AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜನತೆಗೆ ಮತ್ತೊಂದು ದರ ಏರಿಕೆ ಬಿಸಿ, ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ

ಅಧಿಕಾರಕ್ಕೆ ಬಂದ ಹೊತ್ತಲ್ಲೇ ಜಲಮಂಡಳಿಯ ನೀರಿನ ದರ ಏರಿಕೆ ಸುಳಿವು ನೀಡಿದ್ದ ಸರ್ಕಾರ, ಇದೀಗ ಬರೋಬ್ಬರಿ 10 ವರ್ಷಗಳ ಬಳಿಕ ನೀರಿನ ದರ ಪರಿಷ್ಕರಣೆಗೆ ಸದ್ದಿಲ್ಲದೇ ಸಜ್ಜಾಗುತ್ತಿದೆ. 2014 ರಲ್ಲಿ ದರ ಪರಿಷ್ಕರಿಸಿದ್ದ ಜಲಮಂಡಳಿ, ಇದೀಗ ನೀರಿನ ದರ ಹೆಚ್ಚಳಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್​ಗೆ ಕಾದುಕುಳಿತಿದೆ.

ಬೆಂಗಳೂರು ಜನತೆಗೆ ಮತ್ತೊಂದು ದರ ಏರಿಕೆ ಬಿಸಿ, ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿ
ಶಾಂತಮೂರ್ತಿ
| Edited By: |

Updated on: Jun 17, 2024 | 7:28 AM

Share

ಬೆಂಗಳೂರು, ಜೂನ್​ 17: ರಾಜ್ಯದ ಜನರಿಗೆ ಸರ್ಕಾರ (Karnataka Government) ತೈಲ ಬೆಲೆ ಏರಿಕೆ (Petrol, Diesel Price Hike) ಶಾಕ್  ನೀಡಿರುವ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಮತ್ತೊಂದು ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಹೆಚ್ಚಾಗಿದೆ. ಲೋಕಸಭಾ ಚುನಾವಣೆಯ ಬಳಿಕ ನೀರಿನ ಮೇಲಿನ ದರ ಏರಿಕೆ (Water Price Hike) ಸುಳಿವು ನೀಡಿದ್ದ ಸರ್ಕಾರ, ಇದೀಗ 10 ವರ್ಷಗಳ ಬಳಿಕ ನೀರಿನ ದರ ಏರಿಕೆಗೆ ಪ್ಲಾನ್ ನಡೆಸಿದೆ. ಈಗಾಗಲೇ ಜಲಮಂಡಳಿ ದರ ಏರಿಕೆಯ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದು, ಜನರಿಗೆ ಮತ್ತಷ್ಟು ಹೊರೆಬೀಳುವ ಸಾಧ್ಯತೆ ಇದೆ.

ಅಧಿಕಾರಕ್ಕೆ ಬಂದ ಹೊತ್ತಲ್ಲೇ ಜಲಮಂಡಳಿಯ ನೀರಿನ ದರ ಏರಿಕೆ ಸುಳಿವು ನೀಡಿದ್ದ ಸರ್ಕಾರ, ಇದೀಗ ಬರೋಬ್ಬರಿ 10 ವರ್ಷಗಳ ಬಳಿಕ ನೀರಿನ ದರ ಪರಿಷ್ಕರಣೆಗೆ ಸದ್ದಿಲ್ಲದೇ ಸಜ್ಜಾಗುತ್ತಿದೆ. ನಗರಾಭಿವೃದ್ಧಿ ಸಚಿವರಾದ ಬಳಿಕ ಜಲಮಂಡಳಿಗೆ ಭೇಟಿ ನೀಡಿದ್ದ ವೇಳೆ ನೀರಿನ ದರ ಪರಿಷ್ಕರಣೆಯ ಸುಳಿವು ನೀಡಿದ್ದ ಡಿ.ಕೆ.ಶಿವಕುಮಾರ್, ಇದೀಗ ಜಲಮಂಡಳಿಯ ದರ ಏರಿಕೆ ಪ್ರಸ್ತಾವನೆಗೆ ಅಸ್ತು ಅನ್ನುವ ಸಾಧ್ಯತೆ ಇದೆ. 2014 ರಲ್ಲಿ ದರ ಪರಿಷ್ಕರಿಸಿದ್ದ ಜಲಮಂಡಳಿ, ಇದೀಗ ನೀರಿನ ದರ ಹೆಚ್ಚಳಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್​ಗೆ ಕಾದುಕುಳಿತಿದೆ.

ಲೋಕಸಭಾ ಚುನಾವಣೆ ಬಳಿಕ ನೀರಿನ ದರ ಪರಿಷ್ಕರಣೆ ಬಗ್ಗೆ ಚಿಂತಿಸೋಣ ಎಂದಿದ್ದ ಸರ್ಕಾರ, ಇದೀಗ ತೆರೆಮರೆಯಲ್ಲಿ ನೀರಿನ ದರ ಪರಿಷ್ಕರಣೆಗೆ ಸಜ್ಜಾಗುತ್ತಿದೆ. ಗೃಹಬಳಕೆ, ವಾಣಿಜ್ಯ ಸೇರಿ ಎಲ್ಲ ರೀತಿಯ ನೀರು ಪೂರೈಕೆ ಮೇಲೆ ಶೇ40 ರಷ್ಟು ದರ ಏರಿಕೆಗೆ ಚರ್ಚೆ ನಡೆಯುತಿದ್ದು, ಸರ್ಕಾರ ಒಪ್ಪಿಗೆ ಸೂಚಿಸೂವುದೆ ತಡ, ದರ ಪರಿಷ್ಕರಿಸಲು ಜಲಮಂಡಳಿ ಕೂಡ ಸಜ್ಜಾಗಿ ಕುಳಿತಿದೆ.

ಇದನ್ನೂ ಓದಿ:  ಪೆಟ್ರೋಲ್​, ಡೀಸೆಲ್ ಬೆಲೆ ಇಳಿಸದಿದ್ದರೆ ಕರ್ನಾಟಕ ಬಂದ್​ಗೆ ಕರೆ ಕೊಡುತ್ತೇವೆ: ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ

ಈಗಾಗಲೆ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬೆಂಗಳೂರು ಮಂದಿ, ನೀರಿನ ದರ ಏರಿಕೆ ಪ್ಲ್ಯಾನ್​ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೆ ಸರಿಯಾಗಿ ನೀರು ಬಾರದಿದದ್ದರೂ ಬಿಲ್ ಕಟ್ಟುತ್ತಿದ್ದೇವೆ, ಈಗ ನೀರಿನ ದರವನ್ನು ಏರಿಕೆ ಮಾಡಿದರೆ ಬದುಕುವುದು ಹೇಗೆ ಅಂತ ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

ಒಟ್ಟಿನಲ್ಲಿ ಗ್ಯಾರಂಟಿಗಳ ಹೆಸರಲ್ಲಿ ಬಿಟ್ಟಿ ಭಾಗ್ಯಗಳನ್ನು ನೀಡಿದ್ದ ಸರ್ಕಾರ, ಇದೀಗ ಪರೋಕ್ಷವಾಗಿ ಆದಾಯ ಸಂಗ್ರಹಕ್ಕೆ ಕೈ ಹಾಕುತ್ತಿದೆ ಅಂತ ಸಾರ್ವಜನಿಕರಲ್ಲಿ ಚರ್ಚೆ ಶುರುವಾಗಿದೆ. ಚುನಾವಣೆ ಮುಗಿಯುತ್ತಿದ್ದಂತೆ ತೈಲ ಬೆಲೆ ಏರಿಸಿರುವ ಸರ್ಕಾರ, ನೀರಿನ ದರ ಹೆಚ್ಚಳ ಮಾಡಿದರೆ ಜೀವನ ಹೇಗೆ ಅಂತ ಜನರು ಕಂಗಾಲಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ