AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಹಿಳೆಯರಿಗೆ ಸೇಫ್​ ಅಲ್ಲ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು

ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಹಿಳೆಯರ ಸುರಕ್ಷತೆ ದೊಡ್ಡ ಪ್ರಶ್ನೆಯಾಗಿದೆ. ಇತ್ತೀಚೆಗೆ ಆವಲಹಳ್ಳಿ ಅರಣ್ಯದಲ್ಲಿ ಜಾಗಿಂಗ್ ಮಾಡುತ್ತಿದ್ದ ಮಹಿಳೆಗೆ ಅಪ್ರಾಪ್ತ ಬಾಲಕರು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಘಟನೆಯನ್ನು ಮಹಿಳೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಮಕ್ಕಳ ಪಾಲನೆ, ಅವರಿಗೆ ಸರಿಯಾದ ಸಂಸ್ಕಾರ ಕಲಿಸುವ ಮಹತ್ವವನ್ನು ನೆಟ್ಟಿಗರು ಒತ್ತಿ ಹೇಳಿದ್ದಾರೆ.

ಬೆಂಗಳೂರು ಮಹಿಳೆಯರಿಗೆ ಸೇಫ್​ ಅಲ್ಲ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jan 20, 2026 | 11:56 AM

Share

ಬೆಂಗಳೂರು, ಜ.20: ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ (Bangalore women safety) ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣದಿಂದಲ್ಲೇ ಬೆಂಗಳೂರು ಸೇಫ್​​ ಅಲ್ಲ ಎಂಬ ಅಭಿಪ್ರಾಯಕ್ಕೆ ಹೆಚ್ಚಿನ ಮಹಿಳೆಯರು ಬಂದಿದ್ದಾರೆ. ಇದೀಗ ಮಹಿಳೆಯೊಬ್ಬರು ಬೆಂಗಳೂರಿನ ಬಳಿಯ ಆವಲಹಳ್ಳಿ ಅರಣ್ಯದಲ್ಲಿ ಓಡುತ್ತಿದ್ದಾಗ ಮಕ್ಕಳ ಗುಂಪೊಂದು ಅವರಿಗೆ ಕಿರುಕುಳ ನೀಡಿದ್ದಾರೆ ಎಂದು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಅವರ ಮಾತುಗಳನ್ನು ಕೇಳಲು ಸಾಧ್ಯವಾಗದಷ್ಟು ಕೆಟ್ಟಾಗಿತ್ತು. ಹುಡುಗರಿಗೆ ಏನ್​​ ಕಲಿಸಬೇಕು ಎನ್ನುವುದಕ್ಕಿಂತ, ಹುಡುಗಿಯರು ತಮ್ಮನ್ನು ಮುಚ್ಚಿಕೊಳ್ಳುವುದನ್ನು ಕಲಿಸಬೇಕಾಗಿದೆ ಎಂದು ಇನ್ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡಿದ್ದಾರೆ.

“ಜಾಗಿಂಗ್ ಮುಗಿಸಿ ಮನೆಯ ಕಡೆಗೆ ಹೋಗುವ ವೇಳೆ, 13 ವರ್ಷಕ್ಕಿಂತ ಕಿರಿಯರಾಗಿರುವ ಈ ಬಾಲಕರು, ನನ್ನ ದೇಹದ ಬಗ್ಗೆ ಕಮೆಂಟ್​ ಮಾಡಿದ್ದಾರೆ. ಆರಂಭದಲ್ಲಿ ಅದಕ್ಕೆ ನಾನು ಗಮನ ನೀಡಲಿಲ್ಲ. ನಂತರದಲ್ಲಿ ಅವರ ಮಾತುಗಳು ಅತಿಯಾಗಿತ್ತು. ಈ ಬಗ್ಗೆ ನಾನು ಅವರನ್ನು ಪ್ರಶ್ನೆ ಮಾಡಿದೆ. ನಿಮ್ಮ ಮನೆಯಲ್ಲಿ ಇದನ್ನೇ ಕಲಿಸುವುದ ಎಂದು ಗದರಿದೆ” ಎಂದು ಪೋಸ್ಟ್​​​ನಲ್ಲಿ ಮಹಿಳೆ ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ನೆಟ್ಟಿಗರು ಮಕ್ಕಳಿಗೆ ಹೆತ್ತವರು ಸರಿಯಾದ ವಿಚಾರಗಳನ್ನು ಕಲಿಸಿ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು

ಮೇಡಂ ನೀವು ಆ ಮಕ್ಕಳ ಬಗ್ಗೆ ವಿಡಿಯೋ ಮಾಡಿ ಹಾಕಬೇಕಿತ್ತು. ಆಗಾ ಅವರಿಗೆ ಬುದ್ಧಿ ಬರುತ್ತಿತ್ತು ಎಂದು ಒಬ್ಬರು ಹೇಳಿದ್ದಾರೆ. ಈ ಕಮೆಂಟ್​​ಗೆ ಆ ಮಹಿಳೆ ಕೂಡ ಉತ್ತರಿಸಿದ್ದಾರೆ. ನನಗೂ ಆಸೆ ಇತ್ತು. ಆದರೆ ಆ ಮಕ್ಕಳು ಇನ್ನು ಬೆಳೆಯಬೇಕಿದೆ. ಅವರ ಮುಖ ನೋಡುವಾಗ ಅವರ ಭವಿಷ್ಯ ನನ್ನ ಕಣ್ಮುಂದೆ ಬಂತು ಎಂದು ಹೇಳಿದರು. ನಾನೂ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಿದ್ದೇನೆ. ಇದೊಂದು ಸಮಾಜದ ಪಿಡುಗು ಆಗಿದೆ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ. ನೀವು ಹೇಳಿರುವ ಮಾತು ನಿಜ, ಹುಡುಗರು ಹಾಗೂ ಹುಡುಗಿಯರು ಕಲಿಬೇಕಾಗಿರುವುದು ಇನ್ನೂ ಇದೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ. ಹೆಣ್ಮಕ್ಕಳು ಇಂದಿಗೂ ಇಂತಹ ಪರಿಸ್ಥಿತಿ ಅನುಭವಿಸಬೇಕಲ್ಲ ಎಂಬ ನೋವು ನಮಗಿದೆ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ