ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳು ಜಲಮಂಡಳಿಯಿಂದ ಸಸ್ಪೆಂಡ್

ಭ್ರಷ್ಟಾಚಾರ ಆರೋಪದ ಮೇಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ 13 ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಲಮಂಡಳಿಯ‌ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ.

ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳು ಜಲಮಂಡಳಿಯಿಂದ ಸಸ್ಪೆಂಡ್
ಬೆಂಗಳೂರು ಜಲಮಂಡಳಿ
Follow us
| Updated By: ವಿವೇಕ ಬಿರಾದಾರ

Updated on:Jan 03, 2023 | 10:54 PM

ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯ 13 ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಲಮಂಡಳಿಯ‌ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ. ವಂಚನೆ ಮಾಡಿರುವವರು ಗುತ್ತಿಗೆ ನೌಕರರು. ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವುದಕ್ಕೆ ಇವರು ವಿಫಲರಾಗಿದ್ದಾರೆ. ಈ ವೈಫಲ್ಯದಿಂದ ಜಲಮಂಡಳಿಗೆ ಆದಾಯದ ನಷ್ಟವಾಗಿದೆ. ಇನ್ನೂ ಈ ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ ಗೆಜೆಟೆಡ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜಲ ಮಂಡಳಿ ನೋಟ್ ಬ್ಯಾನ್ ಮತ್ತು ಕೋವಿಡ್ ವೇಳೆ ನಗದು ಪಾವತಿಗೆ ಅವಕಾಶ ನೀಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡು ಮಂಡಳಿಯ ಕೋಟಿ ಕೋಟಿ ಹಣ ವಂಚನೆ ಮಾಡಿದ್ದರು. ಮಂಡಳಿಯ 45 ಉಪ ವಿಭಾಗಗಳಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಮಂಡಳಿ ಹಲವು ಪೊಲೀಸ್ ಠಾಣೆಗಳಲ್ಲಿ‌ ದೂರು ನೀಡಿದ್ದರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ, ಕೇಂದ್ರ ಚುನಾವಣಾಧಿಕಾರಿಗಳಿಂದ ಪೂರ್ವ ತಯಾರಿ ಪರಿವೀಕ್ಷಣೆ

ಅಧಿಕಾರಿಗಳು ಅಡಿಟ್​ನಲ್ಲಿ ಪತ್ತೆಯಾಗದಂತೆ ಹಣ ಗುಳುಂ ಮಾಡಿದ್ದರು. ಈ ಸಂಬಂಧ ಮಂಡಳಿ ಅಕ್ರಮ ಭೇದಿಸಲು 3 ತಂಡ ರಚನೆ ಮಾಡಿತ್ತು. ಈ ಮಂಡಳಿಯ ಆಂತರಿಕ ತನಿಖೆಯಲ್ಲಿ ಹಣ ದುರ್ಬಳಕೆ ಪತ್ತೆಯಾಗಿದೆ. ಈ ಹಿನ್ನೆಲೆ ಇಂಜಿನಿಯರ್, ಕಂದಾಯ ವ್ಯವಸ್ಥಾಪಕರು, ಸಹಾಯಕರ ಕಲ್ಯಾಣ ಅಧಿಕಾರಿಗಳು ಸೇರಿದಂತೆ 13 ಭ್ರಷ್ಟ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ.

ಯಾವೆಲ್ಲ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ ಗೊತ್ತಾ?

  1. ಭರತ್ ಕುಮಾರ್, ಸಹಾಯಕ
  2. ಶ್ರೀನಿವಾಸ್, ಕಾರ್ಯ ನಿರ್ವಾಹಕ ಅಭಿಯಂತರ
  3. ವಿಶ್ವನಾಥ್ ಕೆ. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ
  4. ಸಿ. ಸೋಮಶೇಖರ್, ಹಿರಿಯ ಸಹಾಯಕ
  5. ನಾಗೇಂದ್ರ, ಕಾರ್ಯ ನಿರ್ವಾಹಕ ಅಭಿಯಂತರ
  6. ನಾಗರಾಜ್, ಕಂದಾಯ ವ್ಯವಸ್ಥಾಪಕ
  7. ಸಚಿನ್ ಪಾಟೀಲ್, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ
  8. ರಾಮಪ್ಪ ಮಡಿವಾಳದ, ಸಹಾಯಕ
  9. ಸ್ನೇಹಾ. ವಿ, ಕಾರ್ಯ ನಿರ್ವಾಹಕ ಅಭಿಯಂತರ
  10. ಭೀಮಶಂಕರ್, ಕಂದಾಯ ವ್ಯವಸ್ಥಾಪಕ
  11. ಗೀತಾ.ಎಂ, ಹಿರಿಯ ಸಹಾಯಕಿ
  12. ಎನ್. ರುದ್ರೇಶ್, ಕಂದಾಯ ವ್ಯವಸ್ಥಾಪಕ
  13. ಯೋಗೇಶ್.ಎಸ್, ಸಹಾಯಕ ಕಲ್ಯಾಣ ಅಧಿಕಾರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:32 pm, Tue, 3 January 23

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?