AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿ, ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಸಿಗ್ತಿಲ್ಲ ಮುಕ್ತಿ

ಬೆಳಿಗ್ಗೆಯಿಂದ ಬಂದ ಮೃತದೇಹಗಳ ಅಂತ್ಯಕ್ರಿಯೆ ತಡರಾತ್ರಿವರೆಗೂ ನಡೆಯುತ್ತಿದೆ. ಹಾಗಾಗಿ ಸಂಜೆ ವೇಳೆ ಬಂದ ಮೃತದೇಹಗಳಿಗೆ ನೋ ಎಂಟ್ರಿ ಎನ್ನಲಾಗುತ್ತಿದೆ. ಚಿತಾಗಾರದ ಸಿಬ್ಬಂದಿಗಳು ಬೇರೆ ಕಡೆ ಹೋಗುವಂತೆಯೂ ಸಂಬಂಧಿಕರಿಗೆ ಸೂಚಿಸುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿ, ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಸಿಗ್ತಿಲ್ಲ ಮುಕ್ತಿ
ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿ, ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಸಿಗ್ತಿಲ್ಲ ಮುಕ್ತಿ
ಸಾಧು ಶ್ರೀನಾಥ್​
|

Updated on: Apr 20, 2021 | 4:55 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಮುಕ್ತಿ ಸಿಗ್ತಿಲ್ಲ. ಬೆಡ್ ಸಮಸ್ಯೆ, ಲಸಿಕೆ ಸಮಸ್ಯೆ, ಚಿತಾಗಾರ ಸಮಸ್ಯೆ ಬಳಿಕ ಈಗ ಆ್ಯಂಬುಲೆನ್ಸ್‌ಗಳ ಸಮಸ್ಯೆ ಸೃಷ್ಟಿಯಾಗಿದೆ.

ಕೊರೊನಾಗೆ ಬಲಿಯಾದವರ ಶವ ಸಾಗಿಸಲು ಪರದಾಡುತ್ತಿರುವ ಸಂಬಂಧಿಕರು ಆ್ಯಂಬುಲೆನ್ಸ್ ಸಿಗದೆ ಹೈರಾಣಗೊಂಡಿದ್ದಾರೆ. ಆ್ಯಂಬುಲೆನ್ಸ್‌ಗಾಗಿ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಉದ್ಭವವಾಗಿದೆ. ಹಣ ಪಾವತಿ ಮಾಡುವುದಾಗಿ ಹೇಳಿದ್ರೂ ಸಿಗುತ್ತಿಲ್ಲ ಎಂದು ಅಳಲು ಸಂಬಂಧಿಕರು ತೋಡಿಕೊಂಡಿದ್ದಾರೆ.

ವೃತ್ತಿಯಲ್ಲಿ ಕೆಎಸ್ ಎಫ್ ಸಿ (ಕರ್ನಾಟಕ ಸ್ಟೇಟ್ ಫೈನಾನಿಶಿಯಲ್ ಕಾರ್ಪೊರೇಷನ್) ಅಧಿಕಾರಿಯಾಗಿರುವ 58 ವರ್ಷದ ಕೆ ಎಚ್ ಬಿ ಕಾಲೋನಿ ನಿವಾಸಿಯೊಬ್ಬರು ಕೊರೊನಾ ಸೋಂಕಿನಿಂದಾಗಿ ಇದೇ ತಿಂಗಳ 14ನೇ ತಾರೀಖು ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಸೊಂಕು ಹಿನ್ನೆಲೆ ಚಿಕಿತ್ಸೆ ನಡೆಯುತ್ತಿತ್ತು.

ಆದ್ರೆ ಇಂದು ಬೆಳಗ್ಗೆ ಅವರು ಮೃತಪಟ್ಟಿದ್ದು, ಬೆಳಿಗ್ಗೆಯಿಂದ ಆ್ಯಂಬುಲೆನ್ಸ್ ಗಾಗಿ ಸಂಬಂಧಿಕರು ಪರದಾಟ ನಡೆಸಿದ್ದಾರೆ. ಅವರ ಕಡೆಯವರು ಇದುವರೆಗೂ ಬರೊಬ್ಬರಿ 25 ಸಾವಿರ ರೂಪಾಯಿ ಕೊಟ್ಟು ಖಾಸಗಿ ಆ್ಯಂಬುಲೆನ್ಸ್ ಬುಕ್ ಮಾಡಿದ್ದಾರೆ. ಕೊನೆಗೂ ಇದೀಗ ಆ್ಯಂಬುಲೆನ್ಸ್ ಸಿಕ್ಕಿದೆ. ಕುಟುಂಬಸ್ಥರು ಈಗ ಸಪ್ತಗಿರಿ ಆಸ್ಪತ್ರೆಯಿಂದ ಸುಮ್ಮನಹಳ್ಳಿ ಚಿತಾಗಾರಕ್ಕೆ ಮೃತದೇಹ ಸಾಗಿಸುತ್ತಿದ್ದಾರೆ.

ಸಂಜೆ ವೇಳೆ ಮೃತಪಟ್ಟ ಸೋಂಕಿತರ ಅಂತ್ಯಕ್ರಿಯೆ ಮರುದಿನವೇ.. ಕೊರೊನಾದಿಂದ ಸಂಜೆ ವೇಳೆ ಮೃತಪಟ್ಟ ಸೋಂಕಿತರ ಅಂತ್ಯಕ್ರಿಯೆ ಮರುದಿನವೇ ಎಂಬಂತಾಗಿದೆ. ಸಂಜೆ ನಂತರ ಚಿತಾಗಾರದ ಬಳಿ ಬಂದ್ರೆ ಜಾಗವೇ ಸಿಗುತ್ತಿಲ್ಲ. ಚಿತಾಗಾರದ ಸುತ್ತಮುತ್ತ ಆ್ಯಂಬುಲೆನ್ಸ್ ಗಳು ಕಾದು ನಿಂತಿವೆ. ಬೆಳಿಗ್ಗೆಯಿಂದ ಬಂದ ಮೃತದೇಹಗಳ ಅಂತ್ಯಕ್ರಿಯೆ ತಡರಾತ್ರಿವರೆಗೂ ನಡೆಯುತ್ತಿದೆ. ಹಾಗಾಗಿ ಸಂಜೆ ವೇಳೆ ಬಂದ ಮೃತದೇಹಗಳಿಗೆ ನೋ ಎಂಟ್ರಿ ಎನ್ನಲಾಗುತ್ತಿದೆ. ಚಿತಾಗಾರದ ಸಿಬ್ಬಂದಿಗಳು ಬೇರೆ ಕಡೆ ಹೋಗುವಂತೆಯೂ ಸಂಬಂಧಿಕರಿಗೆ ಸೂಚಿಸುತ್ತಿದ್ದಾರೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!