AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಹಿಳೆಯರಿಗೆ ಸೇಫ್​ ಅಲ್ಲ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು

ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಹಿಳೆಯರ ಸುರಕ್ಷತೆ ದೊಡ್ಡ ಪ್ರಶ್ನೆಯಾಗಿದೆ. ಇತ್ತೀಚೆಗೆ ಆವಲಹಳ್ಳಿ ಅರಣ್ಯದಲ್ಲಿ ಜಾಗಿಂಗ್ ಮಾಡುತ್ತಿದ್ದ ಮಹಿಳೆಗೆ ಅಪ್ರಾಪ್ತ ಬಾಲಕರು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಘಟನೆಯನ್ನು ಮಹಿಳೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಮಕ್ಕಳ ಪಾಲನೆ, ಅವರಿಗೆ ಸರಿಯಾದ ಸಂಸ್ಕಾರ ಕಲಿಸುವ ಮಹತ್ವವನ್ನು ನೆಟ್ಟಿಗರು ಒತ್ತಿ ಹೇಳಿದ್ದಾರೆ.

ಬೆಂಗಳೂರು ಮಹಿಳೆಯರಿಗೆ ಸೇಫ್​ ಅಲ್ಲ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jan 20, 2026 | 11:56 AM

Share

ಬೆಂಗಳೂರು, ಜ.20: ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ (Bangalore women safety) ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣದಿಂದಲ್ಲೇ ಬೆಂಗಳೂರು ಸೇಫ್​​ ಅಲ್ಲ ಎಂಬ ಅಭಿಪ್ರಾಯಕ್ಕೆ ಹೆಚ್ಚಿನ ಮಹಿಳೆಯರು ಬಂದಿದ್ದಾರೆ. ಇದೀಗ ಮಹಿಳೆಯೊಬ್ಬರು ಬೆಂಗಳೂರಿನ ಬಳಿಯ ಆವಲಹಳ್ಳಿ ಅರಣ್ಯದಲ್ಲಿ ಓಡುತ್ತಿದ್ದಾಗ ಮಕ್ಕಳ ಗುಂಪೊಂದು ಅವರಿಗೆ ಕಿರುಕುಳ ನೀಡಿದ್ದಾರೆ ಎಂದು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಅವರ ಮಾತುಗಳನ್ನು ಕೇಳಲು ಸಾಧ್ಯವಾಗದಷ್ಟು ಕೆಟ್ಟಾಗಿತ್ತು. ಹುಡುಗರಿಗೆ ಏನ್​​ ಕಲಿಸಬೇಕು ಎನ್ನುವುದಕ್ಕಿಂತ, ಹುಡುಗಿಯರು ತಮ್ಮನ್ನು ಮುಚ್ಚಿಕೊಳ್ಳುವುದನ್ನು ಕಲಿಸಬೇಕಾಗಿದೆ ಎಂದು ಇನ್ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡಿದ್ದಾರೆ.

“ಜಾಗಿಂಗ್ ಮುಗಿಸಿ ಮನೆಯ ಕಡೆಗೆ ಹೋಗುವ ವೇಳೆ, 13 ವರ್ಷಕ್ಕಿಂತ ಕಿರಿಯರಾಗಿರುವ ಈ ಬಾಲಕರು, ನನ್ನ ದೇಹದ ಬಗ್ಗೆ ಕಮೆಂಟ್​ ಮಾಡಿದ್ದಾರೆ. ಆರಂಭದಲ್ಲಿ ಅದಕ್ಕೆ ನಾನು ಗಮನ ನೀಡಲಿಲ್ಲ. ನಂತರದಲ್ಲಿ ಅವರ ಮಾತುಗಳು ಅತಿಯಾಗಿತ್ತು. ಈ ಬಗ್ಗೆ ನಾನು ಅವರನ್ನು ಪ್ರಶ್ನೆ ಮಾಡಿದೆ. ನಿಮ್ಮ ಮನೆಯಲ್ಲಿ ಇದನ್ನೇ ಕಲಿಸುವುದ ಎಂದು ಗದರಿದೆ” ಎಂದು ಪೋಸ್ಟ್​​​ನಲ್ಲಿ ಮಹಿಳೆ ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ನೆಟ್ಟಿಗರು ಮಕ್ಕಳಿಗೆ ಹೆತ್ತವರು ಸರಿಯಾದ ವಿಚಾರಗಳನ್ನು ಕಲಿಸಿ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು

ಮೇಡಂ ನೀವು ಆ ಮಕ್ಕಳ ಬಗ್ಗೆ ವಿಡಿಯೋ ಮಾಡಿ ಹಾಕಬೇಕಿತ್ತು. ಆಗಾ ಅವರಿಗೆ ಬುದ್ಧಿ ಬರುತ್ತಿತ್ತು ಎಂದು ಒಬ್ಬರು ಹೇಳಿದ್ದಾರೆ. ಈ ಕಮೆಂಟ್​​ಗೆ ಆ ಮಹಿಳೆ ಕೂಡ ಉತ್ತರಿಸಿದ್ದಾರೆ. ನನಗೂ ಆಸೆ ಇತ್ತು. ಆದರೆ ಆ ಮಕ್ಕಳು ಇನ್ನು ಬೆಳೆಯಬೇಕಿದೆ. ಅವರ ಮುಖ ನೋಡುವಾಗ ಅವರ ಭವಿಷ್ಯ ನನ್ನ ಕಣ್ಮುಂದೆ ಬಂತು ಎಂದು ಹೇಳಿದರು. ನಾನೂ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಿದ್ದೇನೆ. ಇದೊಂದು ಸಮಾಜದ ಪಿಡುಗು ಆಗಿದೆ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ. ನೀವು ಹೇಳಿರುವ ಮಾತು ನಿಜ, ಹುಡುಗರು ಹಾಗೂ ಹುಡುಗಿಯರು ಕಲಿಬೇಕಾಗಿರುವುದು ಇನ್ನೂ ಇದೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ. ಹೆಣ್ಮಕ್ಕಳು ಇಂದಿಗೂ ಇಂತಹ ಪರಿಸ್ಥಿತಿ ಅನುಭವಿಸಬೇಕಲ್ಲ ಎಂಬ ನೋವು ನಮಗಿದೆ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡ

Follow Us
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!