AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳು ಜಲಮಂಡಳಿಯಿಂದ ಸಸ್ಪೆಂಡ್

ಭ್ರಷ್ಟಾಚಾರ ಆರೋಪದ ಮೇಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ 13 ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಲಮಂಡಳಿಯ‌ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ.

ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳು ಜಲಮಂಡಳಿಯಿಂದ ಸಸ್ಪೆಂಡ್
ಬೆಂಗಳೂರು ಜಲಮಂಡಳಿ
TV9 Web
| Edited By: |

Updated on:Jan 03, 2023 | 10:54 PM

Share

ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯ 13 ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಲಮಂಡಳಿಯ‌ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ. ವಂಚನೆ ಮಾಡಿರುವವರು ಗುತ್ತಿಗೆ ನೌಕರರು. ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವುದಕ್ಕೆ ಇವರು ವಿಫಲರಾಗಿದ್ದಾರೆ. ಈ ವೈಫಲ್ಯದಿಂದ ಜಲಮಂಡಳಿಗೆ ಆದಾಯದ ನಷ್ಟವಾಗಿದೆ. ಇನ್ನೂ ಈ ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ ಗೆಜೆಟೆಡ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜಲ ಮಂಡಳಿ ನೋಟ್ ಬ್ಯಾನ್ ಮತ್ತು ಕೋವಿಡ್ ವೇಳೆ ನಗದು ಪಾವತಿಗೆ ಅವಕಾಶ ನೀಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡು ಮಂಡಳಿಯ ಕೋಟಿ ಕೋಟಿ ಹಣ ವಂಚನೆ ಮಾಡಿದ್ದರು. ಮಂಡಳಿಯ 45 ಉಪ ವಿಭಾಗಗಳಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಮಂಡಳಿ ಹಲವು ಪೊಲೀಸ್ ಠಾಣೆಗಳಲ್ಲಿ‌ ದೂರು ನೀಡಿದ್ದರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ, ಕೇಂದ್ರ ಚುನಾವಣಾಧಿಕಾರಿಗಳಿಂದ ಪೂರ್ವ ತಯಾರಿ ಪರಿವೀಕ್ಷಣೆ

ಅಧಿಕಾರಿಗಳು ಅಡಿಟ್​ನಲ್ಲಿ ಪತ್ತೆಯಾಗದಂತೆ ಹಣ ಗುಳುಂ ಮಾಡಿದ್ದರು. ಈ ಸಂಬಂಧ ಮಂಡಳಿ ಅಕ್ರಮ ಭೇದಿಸಲು 3 ತಂಡ ರಚನೆ ಮಾಡಿತ್ತು. ಈ ಮಂಡಳಿಯ ಆಂತರಿಕ ತನಿಖೆಯಲ್ಲಿ ಹಣ ದುರ್ಬಳಕೆ ಪತ್ತೆಯಾಗಿದೆ. ಈ ಹಿನ್ನೆಲೆ ಇಂಜಿನಿಯರ್, ಕಂದಾಯ ವ್ಯವಸ್ಥಾಪಕರು, ಸಹಾಯಕರ ಕಲ್ಯಾಣ ಅಧಿಕಾರಿಗಳು ಸೇರಿದಂತೆ 13 ಭ್ರಷ್ಟ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ.

ಯಾವೆಲ್ಲ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ ಗೊತ್ತಾ?

  1. ಭರತ್ ಕುಮಾರ್, ಸಹಾಯಕ
  2. ಶ್ರೀನಿವಾಸ್, ಕಾರ್ಯ ನಿರ್ವಾಹಕ ಅಭಿಯಂತರ
  3. ವಿಶ್ವನಾಥ್ ಕೆ. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ
  4. ಸಿ. ಸೋಮಶೇಖರ್, ಹಿರಿಯ ಸಹಾಯಕ
  5. ನಾಗೇಂದ್ರ, ಕಾರ್ಯ ನಿರ್ವಾಹಕ ಅಭಿಯಂತರ
  6. ನಾಗರಾಜ್, ಕಂದಾಯ ವ್ಯವಸ್ಥಾಪಕ
  7. ಸಚಿನ್ ಪಾಟೀಲ್, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ
  8. ರಾಮಪ್ಪ ಮಡಿವಾಳದ, ಸಹಾಯಕ
  9. ಸ್ನೇಹಾ. ವಿ, ಕಾರ್ಯ ನಿರ್ವಾಹಕ ಅಭಿಯಂತರ
  10. ಭೀಮಶಂಕರ್, ಕಂದಾಯ ವ್ಯವಸ್ಥಾಪಕ
  11. ಗೀತಾ.ಎಂ, ಹಿರಿಯ ಸಹಾಯಕಿ
  12. ಎನ್. ರುದ್ರೇಶ್, ಕಂದಾಯ ವ್ಯವಸ್ಥಾಪಕ
  13. ಯೋಗೇಶ್.ಎಸ್, ಸಹಾಯಕ ಕಲ್ಯಾಣ ಅಧಿಕಾರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:32 pm, Tue, 3 January 23

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?