AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಸ್ಕ್ವೇರ್ ಮಾಲ್​ಗೆ ಮತ್ತೆ ಬೀಗ ಹಾಕಲಾಗಿದೆ. 51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಮಂತ್ರಿ ಸ್ಕ್ವೇರ್ ಮಾಲ್​ನ ಪ್ರಮುಖ ದ್ವಾರಕ್ಕೆ ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್​ರಿಂದ ಲಾಕ್​ ಮಾಡಲಾಗಿದೆ

51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ
ಮಂತ್ರಿ ಮಾಲ್ (ಸಂಗ್ರಹ ಚಿತ್ರ)
Vinayak Hanamant Gurav
| Edited By: |

Updated on:Dec 27, 2023 | 8:00 PM

Share

ಬೆಂಗಳೂರು, ಡಿಸೆಂಬರ್​ 27: ನಗರದ ಪ್ರತಿಷ್ಠಿತ ಮಂತ್ರಿ ಸ್ಕ್ವೇರ್ ಮಾಲ್ (Mantri Square Mall) ​ಗೆ ಮತ್ತೆ ಬೀಗ ಹಾಕಲಾಗಿದೆ. 51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಮಂತ್ರಿ ಸ್ಕ್ವೇರ್ ಮಾಲ್​ನ ಪ್ರಮುಖ ದ್ವಾರಕ್ಕೆ ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್​ರಿಂದ ಲಾಕ್​ ಮಾಡಲಾಗಿದೆ. 2019-20ರವರೆಗಿನ ತೆರಿಗೆ ಬಾಕಿಯಿದ್ದ ಹಿನ್ನೆಲೆ ಬೀಗ ಹಾಕಲಾಗಿದೆ.

2020ರ ಆಗಸ್ಟ್​​​ನಲ್ಲೇ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರು ಕೂಡ ಮಾಲ್​ನ ಆಡಳಿತ ಮಂಡಳಿ ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ.

ಇದನ್ನೂ ಓದಿ: Mantri Square Mall: ತೆರಿಗೆ ಪಾವತಿಸದ ಮಂತ್ರಿ ಮಾಲ್​ಗೆ ಶಾಕ್; ಕಚೇರಿ ವಸ್ತುಗಳನ್ನು ಮುಟ್ಟುಗೋಲು ಹಾಕಿ ಬೀಗ ಹಾಕಲಿದೆ ಬಿಬಿಎಂಪಿ

ಈ ಹಿಂದೆ ಮಂತ್ರಿ ಮಾಲ್ ಸುಮಾರು 42,63,40,874 ರೂ. ತೆರಿಗೆ ಬಾಕಿ ಉಳಿಸಿಕೊಂಡಿತ್ತು. ಆ ವೇಳೆ ಮಾಲ್​​ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರೆ ವಸ್ತುಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದರು.

ತೆರಿಗೆ ಪಾವತಿಸದ ವಿಚಾರವಾಗಿ ಮಂತ್ರಿ ಸ್ಕ್ವೇರ್ ಮಾಲ್​​ಗೆ ಬಿಬಿಎಂಪಿ ಬೀಗ ಜಡಿಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಬೀಗ ಹಾಕಲಾಗಿತ್ತು. ಈ ಹಿಂದೆ 2021ರಲ್ಲಿಯೂ ಬಿಬಿಎಂಪಿ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಬಳಿಕ ಮಂತ್ರಿ ಮಾಲ್ ಬೀಗ ಮುದ್ರೆ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ ನೀಡಿತ್ತು.

ಇದನ್ನೂ ಓದಿ: ತಡೆಯಾಜ್ಞೆ ತೋರಿಸಿದ ಮಂತ್ರಿಮಾಲ್; ಚರಾಸ್ತಿಗಳನ್ನು ವಾಪಸ್ ಕಚೇರಿಯಲ್ಲಿ ಇಡುತ್ತಿರುವ ಬಿಬಿಎಂಪಿ

ಮಂತ್ರಿ ಮಾಲ್, ಬಿಬಿಎಂಪಿ ಎರಡೂ ನಿಯಮಗಳನ್ನು ಉಲ್ಲಂಘಿಸಿವೆ. ನಿಗದಿತ ಅವಧಿಯಲ್ಲಿ ಮಂತ್ರಿ ಮಾಲ್ ತೆರಿಗೆ ಪಾವತಿಸಿಲ್ಲ. ಸೀಲ್ ಮಾಡಿ ಬಿಬಿಎಂಪಿಯೂ ನಿಯಮಾವಳಿ ಉಲ್ಲಂಘಿಸಿದೆ ಎಂದು ಹೈಕೋರ್ಟ್ ಹೇಳಿತ್ತು. ತೆರಿಗೆ ಬಾಕಿಯ ಸ್ವಲ್ಪ ಭಾಗವನ್ನು ತಕ್ಷಣ ಪಾವತಿಸುವಂತೆ ಹೈಕೋರ್ಟ್​ನ ಏಕಸದಸ್ಯ ಪೀಠ 2021ರ ಡಿಸೆಂಬರ್​​​ನಲ್ಲಿ ಸೂಚನೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:53 pm, Wed, 27 December 23

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ