AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳು ಜಲಮಂಡಳಿಯಿಂದ ಸಸ್ಪೆಂಡ್

ಭ್ರಷ್ಟಾಚಾರ ಆರೋಪದ ಮೇಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ 13 ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಲಮಂಡಳಿಯ‌ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ.

ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳು ಜಲಮಂಡಳಿಯಿಂದ ಸಸ್ಪೆಂಡ್
ಬೆಂಗಳೂರು ಜಲಮಂಡಳಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 03, 2023 | 10:54 PM

ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯ 13 ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಲಮಂಡಳಿಯ‌ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ. ವಂಚನೆ ಮಾಡಿರುವವರು ಗುತ್ತಿಗೆ ನೌಕರರು. ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವುದಕ್ಕೆ ಇವರು ವಿಫಲರಾಗಿದ್ದಾರೆ. ಈ ವೈಫಲ್ಯದಿಂದ ಜಲಮಂಡಳಿಗೆ ಆದಾಯದ ನಷ್ಟವಾಗಿದೆ. ಇನ್ನೂ ಈ ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ ಗೆಜೆಟೆಡ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜಲ ಮಂಡಳಿ ನೋಟ್ ಬ್ಯಾನ್ ಮತ್ತು ಕೋವಿಡ್ ವೇಳೆ ನಗದು ಪಾವತಿಗೆ ಅವಕಾಶ ನೀಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡು ಮಂಡಳಿಯ ಕೋಟಿ ಕೋಟಿ ಹಣ ವಂಚನೆ ಮಾಡಿದ್ದರು. ಮಂಡಳಿಯ 45 ಉಪ ವಿಭಾಗಗಳಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಮಂಡಳಿ ಹಲವು ಪೊಲೀಸ್ ಠಾಣೆಗಳಲ್ಲಿ‌ ದೂರು ನೀಡಿದ್ದರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ, ಕೇಂದ್ರ ಚುನಾವಣಾಧಿಕಾರಿಗಳಿಂದ ಪೂರ್ವ ತಯಾರಿ ಪರಿವೀಕ್ಷಣೆ

ಅಧಿಕಾರಿಗಳು ಅಡಿಟ್​ನಲ್ಲಿ ಪತ್ತೆಯಾಗದಂತೆ ಹಣ ಗುಳುಂ ಮಾಡಿದ್ದರು. ಈ ಸಂಬಂಧ ಮಂಡಳಿ ಅಕ್ರಮ ಭೇದಿಸಲು 3 ತಂಡ ರಚನೆ ಮಾಡಿತ್ತು. ಈ ಮಂಡಳಿಯ ಆಂತರಿಕ ತನಿಖೆಯಲ್ಲಿ ಹಣ ದುರ್ಬಳಕೆ ಪತ್ತೆಯಾಗಿದೆ. ಈ ಹಿನ್ನೆಲೆ ಇಂಜಿನಿಯರ್, ಕಂದಾಯ ವ್ಯವಸ್ಥಾಪಕರು, ಸಹಾಯಕರ ಕಲ್ಯಾಣ ಅಧಿಕಾರಿಗಳು ಸೇರಿದಂತೆ 13 ಭ್ರಷ್ಟ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ.

ಯಾವೆಲ್ಲ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ ಗೊತ್ತಾ?

  1. ಭರತ್ ಕುಮಾರ್, ಸಹಾಯಕ
  2. ಶ್ರೀನಿವಾಸ್, ಕಾರ್ಯ ನಿರ್ವಾಹಕ ಅಭಿಯಂತರ
  3. ವಿಶ್ವನಾಥ್ ಕೆ. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ
  4. ಸಿ. ಸೋಮಶೇಖರ್, ಹಿರಿಯ ಸಹಾಯಕ
  5. ನಾಗೇಂದ್ರ, ಕಾರ್ಯ ನಿರ್ವಾಹಕ ಅಭಿಯಂತರ
  6. ನಾಗರಾಜ್, ಕಂದಾಯ ವ್ಯವಸ್ಥಾಪಕ
  7. ಸಚಿನ್ ಪಾಟೀಲ್, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ
  8. ರಾಮಪ್ಪ ಮಡಿವಾಳದ, ಸಹಾಯಕ
  9. ಸ್ನೇಹಾ. ವಿ, ಕಾರ್ಯ ನಿರ್ವಾಹಕ ಅಭಿಯಂತರ
  10. ಭೀಮಶಂಕರ್, ಕಂದಾಯ ವ್ಯವಸ್ಥಾಪಕ
  11. ಗೀತಾ.ಎಂ, ಹಿರಿಯ ಸಹಾಯಕಿ
  12. ಎನ್. ರುದ್ರೇಶ್, ಕಂದಾಯ ವ್ಯವಸ್ಥಾಪಕ
  13. ಯೋಗೇಶ್.ಎಸ್, ಸಹಾಯಕ ಕಲ್ಯಾಣ ಅಧಿಕಾರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:32 pm, Tue, 3 January 23

ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ