AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಸ್ತಿ ಕೆಲಸ ನೀಡಿದ್ದಕ್ಕೆ ಸಹೋದ್ಯೋಗಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ: ಐವರ ಬಂಧನ

ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಐವರು ಬಂಧಿತರ ಪೈಕಿ ಇಬ್ಬರು ಹಲ್ಲೆಗೊಳಗಾದ ವ್ಯಕ್ತಿಯ ಸಹೋದ್ಯೋಗಿಗಳು ಎಂದು ಹೇಳಲಾಗಿದೆ. ಜಾಸ್ತಿ ಕೆಲಸ ಮತ್ತು ಒತ್ತಡ ನೀಡಿದ್ದಕ್ಕೆ ಆಡಿಟರ್ ಮೇಲೆ ಹಲ್ಲೆ ಮಾಡಲು ಸಹೋದ್ಯೋಗಿಗಳು ಗುಂಡಾಗಳಿಗೆ ಸುಪಾರಿ ನೀಡಿದ್ದರು ಎನ್ನಲಾಗಿದೆ.

ಜಾಸ್ತಿ ಕೆಲಸ ನೀಡಿದ್ದಕ್ಕೆ ಸಹೋದ್ಯೋಗಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ: ಐವರ ಬಂಧನ
ಸಹೋದ್ಯೋಗಿ ಮೇಲೆ ಹಲ್ಲೆ
ಗಂಗಾಧರ​ ಬ. ಸಾಬೋಜಿ
|

Updated on: Apr 06, 2024 | 7:02 PM

Share

ಬೆಂಗಳೂರು, ಏಪ್ರಿಲ್​ 06: ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ (Assault) ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಐವರು ಬಂಧಿತರ ಪೈಕಿ ಇಬ್ಬರು ಹಲ್ಲೆಗೊಳಗಾದ ವ್ಯಕ್ತಿಯ ಸಹೋದ್ಯೋಗಿಗಳು ಎಂದು ಹೇಳಲಾಗಿದೆ. ಮಾರ್ಚ್ 31 ರಂದು ಹೊರ ವರ್ತುಲ ರಸ್ತೆಯ ಕಲ್ಯಾಣ್ ನಗರದ ಬಳಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್​ ಮೂಲಗಳ ಪ್ರಕಾರ, ಜಾಸ್ತಿ ಕೆಲಸ ಮತ್ತು ಒತ್ತಡ ನೀಡಿದ್ದಕ್ಕೆ ಆಡಿಟರ್ ಮೇಲೆ ಹಲ್ಲೆ ಮಾಡಲು ಸಹೋದ್ಯೋಗಿಗಳು ಗುಂಡಾಗಳಿಗೆ ಸುಪಾರಿ ನೀಡಿದ್ದರು ಎನ್ನಲಾಗಿದೆ.

ಉಮಾಶಂಕರ್, ವಿನೇಶ್, ಸಂದೀಪ್ ಮತ್ತು ಇತರೆ ಇಬ್ಬರ ಬಂಧಿತರು. ಹೆರಿಟೇಜ್ ಮಿಲ್ಕ್ ಪ್ರಾಡಕ್ಟ್ ಕಂಪನಿಯಲ್ಲಿ ಆಡಿಟರ್​ ಆಗಿರುವ ಸುರೇಶ್​ ಹಲ್ಲೆಗೊಳಗಾದ ವ್ಯಕ್ತಿ. ಈ ಘಟನೆಯ ವಿಡಿಯೋ ಕಾರೊಂದರಲ್ಲಿ ಅಳವಡಿಸಲಾಗಿದ್ದ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ಓಡಾಡುವ ರಸ್ತೆಯಲ್ಲೆ ದುಷ್ಕರ್ಮಿಗಳ ಗುಂಪೊಂದು ಸುರೇಶ್​ನನ್ನು ಕಬ್ಬಿಣದ ರಾಡ್‌ನಿಂದ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ.

ಹಲ್ಲೆಯ ವಿಡಿಯೋ 

ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಹಲವು ಬಳಕೆದಾರರು ತಮ್ಮ ಅಧಿಕೃತ ಖಾತೆಯನ್ನು ಟ್ಯಾಗ್ ಮಾಡುವ ಮೂಲಕ ಘಟನೆಯನ್ನು ಬೆಂಗಳೂರು ನಗರ ಪೊಲೀಸರ ಗಮನಕ್ಕೆ ತರಲಾಗಿದೆ. ತಕ್ಷಣ ಹೆಣ್ಣೂರು ಠಾಣೆ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಏಪ್ರಿಲ್ 5 ರಂದು ಐವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅವಳಿ ಕೊಲೆ ಕೇಸ್​ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಹಲ್ಲೆಗೊಳಗಾದ ಸುರೇಶ್ ಹೆರಿಟೇಜ್ ಮಿಲ್ಕ್ ಪ್ರಾಡಕ್ಟ್ ಕಂಪನಿಯಲ್ಲಿ ಆಡಿಟರ್ ಆಗಿದ್ದಾರೆ. ಉಮಾಶಂಕರ್ ಮತ್ತು ವಿನೇಶ್ ಕೂಡ ಅವರೊಂದಿಗೆ ಕೆಲಸ ಮಾಡುತ್ತಿದ್ದು, ಹೆಚ್ಚಿನ ಕೆಲಸ ಮತ್ತು ತ್ವರಿತವಾಗಿ ಕೆಲಸ ಮುಗಿಸುವಂತೆ ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ. ಇದರಿಂದ ಹತಾಶರಾದ ಇಬ್ಬರು ಸಹೋದ್ಯೋಗಿಗಳು  ಸುರೇಶ್ ಮೇಲೆ ಹಲ್ಲೆ ನಡೆಸಲು ಗುಂಡಾಗಳಿಗೆ ಸುಪಾರಿ ನೀಡಿದ್ದರು ಎನ್ನಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?