AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಣೆಯಾದ ಬೀದಿ ನಾಯಿಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಡಾ. ಪುನೀತಾ ರಂಗಸ್ವಾಮಿ ಎಂಬುವರು ಬೀದಿ ನಾಯಿ ಕಾಣೆಯಾಗಿದೆ ಎಂದು ಎಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅನಿಲ್ ಎಂಬುವರು ನಾಯಿಗೆ ಹಿಂಸೆ ನೀಡಿ, ಎಲ್ಲೋ ಬಿಟ್ಟು ಬಂದಿದ್ದಾರೆ ಎಂದು ಆರೋಪಿಸಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಕಾಣೆಯಾದ ಬೀದಿ ನಾಯಿಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Jan 07, 2025 | 10:24 AM

Share

ಬೆಂಗಳೂರು, ಜನವರಿ 07: ಕಾಣೆಯಾದ ಬೀದಿ ನಾಯಿಗಾಗಿ (Dog) ಮಹಿಳೆಯೊಬ್ಬರು ಪೊಲೀಸ್ (Police) ಠಾಣೆ ಮೆಟ್ಟಿಲೇರಿದ್ದಾರೆ. ಕಲ್ಯಾಣ ನಗರದ (Kalyan Nagar) ಹೆಚ್​ಆರ್​ಬಿಆರ್ ಲೇಔಟ್​ ನಿವಾಸಿ ಡಾ. ಪುನೀತಾ ರಂಗಸ್ವಾಮಿಯವರು ಬೀದಿ ನಾಯಿ ಕಾಣೆಯಾಗಿದೆ ಎಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ. ಬೀದಿ ನಾಯಿಗೆ ಹಿಂಸೆ ನೀಡಿ, ಬೇರೆ ಕಡೆ ಬಿಟ್ಟು ಬಂದಿದ್ದಾರೆಂದು ಪುನೀತಾ ತಮ್ಮದೇ ಲೇಔಟ್​ನ ಅನಿಲ್ ಎಂಬುವರು ವಿರುದ್ಧ ಆರೋಪ ಮಾಡಿದ್ದಾರೆ.

ಹೆಚ್.ಆರ್.ಬಿ.ಆರ್ ಲೇಔಟ್​ನ ಎರಡನೇ ಬ್ಲಾಕ್​ನಲ್ಲಿದ್ದ 7 ತಿಂಗಳ ನಾಯಿಗೆ ದೂರುದಾರೆ ಪುನೀತಾ ರಂಗಸ್ವಾಮಿ ಅವರು ನಿತ್ಯ ಊಟ ಹಾಕುತ್ತಿದ್ದರು. ಹೀಗಾಗಿ, ನಿಯತ್ತಿನ ನಾಯಿ ಪುನೀತಾ ಅವರ ಮನೆ ಮುಂದೆ ಕಾವುಲಾಗಿ ಇರುತ್ತಿತ್ತು. 2025ರ ಡಿಸೆಂಬರ್ 14ರಂದು ನಾಯಿ ಬಿಸ್ಕೆಟ್ ಹಾಗೂ ನೀರು ಕುಡಿದು ಮನೆಯ ಮುಂದೆ ಮಲಗಿತ್ತು. ಆದರೆ, ಡಿಸೆಂಬರ್ 15ರ ಬೆಳಿಗ್ಗೆಯಿಂದ ನಾಯಿ ಕಾಣೆಯಾಗಿದೆ.

ಇದನ್ನೂ ಓದಿ: ಬಿಬಿಎಂಪಿ ಎಡವಟ್ಟು: ಅವೈಜ್ಞಾನಿಕ ಕಾಮಗಾರಿಯಿಂದ ಬಿಳೇಕಹಳ್ಳಿ ಏರಿಯಾ ಜನ ಹೈರಾಣು

ನಾಯಿ ಎಲ್ಲಿ ಹೋಯ್ತು ಅಂತ ತಿಳಿಯಲು ಅನಿಲ್ ಅವರ ಬಳಿ ಪುನೀತಾ ಅವರು ಡಿಸೆಂಬರ್ 14ರ ರಾತ್ರಿ 11 ಗಂಟೆಯಿಂದ 15ರ ಮಧ್ಯಾಹ್ನ 12 ಗಂಟೆವರೆಗಿನ ಸಿಸಿಟಿವಿ ದೃಶ್ಯಾವಳಿ ಕೇಳಿದ್ದಾರೆ. ಆದರೆ, ಅನಿಲ್ ಸಿಸಿಟಿವಿ ದೃಶ್ಯ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ಅನಿಲ್ ಮೇಲೆ ಅನುಮಾನವಿದೆ. ಅವರೇ ನಾಯಿಗೆ ಹಿಂಸಿಸಿ ಬೇರೆ ಕಡೆ ಬಿಟ್ಟು ಬಂದಿದ್ದಾರೆಂದು ದೂರಿನಲ್ಲಿ ದಾಖಲಿಸಿದ್ದಾರೆ.

ಅಲ್ಲದೇ, ಕಾಣೆಯಾದ ನಾಯಿಯ ತಾಯಿ ಕೂಡ ಕಳೆದ ವರ್ಷ ದೀಪಾವಳಿ ಸಂದರ್ಭದಲ್ಲಿ ಇದ್ದಕ್ಕಿದಂತೆ ನಾಪತ್ತೆಯಾಗಿತ್ತು. ಈಗ ಮರಿ ಕೂಡ ಕಾಣೆಯಾಗಿದೆ. ಇನ್ನೂ ಮೂರು ಬೀದಿ ನಾಯಿಗಳಿದ್ದು ಏನಾದರೂ ಆಗುತ್ತೆ ಎಂಬ ಭಯವಿದೆ. ಹೀಗಾಗಿ, ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಪುನೀತಾ ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 am, Tue, 7 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್