AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಹಾರ ನಿರೀಕ್ಷಕ, ಮ್ಯಾನೇಜರ್

ಬೆಂಗಳೂರಿನ ಉತ್ತರಹಳ್ಳಿ ಮತ್ತು ಕೆಂಗೇರಿ ಫುಡ್ ಇನ್ಸ್​ಪೆಕ್ಟರ್ ಶ್ರೀಧರ್ ಮತ್ತು ಮ್ಯಾನೇಜರ್ ಉಮೇಶ್​ ನ್ಯಾಯಬೆಲೆ ಅಂಗಡಿಗೆ ಲೈಸೆನ್ಸ್ ನೀಡಲು 2.50 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 1.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ಸದ್ಯ ಇಬ್ಬರನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.  

1.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಹಾರ ನಿರೀಕ್ಷಕ, ಮ್ಯಾನೇಜರ್
ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು
Jagadisha B
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 12, 2024 | 8:55 PM

Share

ಬೆಂಗಳೂರು, ಫೆಬ್ರವರಿ 12: ₹1.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಆಹಾರ ನಿರೀಕ್ಷಕ ಮತ್ತು ಮ್ಯಾನೇಜರ್ ಲೋಕಾಯುಕ್ತ (Lokayukta Raid) ಬಲೆಗೆ ಬಿದ್ದಿರುವಂತಹ ಘಟನೆ ನಗರದ ಉತ್ತರಹಳ್ಳಿ ಮತ್ತು ಕೆಂಗೇರಿ ಫುಡ್ ನಡೆದಿದೆ. ಫುಡ್​ ಇನ್ಸ್​ಪೆಕ್ಟರ್​ ಶ್ರೀಧರ್​ ಮತ್ತು ಮ್ಯಾನೇಜರ್ ಉಮೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ನ್ಯಾಯಬೆಲೆ ಅಂಡಗಿಗೆ ಲೈಸೆನ್ಸ್ ನೀಡಲು 2.5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಮೊದಲು 1 ಲಕ್ಷ ರೂ. ಲಂಚ ಪಡೆದಿದ್ದ ಫುಡ್ ಇನ್ಸ್​ಪೆಕ್ಟರ್ ಶ್ರೀಧರ್. ಮುಂಗಡವಾಗಿ ಇಂದು 1 ಲಕ್ಷ ರೂ. ಪಡೆಯುತ್ತಿದ್ದಾಗ ಸಿಕ್ಕಿಬಿದಿದ್ದಾರೆ. ಈ ಕುರಿತಾಗಿ ಲೋಕಾಯುಕ್ತಕ್ಕೆ ರಫೀಕ್​ ಎಂಬುವವರು ದೂರು ನೀಡಿದ್ದರು. ಸದ್ಯ ಶ್ರೀಧರ್, ಉಮೇಶ್​ನನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕ ಒನ್ ಸೆಂಟರ್​ನಲ್ಲಿ 250-300 ರೂ. ವಸೂಲಿ ಆರೋಪ: ತಹಶೀಲ್ದಾರ್​ ದಾಳಿ

ಕೋಲಾರ: ಜಿಲ್ಲೆಯ ಕೆಜಿಎಫ್​ನ ನಗರದ ರಾಬರ್ಟ್​ಸನ್​ಪೇಟೆಯ ಕರ್ನಾಟಕ ಒನ್ ಸೆಂಟರ್​ನಲ್ಲಿ 250-300 ರೂ. ವಸೂಲಿ ಆರೋಪ ಕೇಳಿಬಂದ ಹಿನ್ನೆಲೆ ತಹಶೀಲ್ದಾರ್​ ದಾಳಿ ಮಾಡಿದ್ದಾರೆ. ಕೆಜಿಎಫ್ ತಹಶೀಲ್ದಾರ್ ನಾಗವೇಣಿ ನೇತೃತ್ವದಲ್ಲಿ ಕಾರ್ಯಚರಣೆ ಮಾಡಿದ್ದು, ಜನರಿಗೆ ಉಚಿತ ಸೇವೆ ಬದಲು ಹಣ ವಸೂಲಿ ಮಾಡುತ್ತಿದ್ದು ಪತ್ತೆ ಆಗಿದೆ. ಕರ್ನಾಟಕ ಒನ್​ಗೆ ಬೀಗ ಹಾಕಿ ಡಿಸಿಗೆ ವರದಿ ನೀಡಲಾಗಿದೆ.

ಕೋಲಾರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ ತಾಲ್ಲೂಕು ಕಚೇರಿಗೆ ಕೋಲಾರ ಲೋಕಾಯುಕ್ತ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಲೋಕಾಯುಕ್ತ ಎಸ್ಪಿ ಉಮೇಶ್​ ಅವರ ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡ ಬೇಟಿ ನೀಡಿ ಸುಮಾರು ಆರು ಗಂಟೆಗಳ ಕಾಲ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೋಲಾರ ತಾಲೂಕು ಕಚೇರಿ ವಿರುದ್ಧ ಸಾರ್ವಜನಿಕರಿಂದ ಸರಣಿ ದೂರು: ಲೋಕಾಯುಕ್ತ ದಿಢೀರ್ ದಾಳಿ

ಕೋಲಾರ ತಾಲ್ಲೂಕು ಕಚೇರಿಯ ಮೇಲೆ ಮೇಲಿಂದ ಮೇಲೆ ದೂರು ಗಳು ಬಂದ ಹಿನ್ನೆಲೆ, ಜೊತೆಗೆ ತಾಲ್ಲೂಕು ಕಚೇರಿಯಲ್ಲಿ ಹಣ ನೀಡದೆ ಯಾವುದೇ ಕೆಲಸಗಳು ನಡೆಯೋದಿಲ್ಲ ಅನ್ನೋ ಸಾರ್ವಜನಿಕರ ದೂರಿನ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳು ಅನಗತ್ಯವಾಗಿ ಜನರ ಕೆಲಸವನ್ನು ಬಾಕಿ ಉಳಿಸಿಕೊಳ್ಳುವುದು, ಅಥವಾ ಹಣಕ್ಕಾಗಿ ಬೇಡಿಕೆ ಇಡುವ ಕುರಿತು ಪರಿಶೀಲನೆ ಮಾಡಿದ್ದಾರೆ.

ಸೀಜ್ ಆಗಿದ್ದ ಬೈಕ್​ ಪಡೆಯಲು ಲಂಚ: ಸಿಕ್ಕಿಬಿದ್ದ ಅಧಿಕಾರಿಗಳು

ಮಂಡ್ಯ: ಅಪಘಾತದ ವೇಳೆ ಸೀಜ್ ಆಗಿದ್ದ ಎಲೆಕ್ಟ್ರಿಕ್ ಬೈಕ್​ನ್ನು ಠಾಣೆಯಿಂದ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಡ್ಯದ ಸಂಚಾರಿ ಠಾಣೆ ಪೊಲೀಸರು ಎಂಟು ಸಾವಿರ ರೂ. ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಇತ್ತೀಚೆಗೆ ನಡೆದಿತ್ತು.

ಇದನ್ನೂ ಓದಿ: Lokayukta Raid: ಲೋಕಾಯುಕ್ತ ದಾಳಿಗೆ ಬೆಸ್ಕಾಂ ಇಇ ಚನ್ನಕೇಶವ ಶಾಕ್: ಬಿಪಿಯಲ್ಲಿ ಏರುಪೇರು

ಮಂಡ್ಯದ ಸಂಚಾರಿ ಠಾಣೆ ಪೇದೆಗಳಾದ ರಾಜಕುಮಾರ್ ಹಾಗೂ ‌ಮಹದೇವ್​ ಲೋಕಯುಕ್ತ ಬಲೆಗೆ ಬಿದ್ದಿದ್ದು, ಮಂಡ್ಯದ ಸಾದತ್ ಪಾಷ ಎಂಬಾತನಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದು, ಮಂಡ್ಯ ಎಸ್ ಪಿ ಸಜೀತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು