾಲಿ ಇರುವ ಫ್ಲ್ಯಾಟ್​ಗಳಿಗೆ ಬಾಡಿಗೆಗೆ ಬರಲು ಜನ ಹಿಂದೆಟು ಹಾಕುತ್ತಿದ್ದಾರೆ. ಫ್ಲ್ಯಾಟ್​ಗಳ ಬದಲು ಮನೆಗಳನ್ನೇ ಜನ ಹುಡುಕುತ್ತಿದ್ದಾರೆ ಎಂಬುದು ರಿಯಲ್ ಎಸ್ಟೇಟ್ (Real Estate) ಉದ್ಯಮದ ಮೂಲಗಳಿಂದ ತಿಳಿದುಬಂದಿದೆ. ಅಪಾರ್ಟ್ಮೆಂಟ್​​​ಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ ಎಂಬುದು ಪ್ರತಿದಿನ ವರದಿಯಾಗುತ್ತಿದೆ. ಈ ಕುರಿತ ವರದಿಗಳನ್ನು ಮಾಧ್ಯಮಗಳಲ್ಲಿ ನೋಡಿದ ಜನ ಫ್ಲ್ಯಾಟ್​ಗಳನ್ನು ಬಾಡಿಗೆಗೆ ಆಯ್ಕೆ ಮಾಡಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

ನೀರು ಮೂಲಭೂತ ಅವಶ್ಯಕತೆಯಾಗಿರುವುದರಿಂದ ಜನರು ಫ್ಲ್ಯಾಟ್​ ಬದಲು ಇಂಡಿವಿಜುವಲ್ ಹೌಸ್​​ಗಳನ್ನು ಆಯ್ಕೆ ಮಾಡುತ್ತಿದ್ದಾರೆ ಎಂದು ಕೋಣನಕುಂಟೆ ಕ್ರಾಸ್, ತಲಘಟ್ಟಪುರ ಹಾಗೂ ಅಂಜನಾಪುರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ರಿಯಲ್ ಎಸ್ಟೇಟ್ ಉದ್ಯಮಿ ರಾಜು ಎಂಬವರು ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ. ಇನ್ನೂ ಅನೇಕರು ಪರಿಸ್ಥಿತಿಯ ಲಾಭ ಪಡೆದುಕೊಂಡು ಬಾಡಿಗೆಯಲ್ಲಿ ಶೇಕಡ ಹತ್ತರಷ್ಟು ಕಡಿಮೆ ಮಾಡುವಂತೆ ಬೇಡಿಕೆ ಇಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ನಗರದ ಅನೇಕ ಅಪಾರ್ಟ್ಮೆಂಟ್​​ಗಳಲ್ಲಿ ನೀರು ಪೂರೈಕೆಗೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಕೆಲವೇ ಗಂಟೆಗಳ ಕಾಲ ನೀರು ಬಿಡಲಾಗುತ್ತಿದೆ. ಇದನ್ನೇ ಮುಂದಿಟ್ಟುಕೊಂಡು ಗ್ರಾಹಕರು ಬಾಡಿಗೆ ಕಡಿಮೆ ಮಾಡುವಂತೆ ಕೇಳುತ್ತಿದ್ದಾರೆ ಎಂದು ಜೆಪಿ ನಗರ ಮತ್ತು ಕನಕಪುರ ರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸುತ್ತಿರುವ ಶ್ರೀನಿವಾಸ್ ಎಂಬವರು ತಿಳಿಸಿದ್ದಾರೆ.

ಟೆಕ್ ಪಾರ್ಕ್​​ಗಳಿಗೆ ಸನಿಹದಲ್ಲಿರುವ ಅಪಾರ್ಟ್ಮೆಂಟ್​​ಗಳಲ್ಲಿ ಪರಿಸ್ಥಿತಿ ತುಸು ಉತ್ತಮವಾಗಿದೆ. ಆದರೆ ಕನಕಪುರ ರಸ್ತೆಯ ಆಸುಪಾಸು ಇರುವ ಅಪಾರ್ಟ್ಮೆಂಟ್​​ಗಳಲ್ಲಿ ಸಮಸ್ಯೆ ಗಂಭೀರವಾಗಿದೆ ಎಂದು ರಿಯಲ್ ಎಸ್ಟೇಟ್ ಉದ್ಯಮಿಗಳು ತಿಳಿಸಿದ್ದಾರೆ.

ಪಿಜಿಗಳಿಗೆ ಸಂಕಷ್ಟ

ನಗರದಲ್ಲಿನ ಪೇಯಿಂಗ್ ಗೆಸ್ಟ್​​ಗಳು (ಪಿಜಿ) ಸಹ ಕಠಿಣ ಪರಿಸ್ಥಿತಿ ಎದುರಿಸುತ್ತಿವೆ. ಒಂದೆಡೆ ನೀರಿನ ಪೂರೈಕೆಗಾಗಿ ನೀರಿನ ಟ್ಯಾಂಕರ್‌ಗಳನ್ನು ಅವಲಂಬಿಸಬೇಕಾಗಿರುವುದರಿಂದ ಅವರ ನಿರ್ವಹಣಾ ವೆಚ್ಚವು ಗಮನಾರ್ಹವಾಗಿ ಹೆಚ್ಚಾಗಿದೆ. ಇನ್ನೊಂದೆಡೆ ಅನೇಕರು ಉತ್ತಮ ನೀರು ಸರಬರಾಜು ಇರುವ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ನೀರು ಉಳಿಸಲು ಜನಾಂದೋಲನ, ವಿಶೇಷ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ

ನೀರಿನ ಬಿಕ್ಕಟ್ಟು ತಾತ್ಕಾಲಿಕ ಪರಿಸ್ಥಿತಿಯಾಗಿರುವುದರಿಂದ ನಾವು ಹೆಚ್ಚಿನ ಬಾಡಿಗೆಗೆ ಬೇಡಿಕೆಯಿಡಲು ಸಾಧ್ಯವಿಲ್ಲ. ಆದರೂ ನೀರನ್ನು ಜಾಗರೂಕತೆಯಿಂದ ಬಳಸುವಂತೆ ನಾವು ವಿನಂತಿಸುತ್ತಿದ್ದೇವೆ ಎಂದು ಬೆಂಗಳೂರು ಪಿಜಿ ಮಾಲೀಕರ ಸಂಘದ ಕಾರ್ಯದರ್ಶಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ