AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳು ಜಲಮಂಡಳಿಯಿಂದ ಸಸ್ಪೆಂಡ್

ಭ್ರಷ್ಟಾಚಾರ ಆರೋಪದ ಮೇಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ 13 ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಲಮಂಡಳಿಯ‌ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ.

ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳು ಜಲಮಂಡಳಿಯಿಂದ ಸಸ್ಪೆಂಡ್
ಬೆಂಗಳೂರು ಜಲಮಂಡಳಿ
TV9 Web
| Edited By: |

Updated on:Jan 03, 2023 | 10:54 PM

Share

ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯ 13 ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಲಮಂಡಳಿಯ‌ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ. ವಂಚನೆ ಮಾಡಿರುವವರು ಗುತ್ತಿಗೆ ನೌಕರರು. ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವುದಕ್ಕೆ ಇವರು ವಿಫಲರಾಗಿದ್ದಾರೆ. ಈ ವೈಫಲ್ಯದಿಂದ ಜಲಮಂಡಳಿಗೆ ಆದಾಯದ ನಷ್ಟವಾಗಿದೆ. ಇನ್ನೂ ಈ ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ ಗೆಜೆಟೆಡ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜಲ ಮಂಡಳಿ ನೋಟ್ ಬ್ಯಾನ್ ಮತ್ತು ಕೋವಿಡ್ ವೇಳೆ ನಗದು ಪಾವತಿಗೆ ಅವಕಾಶ ನೀಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡು ಮಂಡಳಿಯ ಕೋಟಿ ಕೋಟಿ ಹಣ ವಂಚನೆ ಮಾಡಿದ್ದರು. ಮಂಡಳಿಯ 45 ಉಪ ವಿಭಾಗಗಳಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಮಂಡಳಿ ಹಲವು ಪೊಲೀಸ್ ಠಾಣೆಗಳಲ್ಲಿ‌ ದೂರು ನೀಡಿದ್ದರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ, ಕೇಂದ್ರ ಚುನಾವಣಾಧಿಕಾರಿಗಳಿಂದ ಪೂರ್ವ ತಯಾರಿ ಪರಿವೀಕ್ಷಣೆ

ಅಧಿಕಾರಿಗಳು ಅಡಿಟ್​ನಲ್ಲಿ ಪತ್ತೆಯಾಗದಂತೆ ಹಣ ಗುಳುಂ ಮಾಡಿದ್ದರು. ಈ ಸಂಬಂಧ ಮಂಡಳಿ ಅಕ್ರಮ ಭೇದಿಸಲು 3 ತಂಡ ರಚನೆ ಮಾಡಿತ್ತು. ಈ ಮಂಡಳಿಯ ಆಂತರಿಕ ತನಿಖೆಯಲ್ಲಿ ಹಣ ದುರ್ಬಳಕೆ ಪತ್ತೆಯಾಗಿದೆ. ಈ ಹಿನ್ನೆಲೆ ಇಂಜಿನಿಯರ್, ಕಂದಾಯ ವ್ಯವಸ್ಥಾಪಕರು, ಸಹಾಯಕರ ಕಲ್ಯಾಣ ಅಧಿಕಾರಿಗಳು ಸೇರಿದಂತೆ 13 ಭ್ರಷ್ಟ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ.

ಯಾವೆಲ್ಲ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ ಗೊತ್ತಾ?

  1. ಭರತ್ ಕುಮಾರ್, ಸಹಾಯಕ
  2. ಶ್ರೀನಿವಾಸ್, ಕಾರ್ಯ ನಿರ್ವಾಹಕ ಅಭಿಯಂತರ
  3. ವಿಶ್ವನಾಥ್ ಕೆ. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ
  4. ಸಿ. ಸೋಮಶೇಖರ್, ಹಿರಿಯ ಸಹಾಯಕ
  5. ನಾಗೇಂದ್ರ, ಕಾರ್ಯ ನಿರ್ವಾಹಕ ಅಭಿಯಂತರ
  6. ನಾಗರಾಜ್, ಕಂದಾಯ ವ್ಯವಸ್ಥಾಪಕ
  7. ಸಚಿನ್ ಪಾಟೀಲ್, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ
  8. ರಾಮಪ್ಪ ಮಡಿವಾಳದ, ಸಹಾಯಕ
  9. ಸ್ನೇಹಾ. ವಿ, ಕಾರ್ಯ ನಿರ್ವಾಹಕ ಅಭಿಯಂತರ
  10. ಭೀಮಶಂಕರ್, ಕಂದಾಯ ವ್ಯವಸ್ಥಾಪಕ
  11. ಗೀತಾ.ಎಂ, ಹಿರಿಯ ಸಹಾಯಕಿ
  12. ಎನ್. ರುದ್ರೇಶ್, ಕಂದಾಯ ವ್ಯವಸ್ಥಾಪಕ
  13. ಯೋಗೇಶ್.ಎಸ್, ಸಹಾಯಕ ಕಲ್ಯಾಣ ಅಧಿಕಾರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:32 pm, Tue, 3 January 23

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ