AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಸ್ಟಮರ್ ಕೇರ್​ನಲ್ಲಿ ಪರಿಚಯವಾದ ಯುವತಿಗೆ ಮತ್ತು ಬರಿಸಿ ಯುವಕನಿಂದ ನೀಚ ಕೃತ್ಯ

ಖಾಸಗಿ ಬ್ಯಾಂಕ್​ವೊಂದರಲ್ಲಿ ಕಸ್ಟಮರ್ ಕೇರ್ ಆಗಿ ಕೆಲಸ ಮಾಡುತ್ತಿದ್ದ ಯುವತಿಗೆ ಕ್ರೆಡಿಟ್ ಕಾರ್ಡ್ ಬೇಕು ಎಂದು ಬಂದ ಯುವಕನ ಜೊತೆ ಸ್ನೇಹ ಬೆಳೆದಿತ್ತು. ಕಸ್ಟಮರ್ ಕೇರ್ ಸ್ನೇಹವನ್ನೇ ದುರುಪಯೋಗ ಪಡಿಸಿಕೊಂಡ ಆಂಧ್ರ ಪ್ರದೇಶದ ಕಡಪ ಮೂಲಕ ಆ ಯುವಕ ಮಾಡಬಾರದ್ದನ್ನು ಮಾಡಿ ಈಗ ನಾಪತ್ತೆಯಾಗಿದ್ದಾನೆ.

ಬೆಂಗಳೂರು: ಕಸ್ಟಮರ್ ಕೇರ್​ನಲ್ಲಿ ಪರಿಚಯವಾದ ಯುವತಿಗೆ ಮತ್ತು ಬರಿಸಿ ಯುವಕನಿಂದ ನೀಚ ಕೃತ್ಯ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 09, 2024 | 7:33 AM

Share

ಬೆಂಗಳೂರು, ಡಿಸೆಂಬರ್ 9: ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರ ಪ್ರದೇಶದ ಕಡಪ ಮೂಲದ ಯುವಕ ಇತ್ತೀಚೆಗೆ ಕ್ರೆಡಿಟ್ ಕಾರ್ಡ್ ಮಾಡಿಸಲು ಬ್ಯಾಂಕ್​ವೊಂದಕ್ಕೆ ತೆರಳಿದ್ದ. ಈ ವೇಳೆ ಕಸ್ಟಮರ್ ಕೇರ್ ಆಗಿದ್ದ ಯುವತಿ ಜೊತೆ ಸ್ನೇಹ ಬೆಳೆಸಿದ ಆಸಾಮಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಾಪತ್ತೆಯಾಗಿದ್ದಾನೆ.

ಕಸ್ಟಮರ್ ಕೇರ್ ಯುವತಿ ಮೇಲೆ ದೌರ್ಜನ್ಯ ಎಸಗಿದ ಆಸಾಮಿ ಕಡಪ ಮೂಲದ ಲಕ್ಷ್ಮೀ ರೆಡ್ಡಿ ಎಂಬುದು ಗೊತ್ತಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಯ ವಿವರ

ಲಕ್ಷ್ಮೀ ರೆಡ್ಡಿ 2019 ರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಬೇಕು ಎಂದು ಖಾಸಗಿ ಬ್ಯಾಂಕ್​ಗೆ ತೆರಳಿದ್ದ. ಈ ವೇಳೆ ಬ್ಯಾಂಕ್​ನಲ್ಲಿ ಕಸ್ಟಮರ್ ಕೇರ್ ಆಗಿದ್ದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ಇಬ್ಬರ ನಡುವೆ ಸ್ನೇಹ ಮೂಡಿದೆ. ಇದಾಗಿ ಕೆಲವು ಸಮಯದ ಬಳಿಕ, ತನ್ನ ಅಕ್ಕನ ಹುಟ್ಟುಹಬ್ಬ ಇದೆ ಎಂದು ಯುವತಿಯನ್ನು ಆರ್​ಟಿ ನಗರದ ಹೊಟೇಲ್​ವೊಂದಕ್ಕೆ ಕರೆದಿದ್ದನಂತೆ. ಈ ವೇಳೆ ಜ್ಯೂಸ್​ನಲ್ಲಿ ಮತ್ತು ಬರುವ ಡ್ರಗ್ಸ್ ಹಾಕಿ ಯುವತಿಗೆ ಮತ್ತು ಬರಿಸಿದ್ದಾನೆ. ಅಲ್ಲದೆ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ವಿಡಿಯೋ ಮಾಡಿಟ್ಟು ಬೆದರಿಕೆ ಹಾಕಲು ಮುಂದಾಗಿದ್ದ ಎಂದು ಆರೋಪಿಸಲಾಗಿದೆ.

ಸದ್ಯ ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಆರೋಪಿ ಲಕ್ಷ್ಮೀ ರೆಡ್ಡಿ ವಿಡಿಯೋ ತೋರಿಸಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಜಾತಿ ಹೆಸರಿನಲ್ಲಿ ನಿಂದಿಸಿ ಅವಮಾನ ಎಂದೂ ಆರೋಪಿಸಿರುವ ಯುವತಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ನಾದಿನಿ ಮೇಲೆ ಕಣ್ಣಾಕಿ ಹೆಣವಾದ ಬಾವ: ಮಂಡ್ಯದಲ್ಲೊಂದು ಭಯಾನಕ ಕ್ರೈಂ ಸ್ಟೋರಿ

ಸದ್ಯ ಸಂತ್ರಸ್ತೆ ನೀಡಿದ ದೂರಿನ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಶೋಷಣೆ, ಬೆದರಿಕೆ, ಜಾತಿ ನಿಂದನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಪೊಲೀಸರು ಕೇಸ್ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಲಕ್ಷ್ಮೀ ರೆಡ್ಡಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾನೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ