AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಮಾನುಷ ಘಟನೆ: 4 ತಿಂಗಳು ಮನೆಯಲ್ಲೇ ನರಳಿದ ಯುವತಿ, ಜೀವಕ್ಕೆ ಕುತ್ತು ತಂದ ಕುಟುಂಬಸ್ಥರು

ಬೆಂಗಳೂರಿನ ಲಗ್ಗೆರೆ ನಗರದಲ್ಲಿ ಅಮಾನುಷ ಘಟನೆಯೊಂದು ಕಂಡುಬಂದಿದೆ. ಡೋಂಗಿ ಬಾಬಾ ಮಾತು ಕೇಳಿ ಯುವತಿಯನ್ನು 4 ತಿಂಗಳು ಕುಟುಂಬಸ್ಥರು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಯುವತಿಯ ರಕ್ಷಣೆ ಮಾಡಿ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಅಮಾನುಷ ಘಟನೆ: 4 ತಿಂಗಳು ಮನೆಯಲ್ಲೇ ನರಳಿದ ಯುವತಿ, ಜೀವಕ್ಕೆ ಕುತ್ತು ತಂದ ಕುಟುಂಬಸ್ಥರು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಯುವತಿ ರಕ್ಷಣೆ
Vinayak Hanamant Gurav
| Edited By: |

Updated on:Dec 21, 2023 | 6:55 PM

Share

ಬೆಂಗಳೂರು, ಡಿಸೆಂಬರ್​ 21: ಡೋಂಗಿ ಬಾಬಾ ಮಾತು ಕೇಳಿ ಯುವತಿಯನ್ನು 4 ತಿಂಗಳು ಕುಟುಂಬಸ್ಥರು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ (torture) ನೀಡಿರುವಂತಹ ಅಮಾನವೀಯ ಘಟನೆ ನಗದರ ಲಗ್ಗೆರೆಯಲ್ಲಿ ನಡೆದಿದೆ. ಸ್ವಂತ ತಮ್ಮನಿಂದಲೇ ಮಮತಾಶ್ರೀ(26) ಗೃಹಬಂಧನಕ್ಕೆ ಒಳಗಾಗಿದ್ದ ಯುವತಿ. ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಯುವತಿಯ ರಕ್ಷಣೆ ಮಾಡಿ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡೋಂಗಿ ಬಾಬಾಗೆ ಮಹಿಳಾ ಸಂಘದವರಿಂದ ಹಿಗ್ಗಾಮುಗ್ಗಾ ಥಳಿಸಲಾಗಿದೆ.

ತೀವ್ರ ಹೊಟ್ಟೆ ನೋವು ತಾಳಲಾರದೇ ಮಮತಾಶ್ರೀ ಕಿರುಚಾಡಿದ್ದಾರೆ. ಈ ವೇಳೆ ಸಹೋದರ ಪ್ರಶಾಂತ್​ ತನ್ನ ಅಕ್ಕನಿಗೆ ಹಲ್ಲೆ ಮಾಡಿದ್ದಾನೆ. ದಯವಿಟ್ಟು ನನ್ನನ್ನು ಕಾಪಾಡಿ ಎಂದು ಪರಿಚಯಸ್ಥರಿಗೆ ಯುವತಿ ಮೆಸೇಜ್​ ಮಾಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮೂರು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ, ಆದರೆ ಈಗ ಪತ್ನಿಗೆ ಚಿತ್ರಹಿಂಸೆ ನೀಡ್ತಿದ್ದಾನಂತೆ

ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಾದೇಹಳ್ಳಿ ನಿವಾಸಿ ಮಮತಾಶ್ರೀ, B.Com ಮುಗಿಸಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಮತಾಶ್ರೀಗೆ 4 ತಿಂಗಳ ಹಿಂದೆಯಷ್ಟೇ ಬ್ಯಾಕ್​ ಪೇನ್ ಶುರುವಾಗಿತ್ತು. ಬಳಿಕ ಯುವತಿ ಕುಟುಂಬಸ್ಥರು ಆಸ್ಪತ್ರೆಗೆ ತೋರಿಸಿದ್ದರು. ಆದರೆ ಗುಣಮುಖವಾಗದ ಹಿನ್ನೆಲೆ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ.

ಬಾಬಾ ಅಬ್ದುಲ್ ಮೊರೆ ಹೋಗಿದ್ದ ಯುವತಿಯ ಸಹೋದರ ಪ್ರಶಾಂತ್, ಮೂರು ತಿಂಗಳಿನಿಂದ ಮಂತ್ರವಾದಿಯ ಮಾತು ಕೇಳಿ ಆಸ್ಪತ್ರೆಗೆ ದಾಖಲಿಸಿರಲಿಲ್ಲ. ಪರಿಣಾಮ ಆರೋಗ್ಯದಲ್ಲಿ ತೀವ್ರ ಸಮಸ್ಯೆಯಾಗಿತ್ತು. 3 ತಿಂಗಳಿನಿಂದ ಅರಿಶಿನ ನೀರು, ನಿಂಬೆ ಹಣ್ಣು ನೀರು ಕುಡಿಸುತ್ತಿದ್ದರು, ಊಟನೇ ನೀಡುತ್ತಿರಲಿಲ್ಲ.

ಇದನ್ನೂ ಓದಿ: ಕನ್ನಡಿಗರ ಪರದಾಟ, ಕಾಫಿನಾಡು ಯುವಕನಿಗೆ ಚಿತ್ರಹಿಂಸೆ -ಕಾಂಬೋಡಿಯಾದಲ್ಲಿ ಚೀನಿ ಆ್ಯಪ್‌ ಕರಾಳ ದಂಧೆ, ವಾಪಸ್ ಭಾರತಕ್ಕೆ ಕಳಿಸಲು ‌13 ಲಕ್ಷಕ್ಕೆ ಡಿಮ್ಯಾಂಡ್

1 ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಿದಾಗ ಕ್ಯಾನ್ಸರ್ ಇರೋದು ದೃಢವಾಗಿತ್ತು. ಚಿಕಿತ್ಸೆ ನೀಡಿದ್ದರೆ ಈವರೆಗೆ ಕ್ಯಾನ್ಸರ್ ನಿವಾರಣೆಯ ಹಂತಕ್ಕೆ ಬರುತ್ತಿತ್ತು. ಆದರೆ ಮಂತ್ರವಾದಿಯ ಮಾತು ಕೇಳಿ, ಚಿಕಿತ್ಸೆ ಕೊಡಿಸದೇ  ತಮ್ಮ ಮತ್ತು ತಾಯಿ ಯುವತಿಯ ಜೀವಕ್ಕೆ ಕುತ್ತು ತಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:52 pm, Thu, 21 December 23

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ